ಹಬ್ಬಗಳಂದ್ರೆ ಸಂಭ್ರಮ, ಸಡಗರ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಅನೇಕ ಬಗೆಯ ವಿಶಿಷ್ಠ ಹಬ್ಬಗಳನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಪ್ರಸಿದ್ಧಿ, ವೈಶಿಷ್ಟ್ಯತೆ ಹೊಂದಿದೆ. ಈ ನಿಟ್ಟಿನಲ್ಲಿ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆಯುತ್ತಿರುವ ಹಬ್ಬವೊಂದು ಒಮ್ಮೆ ಎಲ್ಲರನ್ನೂ ರೋಮಾಂಚನಗೊಳಿಸಬಲ್ಲದು!.ಹೌದು, ಪಾಳ್ಯ ಗ್ರಾಮದಲ್ಲಿ 19 ವರ್ಷಗಳ ಬಳಿಕ ಇಂದು ಸೀಗಮಾರಮ್ಮನ ಬಲಿ ಹಬ್ಬ ನಡೆಯಲಿದೆ. ಇಲ್ಲಿ ವ್ಯಕ್ತಿಯೊಬ್ಬರ ಪ್ರಾಣಪಕ್ಷಿ ಹಾರಿಹೋಗಿ 6 ತಾಸಿನ ಬಳಿಕ ಮತ್ತೆ ಆ ವ್ಯಕ್ತಿ ಬದುಕಿ ಬರ್ತಾರಂತೆ! ಹೀಗೂ ಉಂಟೇ! ಎಂದು ಉದ್ಘಾರ ತೆಗೆದರೂ ಅಚ್ಚರಿಯೇನಿಲ್ಲ ಬಿಡಿ. ಕಳೆದ ತಿಂಗಳ 24ರಂದು ಈ ಗ್ರಾಮದೇವತೆ ಹಬ್ಬಕ್ಕೆ ಚಾಲನೆ ಸಿಕ್ಕಿದೆ. ಇಂದು ತಡರಾತ್ರಿ ನರಬಲಿ ಆಚರಣೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.ಸೀಗಮಾರಮ್ಮ ದೇವಾಲಯದ ಅರ್ಚಕರು ದೇವಿಗೆ ನಡೆದುಕೊಳ್ಳುವ ಒಕ್ಕಲಿನ ವ್ಯಕ್ತಿಯೊಬ್ಬರ ಎದೆಯ ಮೇಲೆ ಕಾಲಿಟ್ಟಾಗ ಅವರ ಪ್ರಾಣ ಪಕ್ಷಿ ಹಾರಿಹೋಗಲಿದೆ. ಬಳಿಕ ಆ ವ್ಯಕ್ತಿಯನ್ನು ಶವದ ಮೆರವಣಿಗೆ ರೀತಿ ಮಾಡಲಾಗುತ್ತದೆ. ಈ ಮೆರವಣಿಗೆ ಮುಗಿದ ಬಳಿಕ ದೇವಿಯ ತೀರ್ಥವನ್ನು ಪ್ರೋಕ್ಷಣೆ ಮಾಡಿದಾಗ ವ್ಯಕ್ತಿಗೆ ಮತ್ತೆ ಜೀವ ಬರುತ್ತದೆ ಎಂಬುದು ನಂಬಿಕೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
