ಬೆಂಗಳೂರು,ಡಿ.14-
ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಸುರೇಶ್ ಅವರ ಸಹೋದರಿ ಎಂದುಚಿನ್ನದ Businessಿಯನ್ನು ನಂಬಿಸಿದ ಮಹಿಳೆಯೊಬ್ಬರು ಬರೋಬ್ಬರಿ 9.82 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದಾರೆ.
ಈ ಸಂಬಂಧ ಚಿನ್ನದ ವ್ಯಾಪಾರಿ ನೀಡಿದ ದೂರು ಆಧರಿಸಿ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್.ಐತಾಳ್ ಅವರನ್ನು ಪರಿಚಯ ಮಾಡಿಕೊಂಡ ಐಶ್ವರ್ಯಾ ಗೌಡ ಎಂಬ ಮಹಿಳೆ ತಾನು ಮಾಜಿ ಸಂಸದರ ಸಹೋದರಿ, ನನಗೆ ಅನೇಕ ರಾಜಕೀಯ ನಾಯಕರ ಪರಿಚಯವಿದೆ ಎಂದು ಹೇಳಿದ್ದಾರೆ.
ತಮ್ಮ ಪರಿಚಿತರ ಮೂಲಕ ನಿಮಗೆ ಸಾಕಷ್ಟು ಗಿರಾಕಿಗಳನ್ನು ಕೊಡುತ್ತೇನೆ. ದೊಡ್ಡ ಪ್ರಮಾಣದಲ್ಲಿ ಅವರು ಚಿನ್ನಾಭರಣ ಖರೀದಿ ಮಾಡುತ್ತಾರೆ ಎಂದು ಹೇಳಿ ಮಂಡಿಸಿದ್ದಾರೆ ಬಳಿಕ ಐಶ್ವರ್ಯಾ ಗೌಡ,ತನ್ನ ಪತಿ ಹರೀಶ್ ಅವರೊಂದಿಗೆ ವನಿತಾ ಅವರನ್ನು ಭೇಟಿ ಮಾಡಿದಾರೆ.ನಂತರ ಸಾಲದ ರೂಪದಲ್ಲಿ ಚಿನ್ನ ಪಡೆದು ಆರಂಭದಲ್ಲಿ ಕೆಲ ಬಾರಿ ಹಣ ನೀಡಿದ್ದಾರೆ.
ಈ ರೀತಿ ನಂಬಿಕೆ ಸಂಪಾದಿಸಿದ ದಂಪತಿ ಬಳಿಕ 2023 ಅಕ್ಟೋಬರ್ನಿಂದ 2024 ಏಪ್ರಿಲ್ವರೆಗೆ ಹಂತ ಹಂತವಾಗಿ ಪಡೆದಿದ್ದ ಒಟ್ಟು 14 ಕೆ.ಜಿ 660 ಗ್ರಾಂ ಚಿನ್ನ ಸಾಲದ ರೂಪದಲ್ಲಿ ಪಡೆದಿದ್ದಾರೆ ಇದಕ್ಕೆ ಪ್ರತಿಯಾಗಿ ಹಣ ನೀಡಿಲ್ಲ.
ಹಣ ಕೇಳಿದಾಗ ಸದ್ಯಕ್ಕೆ ಹಣವಿಲ್ಲ ಎಂದಿದ್ದ ಆರೋಪಿಗಳು 2024ರ ಜುಲೈವರೆಗೂ ಸಮಯಾವಕಾಶ ಕೇಳಿದ್ದಾರೆ. ಹಾಗೂ ಪಡೆದಿದ್ದ ಚಿನ್ನಕ್ಕೆ ಅಗ್ರಿಮೆಂಟ್ ಮಾಡಿಕೊಟ್ಟಿದ್ದಾರೆ.
ಕಾಲಾವಕಾಶ ಮುಗಿದ ಬಳಿಕ ಹಣ ವಾಪಾಸ್ ಕೇಳಿದಾಗ, ಧರ್ಮೇಂದ್ರ ಎಂಬ ಸಿನಿಮಾ ನಟನ ಮೂಲಕ ಕರೆ ಮಾಡಿಸಿ ಸಂಸದರ ಧ್ವನಿಯಲ್ಲಿ ಮಾತನಾಡಿಸಿದ್ದಾರೆ.
ಹಣ ಕೇಳಿದರೆ ಧರ್ಮೇಂದ್ರನನ್ನು ಕಳುಹಿಸಿ ಕೊಲೆ ಮಾಡಿಸುವುದಾಗಿ ಬೆದರಿಸಿದ್ದಾರೆ. ಅಲ್ಲದೇ ಧರ್ಮೇಂದ್ರ ಅವರನ್ನು ಅಂಗಡಿಗೆ ಕಳುಹಿಸಿ ಬೆದರಿಸಿದ್ದಾರೆ ಎಂದು ಇದೀಗ ವನಿತಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಇದರ ಆಧಾರದ ಚಂದ್ರಾಲೇಔಟ್ ಠಾಣೆ ಪೊಲೀಸರು ಐಶ್ವರ್ಯ, ಆಕೆಯ ಪತಿ ಹರೀಶ್ ಕೆ.ಎನ್ ಹಾಗೂ ನಟ ಧರ್ಮೇಂದ್ರ ಬಿ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ
ನಾವು ಮುಂಬೈ, ಬೆಂಗಳೂರಿನ ವಿವಿಧ ಚಿನ್ನದ ವ್ಯಾಪಾರಿಗಳಿಂದ ಚಿನ್ನಾಭರಣ ಪಡೆದು ಆರೋಪಿಗಳಿಗೆ ನೀಡಿದ್ದೆವು. ಆದರೆ, ಆರೋಪಿಗಳು ಇನ್ನೂ ಹಣ ನೀಡದಿರುವುದರಿಂದ ನಮಗೆ ದೈನಂದಿನ ವ್ಯವಹಾರ ನಡೆಸುವುದು ಕಷ್ಟವಾಗಿದೆ ಎಂದು ಚಂದ್ರಾಲೇಔಟ್ ಠಾಣೆಗೆ ವನಿತಾ ಅವರು ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.