Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population
    ರಾಜ್ಯ

    ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population

    vartha chakraBy vartha chakraಆಗಷ್ಟ್ 9, 2023ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.9: ರಾಜ್ಯದ ಆನೆಗಳ ಸಂಖ್ಯೆಯಲ್ಲಿ ಸುಮಾರು 350ರಷ್ಟು ಹೆಚ್ಚಳವಾಗಿದ್ದು, ಆನೆಗಳ ಶ್ರೇಣಿ 5914ರಿಂದ 6877 ಎಂದು ವಿಶ್ಲೇಷಿಸಲಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು, ಈಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂಬ ಮಾಹಿತಿ ಇದೆ.ಈ ಮೂಲಕ ಇವುಗಳ ಸಂಖ್ಯೆ ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.
    ಆನೆಗಳು ಬಲಿಷ್ಠ ವನ್ಯಜೀವಿಯಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ ಬದುಕಲು ಅವುಗಳ ಆವಾಸಸ್ಥಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 2012 ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

    ಆನೆಗಳ ದಿನದಂದು ದೇಶದಲ್ಲಿ ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ ಅಥವಾ ಇಳಿಮುಖವಾಗಿದೆಯೇ ಎಂದು ತಿಳಿಯಲು ಆನೆಗಳ ಗಣತಿಯನ್ನು ಪ್ರತೀ ಐದು ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಈ ಹಿಂದೆ ಆನೆ ಗಣತಿ 2017 ರಲ್ಲಿ ನಡೆದಿತ್ತು.
    ಬಳಿಕ 2022ರಲ್ಲಿ ಆನೆ ಗಣತಿಯನ್ನು ಅಖಿಲ ಭಾರತ ಹುಲಿ ಗಣತಿಯ ಭಾಗವಾಗಿ ಮಾಡಲು ಪ್ರಯತ್ನಿಸಲಾಯಿತು. ಆದರೆ ಈ ಸಮೀಕ್ಷೆಯು ಮಾದರಿ ಬ್ಲಾಕ್‌ ಏಣಿಕೆ (Sample Block Count) ಮತ್ತು ಆನೆಗಳ ಸಂಖ್ಯೆ ಸ್ವರೂಪದ (Population Structure) ಮೌಲ್ಯ ಮಾಪನವನ್ನು ಒಳಗೊಂಡಿರಲಿಲ್ಲ. ಈ ವಿಧಾನ ಆನೆಗಳ ಗಣತಿ ಮತ್ತು ಸಂಖ್ಯಾ ಸ್ವರೂಪ ಅಂದರೆ ಲಿಂಗ ಮತ್ತು ವಯಸ್ಸಿನ ವರ್ಗೀಕರಣ ಮಾಡಲು ಬಹಳ ಮುಖ್ಯವಾಗಿರುತ್ತದೆ.

    ಕರ್ನಾಟಕ, ಕೇರಳ ಮತ್ತು ತಮಿಳುನಾಡು ಈ ಮೂರು ರಾಜ್ಯಗಳ ಮುಂದಾಳತ್ವದೊಂದಿಗೆ 2023ರ ಮೇ-17 ರಿಂದ ಮೇ-19 ರವರೆಗೆ ಏಕಕಾಲದಲ್ಲಿ ಆನೆಗಳ ಗಣತಿ ನಡೆಸಲಾಯಿತು. ಅದೇ ದಿನಾಂಕದಂದು ಆಂಧ್ರ ಪ್ರದೇಶದಲ್ಲೂ ಸಹ ಇದೇ ರೀತಿಯ ಗಣತಿ ಕಾರ್ಯವನ್ನು ನಡೆಸಲಾಯಿತು ಎಂದು ವಿವರಿಸಿದರು.
    ಈ ಗಣತಿಯ ಸ್ವರೂಪ, ಕ್ಷೇತ್ರ ಸಿಬ್ಬಂದಿಗೆ ತರಬೇತಿ, ಗಣತಿ ಫಲಿತಾಂಶಗಳ ವಿಶ್ಲೇಷಣೆ ಹಾಗೂ ವರದಿ ತಯಾರಿಕೆಯಲ್ಲಿ ಪ್ರೊ|| ಆರ್‌. ಸುಕುಮಾರ್‌ ರವರ ನೇತೃತ್ವದ ಭಾರತೀಯ ವಿಜ್ಞಾನ ಸಂಸ್ಥೆಯ (IISC) ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆಯು ಆನೆಗಳ ಗಣತಿಯನ್ನು ನಡೆಸಲಾಗಿದೆ.
    ರಾಜ್ಯದ 32 ವಿಭಾಗಗಳಿಂದ 3400 ಕ್ಕೂ ಹೆಚ್ಚು ಸಿಬ್ಬಂದಿ ಈ ಆನೆಗಳ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು.
    ಆನೆ ಗಣತಿಯನ್ನು ಮೂರು ವಿಧಾನಗಳಲ್ಲಿ ಅಂದರೆ, ನೇರ ಏಣಿಕೆ ಅಥವಾ ಬ್ಲಾಕ್‌ ಏಣಿಕೆ (ಮೇ-17, 2023) (Direct Count):- ಈ ವಿಧಾನದಲ್ಲಿ 5.0 ಚದರ ಕಿ.ಮೀ ವ್ಯಾಪ್ತಿಯ ವಿವಿಧ ಮಾದರಿ ಬ್ಲಾಕ್‌ ಗಳಲ್ಲಿ ಆನೆಗಳ ನೇರ ಏಣಿಕೆಯನ್ನು ನಡೆಸಲಾಯಿತು ಮತ್ತು ಒಟ್ಟು ಬೀಟ್‌ ಗಳ ಸಂಖ್ಯೆಯ ಸುಮಾರು ಶೇಕಡ 30 ರಿಂದ 50 ರಷ್ಟು ಒಳಗೊಂಡಿತ್ತು. ಟ್ರಾಂಜೆಕ್ಟ್‌ ಸಮೀಕ್ಷೆ ಅಥವಾ ಲದ್ದಿ ಏಣಿಕೆ ವಿಧಾನ (ಮೇ-18, 2023) (Dung Count):- ಈ ವಿಧಾನದಲ್ಲಿ 2 ಕಿ.ಮೀ ಉದ್ದದ ಟ್ರಾಂಜಾಕ್ಟ್‌ ರೇಖೆಗಳಲ್ಲಿ ಸಮೀಕ್ಷೆ ನಡೆಸಿ, ಆನೆಗಳ ಲದ್ದಿ ರಾಶಿಗಳ ಸಂಖ್ಯೆಯನ್ನು ಏಣಿಸಲಾಯಿತು. ಈ ಅಂಕಿ ಅಂಶದ ಮಾದರಿಗಳ ಮೂಲಕ ಆನೆಗಳ ಸಂಖ್ಯೆಯ ಮಾಹಿತಿ ಪಡೆಯಲು ಸದರಿ ದತ್ತಾಂಶವನ್ನು ಸಂಸ್ಕರಿಸಲಾಗುತ್ತಿದೆ ಮತ್ತು ಸಧ್ಯದಲ್ಲೆ ಫಲಿತಾಂಶ ದೊರೆಯಲಿದೆ. ವಾಟರ್‌ ಹೋಲ್‌ ಏಣಿಕೆ (ಮೇ-19, 2023) (Waterhole Count):- ಆನೆಗಳು ನಿಯಮಿತವಾಗಿ ಭೇಟಿ ನೀಡುವ ವಾಟರ್‌ ಹೋಲ್‌ ಗಳು ಮತ್ತು ಇತರೆ ಸ್ಥಳಗಳಲ್ಲಿ ಆನೆಗಳನ್ನು ನೇರವಾಗಿ ನೋಡಿ ಏಣಿಸುವ ಕಾರ್ಯ ನಡೆಸಲಾಯಿತು. ಈ ವಿಧಾನದಲ್ಲಿ ಆನೆಗಳ ಚಲನವಲನ, ವಯಸ್ಸಿನ ವರ್ಗಗಳು, ಗಂಡು ಹೆಣ್ಣು ಅನುಪಾತ ಇತ್ಯಾದಿಗಳನ್ನು ದಾಖಲಿಸಲಾಗಿದೆ ಎಂದರು.

