ಬೆಂಗಳೂರು, ಜ. 31: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಮೂಲಕ ಹೊಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ವಲಯದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುವುದಾಗಿ ಕೆಆರ್ ಡಿಎಲ್ ನ ನೂತನ ಅಧ್ಯಕ್ಷ ಹಾಗೂ ಶಾಸಕ ಟಿಡಿ ರಾಜೇಗೌಡ ತಿಳಿಸಿದ್ದಾರೆ.
ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿರುವ ಅವರು ಇಂಧನ ಸಚಿವ ಕೆ.ಜೆ.ಜಾರ್ಜ್ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಇಂಧನ ಸಚಿವರು ನಿಭಾಯಿಸುತ್ತಿದ್ದ ಹೊಣೆಯನ್ನು ನನಗೆ ವಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಾರ್ಜ್ ಅವರ ವಿಶ್ವಾಸಕ್ಕೆ ನಾನು ಋಣಿ. ನನ್ನ ಮೇಲೆ ಅವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ, ಇಂಧನ ಸಚಿವರ ನೇತೃತ್ವದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತೇನೆ ಎಂದು ತಿಳಿಸಿದರು.
ರಾಜೇಗೌಡ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಸಚಿವ ಜಾರ್ಜ್, “ಶೃಂಗೇರಿಯ ಜನಪ್ರಿಯ ಶಾಸಕರಾದ ರಾಜೇಗೌಡ ಅವರು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನವೀಕರಿಸಬಹುದಾದದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಅವರು ಉತ್ತಮ ಸಾಧನೆ ಮಾಡುವ ಭರವಸೆ ಇದೆ,”ಎಂದರು.

ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, “ನವೀಕರಿಸಬಹುದಾದ ಇಂಧನ ವಲಯದಲ್ಲಿ ನಮ್ಮ ರಾಜ್ಯ 4ನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೇರಬೇಕೆಂದು ಇಂಧನ ಸಚಿವರು ನಿರ್ದೇಶಿಸಿದ್ದಾರೆ. ಕ್ರೆಡಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಜೇಗೌಡ ಅವರ ಮುಂದಾಳತ್ವದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ತರುವ ಎಲ್ಲ ಪ್ರಯತ್ನ ಮಾಡುತ್ತೇವೆ,” ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಹಿರಿಯ ಮುಖಂಡರಾದ ಬಿ.ಎಲ್. ಶಂಕರ್ ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


1 ಟಿಪ್ಪಣಿ
Savor the excitement of blackjack battles and baccarat bliss. crown coins casino log in guarantees privacy and top-notch security. Dive into the fun and emerge victorious!