Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ಪೀಡಿತ ಕರ್ನಾಟಕ | Drought In Karnataka
    ರಾಜ್ಯ

    ಬರ ಪೀಡಿತ ಕರ್ನಾಟಕ | Drought In Karnataka

    vartha chakraBy vartha chakraಆಗಷ್ಟ್ 26, 202323 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.25 – ರಾಜ್ಯದಲ್ಲಿ ಈ ಬಾರಿ ಮುಂಗಾರು ಕೈ ಕೊಟ್ಟಿದೆ.
    ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ 130ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದೆ.ಈ ಬಗ್ಗೆ ವಾಸ್ತವಿಕ ಅಧ್ಯಯನದ ಬಳಿಕ ಬರ ಪೀಡಿತ ಪ್ರದೇಶಗಳ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

    ರಾಜ್ಯದ ಮಳೆ-ಬೆಳೆ ಪರಿಸ್ಥಿತಿಯ ಬಗ್ಗೆಇಲಾಖೆಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳ ಮೊದಲ ವಾರದಲ್ಲಿ ಬರ ಪ್ರದೇಶಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
    ಸದ್ಯ ರಾಜ್ಯದಲ್ಲಿ ಶೇ. 79 ರಷ್ಟು ಬಿತ್ತನೆಯಾಗಿದೆ. ಆದರೆ ಮಳೆ ಕೊರತೆಯಿಂದಾಗಿ ಅದು ಒಣಗಿ ಹೋಗುತ್ತಿದ್ದು, ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಗಸ್ಟ್ ತಿಂಗಳಿನಲ್ಲಿ ತಕ್ಷಣವೇ ಮಳೆ ಬಂದರೆ ಶೇ. 50 ರಿಂದ 60 ರಷ್ಟು ಭಾಗ‌ ಉಳಿಸಿಕೊಳ್ಳಬಹುದು. ಆದರೆ, ಹವಾಮಾನ ಮುನ್ಸೂಚನೆ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಅನಿಶ್ಚಿತತೆ ಇದೆ. ಹೀಗಾಗಿ ಬಿತ್ತನೆ ಮಾಡಿದ ಬೆಳೆ ಕೈಗೆ ಬರುವ ನಿರೀಕ್ಷೆಗಳಿಲ್ಲ ಎಂದರು.

    4 ಲಕ್ಷ ಹೆಕ್ಟೇರಿನಲ್ಲಿ ಭತ್ತ ಬಿತ್ತನೆಯ ಕೊರತೆಯಾಗಿದೆ. ಸದ್ಯಕ್ಕೆ ಈವರೆಗಿನ ಮಾಹಿತಿ ಪ್ರಕಾರ ತೊಗರಿ ಎರಡೂವರೆ ಲಕ್ಷ ಹೆಕ್ಟೇರಿನಲ್ಲಿ, ಹೆಸರುಕಾಳು 2.22 ಲಕ್ಷ ಹೆಕ್ಟೇರಿನಲ್ಲಿ, ಹತ್ತಿ 1.43 ಲಕ್ಷ ಹೆಕ್ಟೇರ್, ಶೇಂಗಾ 93 ಸಾವಿರ ಹೆಕ್ಟೇರ್, ಸೂರ್ಯಕಾಂತಿ 71 ಸಾವಿರ ಹೆಕ್ಟೇರಿನಲ್ಲಿ ಬಿತ್ತನೆಯಾಗದೆ ಕೊರತೆಯುಂಟಾಗಿದೆ ಎಂದು ಅಂಕಿಅಂಶಗಳನ್ನು ನೀಡಿದರು.
    ರಾಗಿ, ಭತ್ತ, ಸೂರ್ಯಕಾಂತಿ ಬಿತ್ತನೆಗೆ ಇನ್ನೂ ಸಮಯಾವಕಾಶ ಇದೆ. ರಾಗಿ ಸೆಪ್ಟೆಂಬರ್ 15 ರವರೆಗೂ ಬಿತ್ತನೆ ಮಾಡಬಹುದಾಗಿದ್ದು, ಈವರೆಗಿನ 3.5 ಲಕ್ಷ ಹೆಕ್ಟೇರ್ ಕೊರತೆಯಲ್ಲಿ ಬಹಳಷ್ಟು ಪ್ರದೇಶ ಬಿತ್ತನೆಯಾಗುವ ಅಂದಾಜಿದೆ ಎಂದರು.

