ಲಕ್ನೋ, ಫೆ.20-ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದ ನೀರಿನಿಂದ ಪುಣ್ಯಸ್ನಾನ ಮಾಡಲು ಕೈದಿಗಳಿಗೂ ಅವಕಾಶ ಮಾಡಿಕೊಡಲಾಗಿದೆ.
ಉತ್ತರ ಪ್ರದೇಶದಲ್ಲಿರುವ 75 ಜೈಲುಗಳಿಂದ 9 ಸಾವಿರ ಕೈದಿಗಳು ತ್ರಿವೇಣಿ ಸಂಗಮದ ನೀರಿನಲ್ಲಿ ಪಾಪ ತೊಳೆದುಕೊಳ್ಳಲಿದ್ದಾರೆ .
ಸಚಿವ ದಾರಾ ಸಿಂಗ್ ಚೌಹಾಣ್ ಮಾಹಿತಿ ನೀಡಿ , ನಾಳೆ ಬೆಳಗ್ಗೆ 9.30ರಿಂದ 10ರವರೆಗೆ ಎಲ್ಲಾ ಜೈಲುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಉತ್ತರ ಪ್ರದೇಶದ ಜೈಲು ಆಡಳಿತವು ಪ್ರಯಾಗ್ರಾಜ್ನ ಸಂಗಮದಿಂದ 75 ಜೈಲುಗಳಿಗೆ ಪವಿತ್ರ ಜಲವನ್ನು ತರಲು ವ್ಯವಸ್ಥೆ ಮಾಡುತ್ತಿದೆ. ರಾಜ್ಯಾದ್ಯಂತ ಏಳು ಕೇಂದ್ರ ಕಾರಾಗೃಹಗಳು ಸೇರಿದಂತೆ 75 ಜೈಲುಗಳಲ್ಲಿ ಪ್ರಸ್ತುತ 90 ಸಾವಿರಕ್ಕೂ ಹೆಚ್ಚು ಕೈದಿಗಳನ್ನು ಇರಿಸಲಾಗಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿವಿ ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ ಪವಿತ್ರ ನೀರನ್ನು ಎಲ್ಲಾ ಜೈಲುಗಳಿಗೆ ತರಲಾಗುವುದು ಮತ್ತು ಸಾಮಾನ್ಯ ನೀರಿನೊಂದಿಗೆ ಬೆರೆಸಿ ಜೈಲು ಆವರಣದೊಳಗಿನ ಸಣ್ಣ ತೊಟ್ಟಿಯಲ್ಲಿ ಸಂಗ್ರಹಿಸಲಾಗುವುದು. ಪ್ರಾರ್ಥನೆಯ ನಂತರ ಎಲ್ಲಾ ಕೈದಿಗಳು ನೀರಿನಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಹೇಳಿದರು
Previous Articleಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ -ಯಾಕೆ ಗೊತ್ತಾ?
Next Article ಬೆಂಗಳೂರು ರಸ್ತೆಯಲ್ಲಿ ಲಾಂಗ್ ಬೀಸಿದ ಪುಂಡರು


1 Comment
Le choix malin pour vos achats santГ© : notre pharmacie vous attend – https://www.pharmacie-odeon-saint-joseph.com/mentions-legales/ , Votre pharmacie de rГ©fГ©rence pour des conseils fiables et bienveillants .