Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    ರಾಷ್ಟ್ರೀಯ

    ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ

    vartha chakraBy vartha chakraFebruary 6, 2023Updated:March 20, 20235 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.6-

    ಭಾರತ ಇಂಧನ ಕ್ಷೇತ್ರ (Energy Sector) ದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಇಲ್ಲಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ಉದ್ಯಮಿಗಳು ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಲು ಮುಂದೆ ಬರಬೇಕೆಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ನೀಡಿದರು. ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (International Exhibition Centre) ದಲ್ಲಿ ಆರಂಭವಾದ ಭಾರತೀಯ ಇಂಧನ ಸಪ್ತಾಹ (India Energy Week) ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತದಲ್ಲಿ ಹೂಡಿಕೆಗೆ ಮುಕ್ತ ಅವಕಾಶಗಳಿವೆ’ ಎಂದು ಹೇಳಿದರು. ‘ಈವರೆಗೂ ನಿರ್ಬಂಧಿತವಾಗಿದ್ದ ಹತ್ತು ಲಕ್ಷ ಚದರ ಕಿಲೋಮೀಟರ್ ಪ್ರದೇಶವನ್ನು ಹೂಡಿಕೆ ಚಟುವಟಿಕೆಗಳಿಗೆ ಮುಕ್ತಗೊಳಿಸಲಾಗಿದೆ. ಹಸಿರು ಇಂಧನ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಹೂಡಿಕೆದಾರರು ಈ ಅವಕಾಶಗಳನ್ನು ಬಳಸಿಕೊಳ್ಳಬೇಕು’ ಎಂದರು.

    ‘ದೇಶದಲ್ಲಿ ಈಗ ಸ್ಥಿರವಾದ ಸರ್ಕಾರ ಇದೆ. ಗಟ್ಟಿಯಾದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಕೆಳಸ್ತರದ ಜನರ ಜೀವನಮಟ್ಟ ಸುಧಾರಣೆಗೆ ಪೂರಕವಾಗಿ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ದೇಶವು ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿದೆ’ ಎಂದು  ಹೇಳಿದರು. ಮುಂದಿನ ದಿನಗಳಲ್ಲಿ ಎಲ್ ಪಿ ಜಿ (LPG) ಬೇಡಿಕೆ ಶೇಕಡ 600ರಷ್ಟು ಹೆಚ್ಚಲಿದೆ. ಅದಕ್ಕೆ ಪ್ರತಿಯಾಗಿ ಇಂಧನ ಮೂಲಗಳ ಶೋಧ ಮತ್ತು ಉತ್ಪಾದನೆ ಹೆಚ್ಚಿಸಬೇಕಿದೆ. ಹೂಡಿಕೆದಾರರು ಈ ಕ್ಷೇತ್ರದಲ್ಲಿ ಹೂಡಿಕೆಗೆ ಯೋಚಿಸಬೇಕು ಎಂದರು. ತಮ್ಮ 30 ನಿಮಿಷಗಳ ಭಾಷಣದಲ್ಲಿ ಇಂಧನ ಕ್ಷೇತ್ರ, ಮಾಹಿತಿ ಮತ್ತು ತಂತ್ರಜ್ಞಾನ ಸೇರಿದಂತೆ ಭಾರತ ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಯಶೋಗಾಥೆಯನ್ನು ಉದ್ದಿಮೆದಾರರ ಮುಂದಿಟ್ಟ ಅವರು ‘ವಿದ್ಯುತ್ ಪೂರೈಕೆಯಲ್ಲಿ ಸಮಗ್ರ ಸುಧಾರಣೆ ತರುವುದಕ್ಕಾಗಿ ಒಂದು ದೇಶ – ಒಂದು ವಿತರಣಾ ಜಾಲ ಯೋಜನೆಯನ್ನು ರೂಪಿಸಲಾಗಿದೆ. ಅದಕ್ಕಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿ‌ನ ಒತ್ತು ನೀಡಲಾಗಿದೆ’ ಎಂದರು.

