Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Electionಗೆ ಮುನ್ನವೇ DK ವ್ಯೂಹ ಛಿದ್ರ
    ಸುದ್ದಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    vartha chakraBy vartha chakraಮಾರ್ಚ್ 21, 2023Updated:ಮಾರ್ಚ್ 21, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ರಣತಂತ್ರ ರೂಪಿಸುತ್ತಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ಕೆಲಸ ಸುಲಭವಾಗ ಬೇಕೆಂದರೆ ಜೆಡಿಎಸ್ ಕುದುರೆಗೆ ಲಗಾಮು ಹಾಕಬೇಕು‌ ಎಂದು ವ್ಯೂಹ ರಚಿಸಿದ್ದರು. ಆದರೆ ಈ ವ್ಯೂಹ ಚುನಾವಣೆಯಲ್ಲಿ ಭೇದಿಸುವ ಬದಲಿಗೆ ಚುನಾವಣೆ ವೇಳಾಪಟ್ಟಿ ಪ್ರಕಟಣೆಗೂ ಮುನ್ನವೇ ಛಿದ್ರಗೊಂಡಿದೆ.ಅದು ಹೇಗಂತಿರಾ ಈ ಸ್ಟೋರಿ ನೋಡಿ.
    ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ರಾಜ್ಯದೆಲ್ಲೆಡೆ ಭರಾಟೆ ಪ್ರಚಾರದಲ್ಲಿ ತೊಡಗಿವೆ.
    ಪಂಚರತ್ನ ಯಾತ್ರೆ ಮೂಲಕ ಗಮನ ಸೆಳೆಯುತ್ತಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ, ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಹಳೆ ಮೈಸೂರು ಪ್ರದೇಶದಲ್ಲಿ ಕಾಂಗ್ರೆಸ್ ಗೆ‌ ಪ್ರಬಲ ಎದುರಾಳಿಯಾಗಿರುವ ಜೆಡಿಎಸ್ ಚುನಾವಣೆ ನಂತರ ಯಾವ ನಿಲುವು ಬೇಕಾದರೂ ತಡೆಯಬಹುದು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅನ್ನು ಕಟ್ಟಿ ಹಾಕಲು ಶಿವಕುಮಾರ್ ತಂತ್ರ ರೂಪಿಸುತ್ತಿದ್ದಾರೆ.
    ಜೆಡಿಎಸ್ ಅನ್ನು ‌ಕಟ್ಟಿ ಹಾಕಬೇಕೆಂದರೆ ಆ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಒಂದೇ ಕ್ಷೇತ್ರದಲ್ಲಿ ಹೆಚ್ಚು ಕಾಲ ಕಳೆಯುವಂತೆ ಮಾಡಬೇಕು ಎನ್ನುವುದು ಶಿವಕುಮಾರ್ ಅವರ ಲೆಕ್ಕಾಚಾರ.
    ಕುಮಾರಸ್ವಾಮಿ ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಅದಕ್ಕಾಗಿ ಜೆಡಿಎಸ್ ನ ಭದ್ರಕೋಟೆ ಹಾಗೂ ಅದೃಷ್ಟದ ಕ್ಷೇತ್ರವೆಂದು ಪರಿಗಣಿಸಲ್ಪಟ್ಟಿರುವ ರಾಮನಗರ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುತ್ತಿದ್ದಾರೆ.ಇಲ್ಲಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಪ್ರಬಲ ಪೈಪೋಟಿ ನೀಡಿದರೆ,ಕುಮಾರಸ್ವಾಮಿ ಹೆಚ್ಚಿನ ಸಮಯ ಇಲ್ಲಿಗೆ ಮೀಸಲಿಡುತ್ತಾರೆ ಎಂಬ ಲೆಕ್ಕಾಚಾರದಲ್ಲಿ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಸೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುವ ವ್ಯೂಹ ರಚಿಸಿದ್ದರು.
    ಈ ಹಿನ್ನೆಲೆಯಲ್ಲಿ ಸಂಸದ ಸುರೇಶ್ ಕ್ಷೇತ್ರದಲ್ಲಿ ಪ್ರವಾಸ ಕೂಡಾ ಆರಂಭಿಸಿದ್ದರು.ಇದರಿಂದಾಗಿ ಇದು ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರವೆಂದು ಪರಿಗಣಿಸಲ್ಪಟ್ಟಿತ್ತು.
    ಆದರೆ ಈಗ ಡಿ.ಕೆ.ಸುರೇಶ್ ಇದೀಗ ಏಕಾಏಕಿ ತಾವು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಆದಿ ಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಶ್ರೀಗಳ ಸಲಹೆ ಎನ್ನಲಾಗಿದೆ.
    ಈ ಸಲಹೆ ಕೇಳಿಬಂದ‌ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್ ರಾಜ್ಯ ರಾಜಕಾರಣದ ಬಗ್ಗೆ ನನಗೆ ಆಸಕ್ತಿಯೇ ಇಲ್ಲ. ಈ ಹೊಲಸು ಬಿಜೆಪಿ ಸರ್ಕಾರದ ಆಡಳಿತ ನೋಡಿದ ಮೇಲೆ ಭ್ರಮ ನಿರಾನವಾಗಿದೆ ಎಂದು ಹೇಳಿದರು.
