ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಆಸ್ತಿ ಗಳಿಕೆ‌‌ ಪ್ರಕರಣ: ಸಂಕಷ್ಟಕ್ಕೆ ಸಿಲುಕಿದ ಡಿ.ಕೆ.ಶಿವಕುಮಾರ್ | DK Shivakumar
    Trending

    ಅಕ್ರಮ ಆಸ್ತಿ ಗಳಿಕೆ‌‌ ಪ್ರಕರಣ: ಸಂಕಷ್ಟಕ್ಕೆ ಸಿಲುಕಿದ ಡಿ.ಕೆ.ಶಿವಕುಮಾರ್ | DK Shivakumar

    vartha chakraBy vartha chakraಅಕ್ಟೋಬರ್ 19, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ನಿಗಧಿತ ‌ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಶಿವಕುಮಾರ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ‘ಸಿಬಿಐ ಮೂರು ತಿಂಗಳಲ್ಲಿ ತನ್ನ ತನಿಖೆ ಪೂರ್ಣಗೊಳಿಸಿ, ವಿಚಾರಣಾ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.
    ಈ‌ ಆದೇಶವನ್ನು ಸ್ವಾಗತಿಸುವುದಾಗಿ ಹೇಳಿರುವ ಡಿ.ಕೆ.ಶಿವಕುಮಾರ್ ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

    ಶಿವಕುಮಾರ್ ವಿರುದ್ಧದ ‌ಸಿಬಿಐ ತನಿಖೆಯ ಪ್ರಕರಣದ ಕುರಿತು ಸಿಬಿಐ ಪರ ವಕೀಲರು ಮಾಡಿದ ವಾದವನ್ನು ಮನ್ನಿಸಿರುವ ನ್ಯಾಯಪೀಠ, ಶಿವಕುಮಾರ್ ತನಿಖೆ ರದ್ದುಪಡಿಸುವಂತೆ ತಡವಾಗಿ ಅರ್ಜಿ ಸಲ್ಲಿದ್ದಾರೆ. ಆದರೆ, ತನಿಖೆ ಈಗಾಗಲೇ ಭಾಗಶಃ ಪೂರ್ಣಗೊಂಡಿದೆ. ತನಿಖೆಗೆ ಹಾಜರಾಗಿ ಅವರು ತಮ್ಮ ವಿವರಣೆ ಮತ್ತು ಹೇಳಿಕೆಯನ್ನೂ ದಾಖಲಿಸಿದ್ದಾರೆ. ಇದನ್ನೆಲ್ಲಾ ದಾಖಲಿಸಿಕೊಂಡಿರುವ ತನಿಖಾಧಿಕಾರಿ ಪ್ರಕರಣದ ಪರಿಶೀಲನೆಯನ್ನೂ ನಡೆಸಿದ್ದಾರೆ. ಇಂತಹ ಸಂದರ್ಭದಲ್ಲಿ ನ್ಯಾಯಾಲಯ ತನಿಖೆ ರದ್ದುಪಡಿಸಲು ಆಗದು” ಎಂದು ಅಭಿಪ್ರಾಯಪಟ್ಟಿದೆ.
    ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದರೆ, ಅದನ್ನು ರದ್ದುಪಡಿಸಲು ಅಥವಾ ತಮ್ಮ ಮೇಲಿನ ಆರೋಪಗಳನ್ನು ಕೈ ಬಿಡುವಂತೆ ಕೋರಲು ಶಿವಕುಮಾರ್ ಸ್ವತಂತ್ರರಾಗಿದ್ದಾರೆ’ ಎಂದು ನ್ಯಾಯಪೀಠ ಹೇಳಿದೆ.
    ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು.

    ‘ಈ ನಡುವೆ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು ಅದನ್ನು ರದ್ದುಪಡಿಸಬೇಕು’ ಎಂದು ಕೋರಿ‌ ಶಿವಕುಮಾರ್ 2022ರ ಜುಲೈನಲ್ಲಿ ಹೈಕೋರ್ಟ್ ಗೆ ರಿಟ್ ಅರ್ಜಿ‌ ಸಲ್ಲಿಸಿದ್ದರು.
    ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ 2023ರ ಫೆಬ್ರುವರಿ 10ರಂದು ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿತ್ತು.‌ ಇಲ್ಲಿಯವರೆಗೂ ಈ ತಡೆಯಾಜ್ಞೆಯನ್ನು ವಿಸ್ತರಿಸಿಕೊಂಡು ಬರಲಾಗಿತ್ತು.
    ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದ್ದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು’ ಎಂದು ಕೋರಿ‌‌ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮತ್ತೊಂದು ರಿಟ್ ಅರ್ಜಿಯನ್ನೂ ಇದೇ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಕೆಲ ತಿಂಗಳ ಹಿಂದಷ್ಟೇ ವಜಾ ಮಾಡಿತ್ತು.

    ತನಿಖೆಗೆ ಸಂಪೂರ್ಣ ಸಹಕಾರ:
    ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತನಿಖಾ ಪ್ರಕ್ರಿಯೆಯಲ್ಲಿ ನಾನು ಸಹಕಾರ ನೀಡುತ್ತೇನೆ. ಈ ದೇಶದ ಕಾನೂನನ್ನು ಗೌರವಿಸುತ್ತೇನೆ. ನಾನು ಏನೂ ತಪ್ಪು ಮಾಡಿಲ್ಲ ಎನ್ನುವುದು ನನಗೆ ತಿಳಿದಿದೆ. ನಾನು ಶುದ್ಧವಾಗಿದ್ದೇನೆ. ಇದು ಬಿಜೆಪಿಯ ಸೇಡಿನ ರಾಜಕಾರಣ. ಆದ್ದರಿಂದಲೇ ಸರ್ಕಾರ ತನಿಖೆಗೆ ಆದೇಶಿಸಿತ್ತು ಎಂದು ಹೇಳಿದರು.
    ಪ್ರಕರಣದಲ್ಲಿ ಶೇಕಡ 90ರಷ್ಟು ತನಿಖೆ ಪೂರ್ಣಗೊಳಿಸಿದ್ದೇವೆ ಎಂದುಸಿಬಿಐ, ನ್ಯಾಯಾಲಯಕ್ಕೆ ಹೇಳಿದೆ. ಆದರೆ, ಒಮ್ಮೆಯೂ ಅವರು ನನ್ನನ್ನು ವಿಚಾರಣೆಗೆ ಕರೆದಿಲ್ಲ ಎಂದು ತಿಳಿಸಿದರು.
    ‘ನನಗೆ ಮತ್ತು ನನ್ನ ಹೆಂಡತಿಗೆ ಸೇರಿದ ಆಸ್ತಿಗಳ ಬಗ್ಗೆ ವಿಚಾರಣೆ ನಡೆಸಬೇಕು, ಆದರೆ ಅವರು ಈವರೆಗೆ ವಿಚಾರಣೆಗೆ ಕರೆದಿಲ್ಲ. ಆದರೂ ಅವರು ಶೇಕಡ 90ರಷ್ಟು ತನಿಖೆ ಪೂರ್ಣಗೊಳಿಸಿದ್ದು ಹೇಗೆ ಎಂದು ನನಗೆ ಅರ್ಥವಾಗುತ್ತಿಲ್ಲ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ, ನಾನು ಕಾನೂನಿನ ಚೌಕಟ್ಟಿನೊಳಗಿದ್ದೇನೆ. ಆ ಚೌಕಟ್ಟಿನೊಳಗೆ ಪ್ರತಿಕ್ರಿಯಿಸುತ್ತೇನೆ. ಬಿಜೆಪಿಯ ಪಿತೂರಿ ಏನೇ ಇರಲಿ, ನ್ಯಾಯಾಲಯವಿದೆ. ನನ್ನ ದಾಖಲೆಗಳ ಮೂಲಕ ಪ್ರತಿಕ್ರಿಯಿಸುತ್ತೇನೆ’ ಎಂದು ಹೇಳಿದರು.

    Verbattle
    Verbattle
    Verbattle
    dk shivakumar m shiva ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleದಾರಿ ಕಾಣದಾದ ಸಿ.ಎಂ. ಇಬ್ರಾಹಿಂ | CM Ibrahim
    Next Article ಕೈಗಾರಿಕೆ ಬೆಳವಣಿಗೆಗೆ ಒತ್ತು, 9 Vision Group ರಚನೆ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • Ttmfuc ರಲ್ಲಿ ಮಂತ್ರಿ ವಿರುದ್ಧ FIR | SS Mallikarjun
    • Danieltak ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.