ಬೆಂಗಳೂರು,ಜ.16:
ಅಧಿಕಾರ ಹಸ್ತಾಂತರ, ನಾಯಕತ್ವ ಬದಲಾವಣೆ ಮೊದಲಾದ ವಿಷಯಗಳ ಕುರಿತಂತೆ ಪಕ್ಷದ ಶಿಸ್ತು ಉಲ್ಲಂಘಿಸಿ ಹೇಳಿಕೆಗಳನ್ನು ನೀಡುತ್ತಿರುವ ನಾಯಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.
ಈ ಕುರಿತಂತೆ ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೈಕಮಾಂಡ್ ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ ಸಚಿವರ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್ನ ಶಿಸ್ತಿನ ಸಿಪಾಯಿಗಳಲ್ಲ ವರಿಷ್ಠರ ಅಭಿಪ್ರಾಯವಾಗಿದೆ ಎಂದು ಹೇಳಿರುವ ಅವರು ಈ ಬಗ್ಗೆ ವರದಿ ನೀಡಲು ತಮಗೆ ಸೂಚಿಸಿದೆ ಎಂದು ಹೇಳಿದ್ದಾರೆ
ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು ಮುಂದುವರಿಸಬೇಕು ಅಥವಾ ಯಾರಾಗಬೇಕು? ಎಂಬಿತ್ಯಾದಿ ಎಲ್ಲ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು ಎಂಬ ತಾಕೀತು ಮಾಡಿದೆ ಎಂದು ತಿಳಿಸಿದ್ದಾರೆ
ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ. ಹೀಗಾಗಿ ಪಕ್ಷದ ನಾಯಕರು ಯಾವುದೇ ವಿಷಯಗಳು ಇದ್ದರೂ ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕೇ ವಿನಃ ಮಾಧ್ಯಮಗಳ ಮುಂದಲ್ಲ. ಇಂಥ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್ ನಾಯಕರು ಕೇಳಿದ್ದಾರೆ ಎಂದು ವಿವರಿಸಿದ್ದಾರೆ.
ಈಗಾಗಲೇ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವ ಕುಮಾರ್ ಯಾವುದೇ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದರು ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವವರ ಸಂಪೂರ್ಣ ವರದಿ ಕೇಳಿದೆ ಎಂದಿದ್ದಾರೆ.
ಈಗಾಗಲೇ ಎಐಸಿಸಿ ಕರ್ನಾಟಕ ಉಸ್ತುವಾರಿ ಆಗಿರುವ ರಣದೀಪ್ ಸುರ್ಜೇವಾಲ ಅವರು ಪಕ್ಷದ ತಾಯಿ ಇದ್ದಂತೆ, ಸರ್ಕಾರ ಮಗು ಇದ್ದಂತೆ. ಯಾರೂ ಸಹ ಪಕ್ಷದ ಘನತೆಗೆ ಚ್ಯುತಿ ತರಬಾರದು ಎಂಬ ಸಂದೇಶವನ್ನು ನೀಡಿದ್ದಾಾರೆ. ಇದರ ಮಧ್ಯೆಯೂ ಕೆಲವು ನಾಯಕರು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಕೆಲವು ಸಚಿವರು ಪದೇ ಪದೆ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಆದರೆ, ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ HC ಮಹದೇವಪ್ಪ ಅವರು ಪದೇ ಪದೆ ಮಾತನಾಡುತ್ತಿದ್ದು, ಹೈಕಮಾಂಡ್ ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿದ್ದಾರೆ
ಇದರ ಜೊತೆಗೆ ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ? ಎಂಬುದನ್ನು ಪ್ರಶ್ನೆ ಮಾಡಿದ್ದಾರೆ.
ಹಾಗೂ ಜಿಲ್ಲಾ ಪ್ರವಾಸ ಹೋದಂತಹ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದಾರಾ? ಇಲ್ಲವಾ?ಪಕ್ಷದ ಸಂಘಟನೆಗೆ ಒತ್ತು ಕೊಡಲಾಗುತ್ತದೆಯೋ ಇಲ್ಲವೋ?ಪ್ರಣಾಳಿಕೆಯಲ್ಲಿ ಕೊಟ್ಟಿರುವ ಯೋಜನೆಗಳನ್ನು ಜಾರಿ ಮಾಡಲು ಇವರು ಪಕ್ಷ ಮತ್ತು ಸರ್ಕಾರ ಕ್ಕೆ ಸಹಕಾರ ಕೊಡುತ್ತಿದ್ದಾರೋ ಇಲ್ಲವೋ? ಇದಲ್ಲದೆ ತಮ್ಮ ಇಲಾಖೆಯಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿದ್ದಾರಾ ಇಲ್ಲವಾ?
ಎಂಬಿತ್ಯಾದಿ ಸಂಪೂರ್ಣ ಮಾಹಿತಿಯನ್ನು ಹೈಕಮಾಂಡ್ ಈ ಸಂದರ್ಭದಲ್ಲಿ ಕೇಳಿದೆ. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ.ಅಲ್ಲದೆ, ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೆ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈ ಕಮಾಂಡ್ ಸೂಚಿಸಿದೆ.
ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ ಮೇಲೆಯೂ ಪದೇ ಪದೆ ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಅವರಿಗೆ ಪರಿಣಾಮ ಬೀರಲಿದೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ವಿವರಿಸಿದ್ದಾರೆ.

1 Comment
best casinos delivers steady casino discomfort owing to a sweepstakes technique with no basic on real-money gambling. Its standout welcome bonus and interminable game heterogeneity make it a favorite mid communal casino fans nationwide.