    ಏನಪ್ಪ ಇದು ಇಂತಹ ಹೊಲಸು ವ್ಯವಸ್ಥೆ ಬಂದು ಬಿಟ್ಟಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರು‌ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಕಮಿಷನ್ ಕೊಟ್ಟು ಅನುದಾನ ತರೊದು ನೋಡಿದರೆ ಅಸಹ್ಯ ಅನಿಸುತ್ತದೆ. ಅಡಳಿತ ಪಕ್ಷದ ಶಾಸಕರೆ ಕಮಿಷನ್ ಕೊಡುತ್ತಾರೆ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ನಾನು ಇಲ್ಲಿ ರಾಜಕಾರಣ ಮಾಡಬೇಕು ಅನಿಸುತ್ತದೆಯೇ? ಬೇಡವಾ ನೀವೆ ಹೇಳಿ ಎಂದು ತಿಳಿಸಿದರು.
    ಸುರೇಶ್ ಅವರ ಈ ನಿಲುವಿಗೆ ನಿರ್ಮಲಾನಂದ ಶ್ರೀಗಳ ಸಲಹೆ ಪ್ರಮುಖ ಕಾರಣ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಡಿ.ಕೆ.ಶಿವಕುಮಾರ್ ಅವರು ನಿರ್ಮಲಾನಂದ ಶ್ರೀಗಳ ಜೊತೆ ಮಾತುಕತೆ ನಡೆಸುವ ವೇಳೆ ರಾಮನಗರ ವಿಧಾನಸಭೆ ಚುನಾವಣೆ ವಿಷಯ ಚರ್ಚೆಗೆ ಬಂದಿತ್ತು ಎನ್ನಲಾಗಿದೆ.
    ಈ ವೇಳೆ ತಮಗೆ ಸಮುದಾಯದ ಬೆಂಬಲದ ಅಗತ್ಯವಿದೆ ಈ ಬಾರಿ ಕಾಂಗ್ರೆಸ್ ತಮ್ಮ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದೆ.ಹೀಗಾಗಿ ಸಮುದಾಯದ ಶ್ರೀ ಗಳಾದ ತಾವು ನನಗೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರೆನ್ನಲಾಗಿದೆ.
    ಈ ವೇಳೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದ ಶ್ರೀ ಗಳು ರಾಜಕೀಯವನ್ನು ರಾಜಕೀಯವಾಗಿಯೇ ಎದುರಿಬೇಕು ಇಂತಹ ಸಂದರ್ಭಗಳಲ್ಲಿ ವಯಕ್ತಿಕ ವಿಷಯ ಪ್ರಮುಖವಾಗಬಾರದು.ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ ಇದನ್ನು ವೈಯಕ್ತಿಕವಾಗಿ ಪರಿಗಣಿಸದಂತೆ ಮಾಡಿದ ಮನವಿ ಹಿನ್ನೆಲೆಯಲ್ಲಿ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸದಿರಲು ತೀರ್ಮಾನಿಸಿದರೆನ್ನಲಾಗಿದೆ
    ಈ ಹಿನ್ನೆಲೆಯಲ್ಲಿ ರಾಮನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಹುಸೇನ್‌ ಕಣಕ್ಕಿಳಿಯುವುದು ಖಚಿತವಾದಂತಾಗಿದೆ.

    Election ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಸಿಎಂ ಅಭ್ಯರ್ಥಿ ಯಾರು?
    Next Article ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    3 ಪ್ರತಿಕ್ರಿಯೆಗಳು

    1. uyhq9 on ಜೂನ್ 6, 2025 6:53 ಫೂರ್ವಾಹ್ನ

      cost of cheap clomiphene pills how to get clomiphene price where buy clomiphene price how to get cheap clomid no prescription buying clomiphene without dr prescription where buy clomid without dr prescription cost of generic clomid

      Reply
    2. order flagyl online cheap on ಜೂನ್ 10, 2025 9:13 ಅಪರಾಹ್ನ

      The thoroughness in this break down is noteworthy.

      Reply
    3. 60p31 on ಜೂನ್ 23, 2025 5:05 ಫೂರ್ವಾಹ್ನ

      buy zithromax 500mg without prescription – nebivolol 5mg tablet bystolic 20mg cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • azl1v ರಲ್ಲಿ ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    • EdwardNor ರಲ್ಲಿ ಕುಡಿದು ಮಾಡಿದ ರಂಪಾಟ.
    • RandallcEf ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe