Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಬಿಕ್ಕಟ್ಟಿಗೆ ಆರ್ ಎಸ್ ಎಸ್ ತೇಪೆ.
    ಸುದ್ದಿ

    ಬಿಜೆಪಿ ಬಿಕ್ಕಟ್ಟಿಗೆ ಆರ್ ಎಸ್ ಎಸ್ ತೇಪೆ.

    vartha chakraBy vartha chakraJune 28, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28:
    ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಸೇರಿದಂತೆ ಹಲವು ವಿಚಾರಗಳಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಲು ಇದೀಗ ಸಂಘ ಪರಿವಾರ ಮಧ್ಯಪ್ರವೇಶಿಸಿದೆ.
    ಆರ್ ಎಸ್ ಎಸ್ ನಾಯಕರ ಸಲಹೆ ಮೇರೆಗೆ ಕಾರ್ಯಾಚರಣೆ ನಡೆಸಿದ ಕೇಂದ್ರ ಮಂತ್ರಿ ಪ್ರಹ್ಲಾದ ಜೋಶಿ ಮೊದಲ ಹಂತದಲ್ಲಿ ಪಕ್ಷದಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯಲು ಆರ್ ಎಸ್ ಎಸ್ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಇದರ ಜೊತೆಗೆ ಪದಾಧಿಕಾರಿಗಳು ಮತ್ತು ಕೋರ್ ಕಮಿಟಿ ಸಮಗ್ರ ಬದಲಾವಣೆಗೂ ಸಲಹೆ ಮಾಡಿದ್ದಾರೆ ಪರಿವಾರದ ನಾಯಕರ ಸಲಹೆ ಮೇರೆಗೆ ತಟಸ್ಥ ಮತ್ತು ಭಿನ್ನರ ಬಣ ಇದೀಗ ವಿಜಯೇಂದ್ರ ಅವರನ್ನು ಅಧ್ಯಕ್ಷರಾಗಿ ಮುಂದುವರೆಸಲು ಸಹಮತ ವ್ಯಕ್ತಪಡಿಸಿದ್ದಾರೆ.
    ಪಕ್ಷದ ಅಧ್ಯಕ್ಷರ ನೇಮಕಾತಿ ಸಂಘಟನೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಲು ಮಧ್ಯ ಪ್ರವೇಶಿಸಿದ ಸಂಗ ಪರಿವಾರ ನಾಯಕರು ನಿನ್ನೆ ಬೆಳಗ್ಗೆ ಕೇಶವ ಶಿಲ್ಪಾದಲ್ಲಿ ಸಭೆ ನಡೆಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.
    ಇದಾದ ನಂತರ ಬಿಕ್ಕಟ್ಟು ಬಗೆಹರಿಸಲು ನಿಯೋಜನೆಗೊಂಡಿರುವ ಕೇಂದ್ರ ಮಂತ್ರಿ ಪ್ರಹ್ಲಾದ ಜೋಶಿ ಅವರು ಮಾಜಿ ಮಂತ್ರಿ ಅಶ್ವಥ್ ನಾರಾಯಣ ಅವರ ನಿವಾಸ ಮತ್ತು ಪಕ್ಷದ ಕಚೇರಿಯಲ್ಲಿ ಎರಡು ಪ್ರತ್ಯೇಕ ಸಭೆಗಳನ್ನು ನಡೆಸಿ ಭಿನ್ನರು ಮತ್ತು ತಟಸ್ಥರಲ್ಲಿ ಉಂಟಾಗಿದ್ದ ಎಲ್ಲ ಗೊಂದಲಗಳನ್ನು ಬಗೆಹರಿಸುವಲ್ಲಿ ಮೊದಲ ಹಂತದಲ್ಲಿ ಯಶಸ್ವಿಯಾಗಿದ್ದಾರೆ.
    ಅಶ್ವಥ್ ನಾರಾಯಣ ಅವರ ನಿವಾಸದಲ್ಲಿ ಹಿರಿಯ ನಾಯಕ ಅರವಿಂದ ಲಿಂಬಾವಳಿ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರನ್ನು ಮುಖಾಮುಖಿಯಾಗಿಸುವಲ್ಲಿ ಯಶಸ್ವಿಯಾದ ಪ್ರಹ್ಲಾದ ಜೋಶಿ ಇಬ್ಬರ ನಡುವೆ ಉಂಟಾಗಿದ್ದ ಭಿನ್ನಮತಕ್ಕೆ ಕಾರಣವಾದ ಅಂಶಗಳನ್ನು ಬಗೆಹರಿಸಿದ್ದಾರೆ.ವಿಜಯೇಂದ್ರ ಅವರು ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿಲ್ಲ. ಏಕ ಪಕ್ಷಿಯವಾಗಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಯಾವ ನಿರ್ಧಾರ ಎಲ್ಲಿಗೆ ಸೂಕ್ತ ಎಂಬ ವಿವೇಚನೆ ಇಲ್ಲದೆ ವರ್ತಿಸುತ್ತಿದ್ದಾರೆ ಇದರಿಂದ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗುತ್ತಿದೆ ಎಂದು ಅರವಿಂದ ಲಿಂಬಾವಳಿ ನೇರವಾಗಿ ಹೇಳಿದ್ದಾರೆ ಎನ್ನಲಾಗಿದೆ.
    ವಿಜಯೇಂದ್ರ ಅವರನ್ನು ಕೆಲವೇ ಕೆಲವು ಮಂದಿ ಯುವಕರು ಸುತ್ತುವರೆದಿದ್ದಾರೆ ಅವರಿಗೆ ಪಕ್ಷ ಸಂಘಟನೆ ಮತ್ತು ರಾಜಕೀಯ ತಂತ್ರಗಾರಿಕೆಯ ಬಗ್ಗೆ ಯಾವುದೇ ಮಾಹಿತಿ ಮತ್ತು ಅರಿವಿಲ್ಲ ಇಂತಹವರ ಜೊತೆಗೆ ಸೇರಿ ಕಾರ್ಯಕ್ರಮ ರೂಪಿಸುತ್ತಿರುವ ಪರಿಣಾಮ ಹಿರಿಯ ನಾಯಕರು ದೂರ ಉಳಿಯುವ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದರು ಎನ್ನಲಾಗಿದೆ.
    ಈ ಇಬ್ಬರ ನಡುವೆ ಮಾತುಕತೆ ನಡೆಯುತ್ತಿರುವ ಸಮಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸದಾನಂದ ಗೌಡ ಮಾಜಿ ಸಚಿವ ಸಿಟಿ ರವಿ ಸೇರಿದಂತೆ ಹಲವು ಮುಖಂಡರು ಸಭೆಗೆ ಆಗಮಿಸಿದ್ದಾರೆ ಎಲ್ಲರೂ ಕೂಡ ವಿಜಯೇಂದ್ರ ನಡವಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಸಮಾಧಾನ ಚಿತ್ತದಿಂದ ಆಲಿಸಿದ ವಿಜಯೇಂದ್ರ ತಾವೆಲ್ಲರೂ ಹಿರಿಯರಿದ್ದೀರಿ ಪಕ್ಷ ಸಂಘಟನೆ ಮತ್ತು ರಾಜಕೀಯದ ಬಗ್ಗೆ ಅಪಾರ ಅನುಭವ ಹೊಂದಿದ್ದೀರಿ ನನಗೆ ಇವುಗಳ ಕೊರತೆ ಇದ್ದು ಗೊಂದಲಗಳು ಉಂಟಾಗಿದೆ ಇನ್ನು ಮುಂದೆ ಎಲ್ಲವನ್ನು ಸರಿಪಡಿಸಿಕೊಳ್ಳುತ್ತೇನೆ ನಿಮ್ಮ ಸಲಹೆಯೊಂದಿಗೆ ಮುಂದುವರೆಯುತ್ತೇನೆ ನನಗೆ ಸಹಕಾರ ಕೊಡಿ ಎಂದು ಮನವಿ ಮಾಡಿದ್ದಾರೆ.
    ಆಗಿಂದ್ದಾಗ್ಗೆ ಎಲ್ಲ ಹಿರಿಯರನ್ನು ಭೇಟಿ ಮಾಡಿ ಅಭಿಪ್ರಾಯ ಕೇಳುತ್ತೇನೆ ನಿಮ್ಮ ಸಲಹೆಯಂತೆ ಪಕ್ಷ ಕಟ್ಟಲು ಶ್ರಮಿಸುತ್ತೇನೆ ಎಂದು ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಪ್ರಹಲ್ಲಾದ ಜೋಶಿ ಇನ್ನು ಮುಂದೆ ಅಸಮಾಧಾನ ಬಿಕ್ಕಟ್ಟು ಎಲ್ಲವನ್ನು ಬದಿಗೊತ್ತಿ ಪಕ್ಷ ಸಂಘಟನೆಗೆ ಎಲ್ಲರೂ ಶ್ರಮಿಸಬೇಕು ಹೈಕಮಾಂಡ್ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ಕೋರ್ ಕಮಿಟಿ ರಚನೆ ಮಾಡಲಿದೆ ಇವುಗಳು ಕಾಲದಿಂದ ಕಾಲಕ್ಕೆ ಸಭೆ ಸೇರಿ ಸಂಘಟನಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ ಇದಾದ ನಂತರ ಪಕ್ಷದ ಕಚೇರಿಯಲ್ಲಿ ಮಾಜಿ ಸಂಸದ ಜಿಎಂ ಸಿದ್ದೇಶ್ ಮತ್ತು ಶಾಸಕ ಬಿಪಿ ಹರೀಶ್ ಅವರೊಂದಿಗೆ ಮಾತುಕತೆ ನಡೆಸಿದ್ದು ಅವರು ಕೂಡ ನೂತನ ಸೂತ್ರದಂತೆ ಕೆಲಸ ಮಾಡುವ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ

    Verbattle
    Verbattle
    Verbattle
    ಬಿಜೆಪಿ Bengaluru ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಹುಲಿಗೆ ವಿಷವಿಕ್ಕಿದ್ದು ಯಾಕೆ ಗೊತ್ತಾ ?
    Next Article ದೀಪಕ್ ತಿಮ್ಮಯ ಅವರಿಗೆ ಕೆಂಪೇಗೌಡ ಪ್ರಶಸ್ತಿ
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • LarryCax on ಎದೆ ನಡುಗಿಸಿದ ಭೀಕರ ಹತ್ಯೆ.
    • Tracymix on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.