    ರಾಜ್ಯದ 32 ವಿಭಾಗಗಳಲ್ಲಿ ಆನೆಗಳ ಗಣತಿ ಕಾರ್ಯವನ್ನು ನಡೆಸಲಾಗಿದ್ದು, ಈ ಸಮೀಕ್ಷೆಯಲ್ಲಿ 23 ವಿಭಾಗಗಳಲ್ಲಿ ಆನೆಗಳು ಕಂಡುಬಂದಿವೆ. ಸಮೀಕ್ಷೆಯ ದಿನದಂದು ನೇರವಾಗಿ ಏಣಿಸಿದ ಒಟ್ಟು ಆನೆಗಳ ಸಂಖ್ಯೆ-2219 ಆಗಿತ್ತು. ಈ 23 ವಿಭಾಗಗಳಲ್ಲಿ ಇರುವ 18975 ಚದರ ಕಿ.ಮೀ ಪ್ರದೇಶದ ಪೈಕಿ 6104 ಚದರ ಕಿ.ಮೀ ಪ್ರದೇಶದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಯಿತು.
    ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರದೇಶವನ್ನು ಸಮೀಕ್ಷೆಗೆ ಒಳಪಡಿಸಿರುವುದರಿಂದ ಈ ಸಮೀಕ್ಷೆ ಮತ್ತು ವರದಿಯು ಹೆಚ್ಚು ನಿಖರ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಮಾಹಿತಿ ನೀಡಿದರು.
    ಆನೆ ವರದಿ ಬಿಡುಗಡೆ ಸಂದರ್ಭದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದೇ ಅಖ್ತರ್, ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಸುಭಾಶ್ ಮಾಲ್ಕೇಡೆ, ಕುಮಾರ್ ಪುಶ್ಕರ್, ಸಂಜಯ್ ಬಿಜ್ಜೂರ್, ಸ್ಮಿತಾ ಬಿಜ್ಜೂರ್ ಮತ್ತಿತರರು ಪಾಲ್ಗೊಂಡಿದ್ದರು

    elephant Elephant Population elephants in karnataka karnataka wildlife m tuskers
    Share. Facebook Twitter Pinterest LinkedIn Tumblr Email WhatsApp
    Previous Articleಫ್ಲೆಕ್ಸ್ ಹಾಕಿದರೆ ಜೋಕೆ…? | Flex Banners
    Next Article ಇವರಿಗೆ ಮಾತ್ರ ನಿಗಮ-ಮಂಡಳಿಗೆ ನೇಮಕ | Karnataka
    vartha chakra
    • Website

    Related Posts

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasphype ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • Michaelcandy ರಲ್ಲಿ ಟೀಮ್ ಇಂಡಿಯಾದ ಬೌಲರ್ ಈಗ DSP ಅಧಿಕಾರಿ
    • Thomasphype ರಲ್ಲಿ ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe