Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Election ಇವರಿಗೆಲ್ಲಾ ಭಾರಿ Demand…!
    ರಾಜಕೀಯ

    Election ಇವರಿಗೆಲ್ಲಾ ಭಾರಿ Demand…!

    vartha chakraBy vartha chakraಏಪ್ರಿಲ್ 13, 2023Updated:ಏಪ್ರಿಲ್ 14, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು- ರಾಜ್ಯ ವಿಧಾನಸಭೆಯ ಚುನಾವಣೆಗೆ ಅಧಿಸೂಚನೆ ಹೊರ ಬಿದ್ದಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
    ಹುರಿಯಾಳುಗಳು ತಮ್ಮ ಬೆಂಬಲಿಗರ ಪಡೆ, ಅಭಿಮಾನಿಗಳು, ಮತ್ತು ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ.
    ಚುನಾವಣಾ ಅಧಿಸೂಚನೆ ಹೊರ ಬೀಳುತ್ತಿದ್ದಂತೆಯೇ ಎಲ್ಲ 224 ಕ್ಷೇತ್ರಗಳಲ್ಲೂ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
    ಚುನಾವಣೆಗೆ ಸ್ಪರ್ಧಿಸ ಬಯಸುವ ಅಭ್ಯರ್ಥಿಗಳು ನಾಮಪತ್ರಗಳನ್ನು ಏಪ್ರಿಲ್ 20ರವರೆಗೂ ಸಲ್ಲಿಸಬಹುದಾಗಿದೆ. ಏಪ್ರಿಲ್ 14 ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಪ್ರಯುಕ್ತ ರಜೆ ಇದೆ, ಹಾಗೆಯೇ 16 ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಈ ಎರಡು ದಿನ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.
    ನಾಮಪತ್ರಗಳ ಪರಿಶೀಲನಾ ಕಾರ್ಯ ಏಪ್ರಿಲ್ 21 ರಂದು ನಡೆಯಲಿದ್ದು, ಏಪ್ರಿಲ್ 24, ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ.

     

    ಈ ನಡುವೆ ನಾಮಪತ್ರ ರಾಜ್ಯದ ಪ್ರಮುಖ ದೇವಾಲಯಗಳು, ಪ್ರಭಾವಿ ಜ್ಯೋತಿಷಿಗಳು, ಲೆಕ್ಕಪರಿಶೋಧಕರು ತುಂಬಾ ಬ್ಯುಸಿಯಾಗಿದ್ದಾರೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಯಾವ ಸಮಯದಲ್ಲಿ ನಾಮಪತ್ರ ಸಲ್ಲಿಸಬೇಕು. ಎಷ್ಟು ಸೆಟ್ ಗಳಲ್ಲಿ ನಾಮಪತ್ರ ಹಾಕಬೇಕು, ನಾಮಪತ್ರಕ್ಕೆ ಸೂಚಕರಾಗಿ ಯಾರ ಹೆಸರು ಹಾಕಿದರೆ ಅದೃಷ್ಟ, ಎಂಬ ವಿಷಯಗಳ ಕುರಿತು ತಲೆ ಕೆಡಿಸಿಕೊಂಡಿದ್ದಾರೆ. ತಮ್ಮ ಜಾತಕ, ಕುಂಡಲಿ ಹಿಡಿದು ಜ್ಯೋತಿಷಿಗಳ ಮನೆ ಬಾಗಿಲು ಕಾಯುತ್ತಿದ್ದಾರೆ.
    ಜ್ಯೋತಿಷಿಗಳು ಕೇವಲ ಅಭ್ಯರ್ಥಿಗಳ ಜಾತಕ ಕುಂಡಲಿ ಮಾತ್ರವಲ್ಲ ಅವರ ಕುಟುಂಬ ಸದಸ್ಯರು, ಮತ್ತು ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕುವವರ ಜಾತಕಗಳ ವಿವರಗಳನ್ನು ಹಿಡಿದು ರಾಶಿ ನಕ್ಷತ್ರ ನೋಡುವ ಕೆಲಸದಲ್ಲಿ ಮಗ್ನರಾಗಿದ್ದಾರೆ.

