ಬೆಂಗಳೂರು,ಸೆ.17-ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ 36ನೇ ಆರೋಪಿ ಸಿದ್ದರಾಜುನನ್ನು ಬಂಧಿಸಲಾಗಿದೆ.
ಆರೋಪಿಯು ಪಿಎಸ್ಐ ಹಗರಣದಲ್ಲಿ ಮಧ್ಯವರ್ತಿಯಾಗಿರುವುದು ತನಿಖೆಯಲ್ಲಿ ಪತ್ತೆಯಾದ ಬೆನ್ನಲ್ಲೇ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
ಪಿಎಸ್ಐಯಾಗಿ ಆಯ್ಕೆಯಾಗಿದ್ದ ಗಜೇಂದ್ರ, ಮನೋಜ್ಗೆ ಮಧ್ಯವರ್ತಿಯಾಗಿದ್ದ ಸಿದ್ದರಾಜು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಳೆದ ಐದು ತಿಂಗಳಿನಿಂದ ತಲೆಮರೆಸಿಕೊಂಡಿದ್ದರು.
ಹೀಗಾಗಿ ಆರೋಪಿಯ ಲಗ್ಗೆರೆ ನಿವಾಸದ ಬಳಿ ತಮಟೆ ಬಾರಿಸಿ ನೋಟೀಸ್ ಅಂಟಿಸಿದ ಸಿಐಡಿ ಅಧಿಕಾರಿಗಳು ಆರೋಪಿಯ ಕುರಿತು ಮಾಹಿತಿ ನೀಡುವಂತೆ ಪ್ರಚಾರ ಮಾಡಿದ್ದರು. ಕೋರ್ಟ್ನಿಂದ ಆರೋಪಿ ಪತ್ತೆಗೆ ಜಾಮೀನು ರಹಿತ ವಾರೆಂಟ್ ಕೂಡ ತರಲಾಗಿತ್ತು ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಸಿದ್ದರಾಜು ಲಗ್ಗೆರೆ ನಿವಾಸದ ಟಿವಿ, ಫ್ರಿಡ್ಜ್, ಸೋಫಾ, ಕಾರು ಹಾಗೂ ಬೈಕ್ ಸೇರಿ ಚರಾಸ್ತಿ ವಶಕ್ಕೆ ಪಡೆಯಲು ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಿದ್ದರಾಜು ಕೋರ್ಟ್ಗೆ ನೇರವಾಗಿ ಶರಣಾಗಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