    ‘ನಮ್ಮ ಪೆಟ್ರೋಲಿಯಂ ಸಂಸ್ಕರಣಾಗಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸುತ್ತಿದ್ದೇವೆ. ಇಲ್ಲಿ ಸ್ಟಾರ್ಟಪ್‍ಗಳಿಗೆ ಹೆಚ್ಚು ಉತ್ತೇಜನವಿದೆ. ನೀವು ಇಲ್ಲಿನ ಇಂಧನ ಕ್ಷೇತ್ರದ ವಿಕಸನದ ಸಹಭಾಗಿಗಳಾಗಬಹುದು. ನೈಸರ್ಗಿಕ ಅನಿಲ ಕ್ಷೇತ್ರದಲ್ಲಿಯೂ ಸುಧಾರಣೆಗೆ ಸತತ ಪ್ರಯತ್ನ ನಡೆಯುತ್ತಿದೆ. ನಮ್ಮ ಒನ್ ನೇಷನ್, ಒನ್ ಗ್ರಿಡ್ (One Nation, One Grid) ಆಶಯ ಸಾಕಾರಗೊಳಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ’ ಎಂದು ತಿಳಿಸಿದರು. ‘ಭಾರತದ ಅಭಿವೃದ್ಧಿಯ ವೇಗವನ್ನು ಗಮನಿಸಿದರೆ ಮುಂದಿನ ವರ್ಷಗಳಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ ಎಂದು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯೇ ಹೇಳಿದೆ. ದೇಶದಲ್ಲಿ ಇಂಧನದ ಬೇಡಿಕೆಯು ಅತ್ಯಂತ ಹೆಚ್ಚಾಗಲಿದೆ. ಹೀಗಾಗಿಯೇ ನಿಮ್ಮಂಥ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಭಾರತದಲ್ಲಿ ಹೊಸ ಅವಕಾಶಗಳು ಲಭ್ಯವಾಗಲಿವೆ’ ಎಂದು ಆಶ್ವಾಸನೆ ನೀಡಿದರು.

    ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಭಾರತದ ಅಭಿವೃದ್ಧಿಗೆ 4 ಮುಖ್ಯ ಸ್ತಂಭಗಳಿವೆ. ದೇಶೀಯ ಉತ್ಪಾದನೆಯ ಹೆಚ್ಚಳ, ಪೂರೈಕೆಯಲ್ಲಿ ವೈವಿಧ್ಯ, ಜೈವಿಕ ಇಂಧನ, ಸೋಲಾರ್‍ನಂಥ ಪರ್ಯಾಯ ಇಂಧನ ಬಳಕೆಯಲ್ಲಿ ವೃದ್ಧಿ, ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ವಾಹನಗಳ ಬಳಕೆಗೆ ಒತ್ತು. ಈ ನಾಲ್ಕೂ ಅಂಶಗಳಲ್ಲಿ ಭಾರತ ವೇಗವಾಗಿ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು. ‘ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ವಿಶ್ವದ ಅತ್ಯಂತ ಮುಂದುವರೆದ ಶಕ್ತಿಗಳ ಪೈಕಿ ಒಂದೆನಿಸಿದೆ’ ಎಂದು ಹೇಳಿದರು.

    ‘IMF 2023ರ ಪ್ರಗತಿಯ ಮುನ್ಸೂಚನೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ. ಮಹಾಮಾರಿ ಹಾಗೂ ಯುದ್ಧದ ಪ್ರಭಾವದ ನಡುವೆಯೂ ಭಾರತವು ಜಾಗತಿಕ ಆಶಾಕಿರಣ (A bright spot) ಆಗಿದೆ. ಆಂತರಿಕ ಸತ್ವದಿಂದಾಗಿ ಭಾರತವು ಬಾಹ್ಯ ಒತ್ತಡಗಳನ್ನು ತಡೆದುಕೊಂಡಿದೆ’ ಎಂದರು.

     

    ಚಿತ್ರಗಳ ಕೃಪೆ – ಅಂತರ್ಜಾಲ

    Verbattle
    Verbattle
    Verbattle
    #narendramodi Bangalore BJP CEN energy sector Energy week india ITI LPG m modi narendra modi national News petroleum ತಂತ್ರಜ್ಞಾನ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous ArticleAdani ಅಕ್ರಮದ ವಿರುದ್ಧ ಸ್ಫೋಟಿಸಿದ ರೊಚ್ಚು
    Next Article CNG ವಾಹನಗಳಿಗೆ ಹೊಸ ಸುತ್ತೋಲೆ
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    5 Comments

    1. Gnkcju on February 14, 2026 4:57 am

      mcluck sportsbook mcluckcasinogm mcluck Arizona

      Reply
    2. Gnkcju on February 14, 2026 5:00 am

      mcluck sportsbook mcluckcasinogm mcluck Arizona

      Reply
    3. Gnkcju on February 14, 2026 5:01 am

      mcluck sportsbook mcluckcasinogm mcluck Arizona

      Reply
    4. Gnkcju on February 14, 2026 5:04 am

      mcluck sportsbook mcluckcasinogm mcluck Arizona

      Reply
    5. Gnkcju on February 14, 2026 5:07 am

      mcluck sportsbook mcluckcasinogm mcluck Arizona

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • TerryCak on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Slfwto on ಎಲ್ಲರಿಗೂ ಪ್ರಿಯ ಈ ವರ್ಗಾವಣೆ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.