    ಬರ ಪೀಡಿತ ಪ್ರದೇಶಗಳ ಘೋಷಣೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಶೇ. 60 ರಷ್ಟು ಮಳೆ ಕೊರತೆಯಾಗಿರಬೇಕು. ಸತತ ಮೂರು ವಾರಗಳ ಕಾಲ ಒಣಹವೆ ಮುಂದುವರೆದಿರಬೇಕು. ಶೇ. 75 ಕ್ಕಿಂತ ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿರುವುದು, ಮಣ್ಣಿನಲ್ಲಿ ಶೇ.50ಕ್ಕಿಂತ ಕಡಿಮೆ ತೇವಾಂಶ ಇರುವುದು, ಜಲಾಶಯಗಳಲ್ಲಿ ನೀರಿನ ಮಟ್ಟ ಆಧರಿಸಿ ಬರ ಘೋಷಣೆ ಮಾಡಬೇಕಿದೆ. ಇದರ ಅಧ್ಯಯನಕ್ಕಾಗಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಮೊದಲ ಸುತ್ತಿನ ಸಭೆ ನಡೆಸಿದೆ ಎಂದು ತಿಳಿಸಿದರು ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಶೇ. 60 ರಷ್ಟು ಮಳೆ ಕೊರತೆಯ ಮಾನದಂಡವನ್ನಷ್ಟೇ ಪರಿಗಣಿಸದೆ ಕ್ಷೇತ್ರ ಮಟ್ಟದಲ್ಲಿ ವಾಸ್ತವಿಕ ಅಧ್ಯಯನದ ಮೂಲಕ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಆಧಾರದ ಮೇಲೆ ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ಜಂಟಿ ಸಮಿತಿ ಪ್ರತಿ ತಾಲೂಕಿನಲ್ಲಿ ಕನಿಷ್ಟ 10 ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವಿಕ ಅಧ್ಯಯನ ನಡೆಸಿ ವರದು ಸಿದ್ಧಪಡಿಸಲಿದೆ. ಅದನ್ನು ಈ ತಿಂಗಳ 30ರೊಳಗಾಗಿ ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಲಾಗುತ್ತಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಉಪಸಮಿತಿ ಸಭೆ ನಡೆಸಿ ಚರ್ಚೆ ನಡೆಸುವ ಮೂಲಕ ಬರ ಪರಿಸ್ಥಿತಿಯನ್ನು ಘೋಷಣೆ ಮಾಡುವುದಾಗಿ ಹೇಳಿದರು.

    ಪ್ರಸಕ್ತ ಮುಂಗಾರಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ಒಣಗಿ ಹೋಗಿರುವುದರಿಂದಬಾಗಲಕೋಟೆ, ಗದಗ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಯ 194 ಗ್ರಾಮ ಪಂಚಾಯಿತಿಗಳಲ್ಲಿ 35,284 ರೈತರಿಗೆ 35.95 ಕೋಟಿ ರೂ. ಬೆಳೆವಿಮೆಯನ್ನು ಜೂನ್ 22 ರ ವೇಳೆಗೆ ಪಾವತಿ ಮಾಡಲಾಗಿದೆ. ದಾಖಲಾತಿಗಳ ಕೊರತೆ ಇರುವ ರೈತರಿಗೂ ವಿಮೆ ಪಾವತಿ ಮಾಡುವುದಾಗಿ ತಿಳಿಸಿದರು.
    ರಾಜ್ಯದಲ್ಲಿ ಪ್ರಧಾನಮಂತ್ರಿ ಪಸಲ್ ಭೀಮಾ ವಿಮೆಗಾಗಿ 16 ಲಕ್ಷ ನೋಂದಣಿಯಾಗಿದೆ. ಕಳೆದ ವರ್ಷ ಮಂಡ್ಯ ಜಿಲ್ಲೆ ಅತೀ ಹೆಚ್ಚು ವಿಮಾ ಸೌಲಭ್ಯವನ್ನು ರೈತರಿಗೆ ದೊರಕಿಸುವ ಮೂಲಕ ಕೇಂದ್ರ ಸರ್ಕಾರದಿಂದ ಪ್ರಶಂಸನಾ ಪತ್ರ ಪಡೆದುಕೊಂಡಿದೆ ಎಂದು ಹೇಳಿದರು.

    Verbattle
    Verbattle
    Verbattle
    drought famine Karnataka News ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ರೋ ಸಾಧನೆಗೆ ಪ್ರಧಾನಿ ಮೋದಿ ರೋಡ್ ಶೋ | Modi
    Next Article ಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    ಫೆಬ್ರವರಿ 2, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Duanepiove ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Jamespiedy ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Jamespiedy ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.