    ಯಾವ ಅಭ್ಯರ್ಥಿಗೆ ಯಾವ ಸಮಯ ಪ್ರಶಸ್ತಿ ಪ್ರಶಸ್ತವಾಗಿದೆ. ಯಾವ ದಿನದಂದು ನಾಮಪತ್ರ ಸಲ್ಲಿಸಬೇಕು ನಾಮಪತ್ರ ಸಲ್ಲಿಕೆಗೂ ಮುನ್ನ ಯಾವ ಪೂಜೆ, ಪುನಸ್ಕಾರ ಹೋಮ ,ಹವನಗಳನ್ನ ನಡೆಸಬೇಕು ಎಂದು ಮಾರ್ಗದರ್ಶನ ಮಾಡುತ್ತಿದ್ದಾರೆ. ಇದಕ್ಕಾಗಿ ಅಭ್ಯರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ಜ್ಯೋತಿಷಿಗಳ ಮನೆಯ ಮುಂದೆ ಕಾದು ಕುಳಿತಿದ್ದಾರೆ.
    ಕೆಲವು ದೇವಾಲಯಗಳು ಅದೃಷ್ಟದ ಬಾಗಿಲು ತೆರೆಯುತ್ತವೆ ಎಂಬ ನಂಬಿಕೆ ಅನೇಕ ರಾಜಕಾರಣಿಗಳಲ್ಲಿದೆ ಆದರಲ್ಲೂ ಪ್ರಮುಖವಾಗಿ ಕುರುಡುಮಲೆ ಗಣೇಶ, ಬಸವನಗುಡಿಯ ದೊಡ್ಡ ಗಣೇಶ, ಮೈಸೂರಿನ ಚಾಮುಂಡೇಶ್ವರಿ, ಸವದತ್ತಿಯ ಎಲ್ಲಮ್ಮ, ಧರ್ಮಸ್ಥಳದ ಮಂಜುನಾಥ, ಮಲೆ ಮಹದೇಶ್ವರ, ಏಳು ಕೋಟಿ ಮೈಲಾರ, ಕುದ್ರೋಳಿಯ ಈಶ್ವರ, ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ, ಹೀಗೆ ಹಲವಾರು ದೇವಾಲಯ ಬಂದೇನವಾಸ್ ತವಕಲ್ ಮಸ್ತಾನ್, ಉಳ್ಳಾಲ, ಮುಳಬಾಗಿಲು ದರ್ಗಾ ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ದೇವರಿಂದ ಪ್ರಸಾದ ರೂಪದಲ್ಲಿ ಅನುಗ್ರಹ ಪಡೆಯಲು ಪ್ರಯತ್ನಿಸುತ್ತಿದ್ದಾರೆ.ಹೀಗಾಗಿ ರಾಜ್ಯದ ಪ್ರಮುಖ ದೇವಾಲಯಗಳು ರಾಜಕಾರಣಿಗಳು ಮತ್ತು ಅವರ ಕುಟುಂಬ ಸದಸ್ಯರಿಂದ ತುಂಬಿ ತುಳುಕುತ್ತಿದೆ .

     

    ಇವರೊಂದಿಗೆ ಅವರ ಅಭಿಮಾನಿಗಳು, ಮತ್ತು ಬೆಂಬಲಿಗರು ಕೂಡ ವಿಶೇಷ ಪೂಜೆ ಪುನಸ್ಕಾರಗಳಲ್ಲಿ ನಿರತವಾಗಿದ್ದು ಪ್ರಾರ್ಥನಾ ಮಂದಿರ, ದರ್ಗಾ, ದೇವಾಲಯಗಳಂತೂ ಅತ್ಯಂತ ಬಿರುಸಿನ ಚಟುವಟಿಕೆಗಳ ತಾಣವಾಗಿ ಪರಿಣಮಿಸಿವೆ.
    ಮತ್ತೊಂದೆಡೆ ರಾಜ್ಯದ ಬಹುತೇಕ ಎಲ್ಲಾ ಆಂತರಿಕ ಲೆಕ್ಕ ಪರಿಶೋಧಕರುಗಳ ಕಚೇರಿಗಳು ಕೂಡ ಬಿರುಸಿನ ಚಟುವಟಿಕೆಯ ಕೇಂದ್ರಗಳಾಗಿವೆ. ಅಭ್ಯರ್ಥಿಗಳು ತಮ್ಮ ನಾಮಪತ್ರದ ಜೊತೆಗೆ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆದಾಯ ವಿವರಗಳು, ತಮ್ಮ ವಿರುದ್ಧ ಬರುವ ಪ್ರಕರಣಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಅಲ್ಲದೆ ಚುನಾವಣೆ ಮುಗಿಯುವವರೆಗೆ ಪ್ರತಿನಿತ್ಯ ತಾವು ಮತ್ತು ತಮ್ಮ ಪರವಾಗಿ ಬೆಂಬಲಿಗರು ಅಭಿಮಾನಿಗಳು ಕುಟುಂಬ ಸದಸ್ಯರು ಮಾಡುವ ಖರ್ಚು ವೆಚ್ಚದ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಹೀಗಾಗಿ ,ಲೆಕ್ಕ ಪರಿಶೋಧಕರು ಪ್ರತಿನಿತ್ಯ ಗುರುವಾರಗಳನ್ನು ಸಿದ್ಧಪಡಿಸಿ ಕೊಡಬೇಕಾಗುತ್ತದೆ ಹೀಗಾಗಿ ಲೆಕ್ಕ ಪರಿಶೋಧಕರ ಕಚೇರಿಗಳಂತೂ ಬಿರುಸಿನ ಚಟುವಟಿಕೆಗಳ ತಾಣವಾಗಿ ಪರಿಣಮಿಸಿವೆ.

    ಇನ್ನು ಅಭ್ಯರ್ಥಿಗಳ ಪರವಾಗಿ ಪ್ರತಿನಿತ್ಯದ ಪ್ರಚಾರದಲ್ಲಿ ಪಾಲ್ಗೊಳ್ಳಲು ಹಲವಾರು ಮಂದಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ, ಕೂಡ ಭಾರೀ ಬೇಡಿಕೆ ಬಂದಿದೆ. ರಾಜ್ಯದ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಹೋಟೆಲ್ ಗಳು ಬಾರ್ ಮತ್ತು ಮಧ್ಯದ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಭರಾಟೆಯಿಂದ ನಡೆಯುತ್ತಿದೆ.

    Verbattle
    Verbattle
    Verbattle
    Election m ಚುನಾವಣೆ ಧರ್ಮ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಂಡಾಯದ ಧಗೆಯಲ್ಲಿ ಬಸವಳಿದ BJP
    Next Article Venu Srinivasanಗೆ ಶ್ರೇಷ್ಠ ಸಂಸ್ಥೆ ನಿರ್ಮಾತೃ ಪ್ರಶಸ್ತಿ | TVS | Venu Srinivasan
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • king_tbEi ರಲ್ಲಿ ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    • Glennhof ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • LinwoodGah ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.