Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ; ಇದೊಂದು ಸ್ತ್ರೀ ವಿರೋಧಿ ಪಠ್ಯಪುಸ್ತಕ – ದಿವ್ಯಪ್ರಭಾ ಚಿಲ್ತಡ್ಕ
    ಸುದ್ದಿ

    ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ; ಇದೊಂದು ಸ್ತ್ರೀ ವಿರೋಧಿ ಪಠ್ಯಪುಸ್ತಕ – ದಿವ್ಯಪ್ರಭಾ ಚಿಲ್ತಡ್ಕ

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಪ್ರಸ್ತುತ ಗೊಂದಲ ಉಂಟಾದ ಪರಿಣಾಮ ನಮ್ಮ ನಾಡು, ನುಡಿ, ಭಾಷೆಗಳಿಗೆ ಉಳಿಗಾಲವಿಲ್ಲದ ಪರಿಸ್ಥಿತಿ ಉಂಟಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರು, ಪೋಷಕರು, ಮಕ್ಕಳು ಎಚ್ಚತ್ತುಕೊಳ್ಳಬೇಕಾಗಿದೆ. ಇದೊಂದು ಸ್ತ್ರೀ ವಿರೋಧಿ ಪಠ್ಯವಾಗಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರ್‌ಎಸ್‌ಎಸ್‌ನ್ನು ಮುಂದಿಟ್ಟುಕೊಂಡು ಆಡಳಿತಕ್ಕೆ ಬಂದ ಬಿಜೆಪಿ ಸರಕಾರಕ್ಕೆ ಅದರದ್ದೇ ಆದ ಅಸ್ತಿತ್ವ, ಸ್ವಂತ ಶಕ್ತಿ, ಸ್ಪಷ್ಟ ನಿಲುವು, ಸಾಧನೆ ಇಲ್ಲ. ಇದರಿಂದ ಬಿಜೆಪಿಯ ನೈತಿಕತೆ, ಬುದ್ಧಿವಂತಿಕೆ ಏನೆಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.

    ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ, ಕೆಟ್ಟ ಶಬ್ದಗಳಿಂದ ಗಲಾಟೆ ಮಾಡುತ್ತಿದ್ದ, ನಾಡಿನ ಖ್ಯಾತ ಸಾಹಿತಿ ಕುವೆಂಪುರವರು ರಚಿಸಿದ ನಾಡಗೀತೆಯನ್ನು ವಿರೂಪುಗೊಳಿಸಿದ ರೋಹಿತ್ ಚಕ್ರತೀರ್ಥನನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದು ದುರಾದೃಷ್ಟಕರ. ಪಠ್ಯ ಪರಿಷ್ಕರಣೆ ವೇಳೆ ಸ್ತ್ರಿ ಲೇಖಕರ ಒಂದೇ ಒಂದು ಪಾಠಗಳಾಗಲಿ, ಗದ್ಯಗಳಾಗಲಿ ಸೇರಿಸದೇ ಇದ್ದು, ಬಿಜೆಪಿಗೆ ಯಾಕೆ ಮಹಿಳೆಯರ ಬಗ್ಗೆ ಇಷ್ಟೊಂದು ತಾತ್ಸಾರ ಎಂದು ಪ್ರಶ್ನಿಸಿದ ಅವರು, ಇದು ಮಹಿಳೆಯರಿಗೆ ಮಾಡಿದ ದೊಡ್ಡ ಅವಮಾನ. ಅಲ್ಲದೆ ಹಿಂದುತ್ವದ ಕುರಿತು ಮಾತನಾಡುವ ಬಿಜೆಪಿ ಸರಕಾರದ ನಾರಾಯಣ ಗುರುಗಳ, ಕುವೆಂಪುರವರ ಕುರಿತು ಪಠ್ಯದಲ್ಲಿ ಯಾಕೆ ಸೇರಿಸಿಲ್ಲ. ಅವರು ಹಿಂದೂಗಳಲ್ಲವೇ ಎಂದು ಪ್ರಶ್ನಿಸಿದ ಅವರು, ಕುಬೇರೆ ರಾಜ್ಯದಲ್ಲಿ ಇಲ್ಲದ ಹೊಸ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಯಾಕೆ ಅಳವಡಿಸಿದ್ದು. ಮೋದಿಯವರನ್ನು ಮೆಚ್ಚಿಸಲು ಈ ರೀತಿ ರಾಜ್ಯ ಬಿಜೆಪಿ ಸರಕಾರ ಮಾಡಿದೆ. ಈ ಕುರಿತು ಹೋರಾಟ ಮಾಡಿದವರನ್ನು ಜೈಲಿಗೆ ಅಟ್ಟುವ ಕೆಲಸ ಮಾಡುವ ಮೂಲಕ ಹೀನ ರಾಜಕೀಯಕ್ಕಿಳಿದಿದೆ ಎಂದು ಆರೋಪಿಸಿದರು.

    ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಶೈಲಜಾ ಅಮರನಾಥ್ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರಣೆ ಗೊಂದಲದಿಂದ ಲೇಖಕರು, ದಾರ್ಶನಿಕರೇ ಬೀದಿಗಿಳಿಯುವ ಪರಿಸ್ಥಿತಿ ಉಂಟಾಗಿದೆ. ಇದನ್ನು ಸರಕಾರ ಅರ್ಥ ಮಾಡಿಕೊಳ್ಳಬೇಕು. ಪಠ್ಯಪುಸ್ತಕ ಸಮಿತಿಯಲ್ಲಿ ಒಬ್ಬನೇ ಒಬ್ಬ ಮಹಿಳೆಯನ್ನು ಸೇರಿಸಿಲ್ಲ. ಬದಲಾಗಿ ಯಾವುದೇ ಅರ್ಹತೆ ಇಲ್ಲದ ಚಕ್ರತೀರ್ಥನನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಖಂಡನೀಯ. ಇದು ಪ್ರತಿಯೊಂದು ನಾಗರಿಕರನ ಗಮನಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ ಲೇಖಕರ, ದಾರ್ಶನಿಕರ ಪರ ಧ್ವನಿಯಾಗಿ ನಿಂತಿದೆ ಎಂದು ಹೇಳಿದರು

    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲು ಭಯದಿಂದ ಹಾರ್ದಿಕ್ ಬಿಜೆಪಿಗೆ ಹಾರಿದ್ರಾ?
    Next Article ನಕಲಿ‌ ದಾಖಲೆ ಸೃಷ್ಟಿಸಿ ವಂಚನೆ
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    ಏಪ್ರಿಲ್ 30, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಮೂವರು ಡಿಸಿಎಂ ಇದ್ದರೆ ಪಕ್ಷಕ್ಕೆ ಅನುಕೂಲ | Karnataka
    • Geraldnax ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Geraldnax ರಲ್ಲಿ ಕರೆಂಟ್ ಕಳ್ಳತನ ‌ಮಾಡಿದ ಕುಮಾರಸ್ವಾಮಿ | Kumaraswamy
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe