Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.
    Viral

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    vartha chakraBy vartha chakraJune 20, 2025No Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.20:
    ರಾಜ್ಯ ಬಿಜೆಪಿ ನಾಯಕರ ಕಾರ್ಯವೈಖರಿಯ ಬಗ್ಗೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಕೆಂಡಾಮಂಡಲರಾಗಿದ್ದಾರೆ. ಅಮಿತ್ ಶಾ ಅವರ ಆಕ್ರೋಶಕ್ಕೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ತತ್ತರಿಸಿದ್ದಾರೆ.
    ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಳ್ಳಲು ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಅವರನ್ನು ರಾಜ್ಯದ ಬಿಜೆಪಿ ಪ್ರಮುಖ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
    ರಾಜ್ಯ ಬಿಜೆಪಿಯ ವಿದ್ಯಮಾನಗಳ ಕುರಿತಂತೆ ತಮ್ಮದೇ ಆದ ವರದಿಯೊಂದಿಗೆ ಆಗಮಿಸಿದ್ದ ಅಮಿತ್ ಶಾ ಅವರು ಪಕ್ಷದ ಅಧ್ಯಕ್ಷ ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.
    ಒಂದು ಹಂತದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕರೆಯಿಸಿಕೊಂಡು ಮಾತನಾಡಿದ ಅಮಿತ್ ಶಾ ಅವರು ಪಕ್ಷ ಸಂಘಟನೆ ವಿಷಯದಲ್ಲಿ ನೀವು ಹೇಳಿದಂತೆ ಕೇಳಿದರು ಕೂಡ ರಾಜ್ಯದಲ್ಲಿ ಯಾಕೆ ಪಕ್ಷ ಪ್ರಬಲವಾಗುತ್ತಿಲ್ಲ ಎಂದು ಪ್ರಶ್ನಿಸಿರುವುದಾಗಿ ಗೊತ್ತಾಗಿದೆ.
    ವಿಜಯೇಂದ್ರ ಕಾರ್ಯವೈಖರಿ ತಮಗೆ ಸಮಾಧಾನ ತಂದಿಲ್ಲ ನೀವು ಹೇಳಿದಂತೆ ಅವರಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿ ಸ್ವಾತಂತ್ರ್ಯವನ್ನು ಕೂಡ ಕೊಡಲಾಗಿತ್ತು ಆದರೆ ಅವರು ನಾಯಕತ್ವದ ನೀರಿಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ ಹಿರಿಯ ನಾಯಕರು ಒಟ್ಟಿಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದರೂ ಕೂಡ ಅದನ್ನು ಪಾಲನೆ ಮಾಡಿಲ್ಲ ಯಾವುದೇ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಮ್ಮ ಪಾಡಿಗೆ ತಾವು ಹೋಗುತ್ತಿರುವ ಕಾರಣಕ್ಕೆ ರಾಜ್ಯದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ.
    ಹಿರಿಯ ನಾಯಕರೊಂದಿಗೆ ಸಮನ್ವಯ ಸಾಧಿಸಿ ಎಲ್ಲರ ಜೊತೆ ಚರ್ಚೆ ಮಾಡಿ ಪರಸ್ಪರ ವಿಶ್ವಾಸದೊಂದಿಗೆ ಸಂಘಟನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಹೈಕಮಾಂಡ್ ಹಲವು ಬಾರಿ ಸೂಚನೆ ನೀಡಿದರು ಕೂಡ ವಿಜಯೇಂದ್ರ ಕೇಳುತ್ತಿಲ್ಲ ಹೀಗಾಗಿ ಅವರಿಗೆ ತಿಳುವಳಿಕೆ ನೀಡಿ ಇಲ್ಲವೇ ಜವಾಬ್ದಾರಿಯನ್ನು ಬೇರೆಯವರಿಗೆ ಕೊಡಬೇಕಾದೀತು ಎಂಬ ಎಚ್ಚರಿಕೆ ನೀಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ
    ರಾಜ್ಯ ಸರ್ಕಾರದ ವಿರುದ್ಧ ರೂಪಿಸಿದ ಜನಾಕ್ರೋಶ ಯಾತ್ರ ಸೇರಿದಂತೆ ಹಲವು ಕಾರ್ಯಕ್ರಮಗಳು ಸಮನ್ವಯದ ಕೊರತೆ ಮತ್ತು ಭಿನ್ನಮತದ ಕಾರಣದಿಂದ ಯಶಸ್ವಿಯಾಗಿಲ್ಲ ರಾಜ್ಯ ಸರ್ಕಾರದ ವಿರುದ್ಧ ಜನ ತೀವ್ರ ಅಸಮಾಧಾನ ಒಂದು ಹೊಂದಿದ್ದರೂ ಕೂಡ ಅದನ್ನು ಸಮರ್ಥವಾಗಿ ಬಳಸಲು ವಿಫಲವಾಗಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರೆನ್ನಲಾಗಿದೆ.
    ಹಿರಿಯ ನಾಯಕರು ಸೇರಿದಂತೆ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಮ್ಮನ್ನು ಸುತ್ತುವರೆದ ಕೆಲವೇ ನಾಯಕರ ಮಾತುಗಳನ್ನು ಕೇಳಿಕೊಂಡು ನಡೆಯುತ್ತಿರುವ ಪರಿಣಾಮವಾಗಿ ಬಿಜೆಪಿ ಸಂಘಟನೆ ಪ್ರಮುಖ ಪ್ರತಿ ಪಕ್ಷವಾಗಿ ಕೆಲಸ ಮಾಡಲು ವಿಫಲವಾಗಿದೆ ಎಂಬ ವರದಿಗಳಿವೆ ಇದು ಸರಿ ಹೋಗದೆ ಹೋದರೆ ಬದಲಾವಣೆ ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.
    ಸಮನ್ವಯ ಸಮಿತಿ:
    ಇದೆ ವೇಳೆ ಎನ್ ಡಿಎ ಮೈತ್ರಿಕೂಟದ ಪಾಲುದಾರವಾಗಿರುವ ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಹಾಗೂ ಅವರ ಜೊತೆ ಯಾವುದೇ ಸಮನ್ವಯತೆ ಪ್ರಯತ್ನ ನಡೆಸದ ವಿಜಯೇಂದ್ರ ನಡವಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅಮಿತ್ ಶಾ ಅವರು ರಾಷ್ಟ್ರೀಯ ಮಟ್ಟದಲ್ಲಿ ನಾಯಕತ್ವ ಮಾಡಿಕೊಂಡಿರುವ ಹೊಂದಾಣಿಕೆಯನ್ನು ರಾಜ್ಯ ನಾಯಕತ್ವ ಗೌರವಿಸುವುದಿಲ್ಲ ಎಂದು ಹೇಗೆ ಎಂದು ಪ್ರಶ್ನಿಸಿರುವುದಾಗಿ ತಿಳಿದುಬಂದಿದೆ.
    ಈ ವೇಳೆ ಮಾತನಾಡಿದ ವಿಜಯೇಂದ್ರ ರಾಜ್ಯದಲ್ಲಿ ಜೆಡಿಎಸ್ ಹೊರತುಪಡಿಸಿ ಬಿಜೆಪಿಗೆ ಉತ್ತಮವಾದ ಭವಿಷ್ಯವಿದೆ ಇತ್ತೀಚೆಗೆ ನಡೆದ ಹಲವು ಸಮೀಕ್ಷೆಗಳು ಜೆಡಿಎಸ್ ಸಖ್ಯವಿಲ್ಲದೆ ಬಿಜೆಪಿ Election ಎದುರಿಸಿದರೆ ಭಾರಿ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿವೆ. ಅಲ್ಲದೆ ಆ ಪಕ್ಷದ ನಾಯಕತ್ವ ಯಜಮಾನಿಕೆ ಧೋರಣೆ ಹೊಂದಿದೆ ಹೀಗಾಗಿ ನಾವು ಮುಂಬರುವ ಎಲ್ಲ ಚುನಾವಣೆಗಳನ್ನು ಏಕಾಂಗಿಯಾಗಿ ಎದುರಿಸಿದರೆ ಸೂಕ್ತ ಎಂದು ವಿವರಿಸಿದರು ಎನ್ನಲಾಗಿದೆ.
    ಇದರಿಂದ ಮತ್ತಷ್ಟು ಆಕ್ರೋಶಗೊಂಡ ಅಮಿತ್ ಶಾ ಅವರು ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರದ ವಿರುದ್ಧದ ಪ್ರಮುಖ ಅಸ್ತ್ರವಾಗಿ ಬಳಸಲು ಬಿಜೆಪಿ ವಿಫಲವಾಗಿದೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಇದರ ವಿರುದ್ಧ ಮಾಡಿದ ಆರೋಪಗಳು ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತು ಆದರೆ ರಾಜ್ಯ ಬಿಜೆಪಿ ಮಾಡಿದ ಯಾವುದೇ ಹೋರಾಟ ಗಮನ ಸೆಳೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
    ಇನ್ನು ಮುಂದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು ರಾಜ್ಯ ಸರ್ಕಾರದ ವಿರುದ್ಧ ನಡೆಸುವ ಹೋರಾಟ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ನಡೆಸಬೇಕು ಇದಕ್ಕಾಗಿ ಸಮನ್ವಯ ಸಮಿತಿಯೊಂದನ್ನು ರಚನೆ ಮಾಡಲಾಗುವುದು ಅದರಂತೆ ಎಲ್ಲರೂ ಗಮನಹರಿಸಬೇಕು ಎಂದು ಸೂಚಿಸಿದ ಅವರು, ಯಡಿಯೂರಪ್ಪ ಅವರನ್ನು ಕುರಿತು ತಾವು ಪಕ್ಷ ಸಂಘಟನೆಯಲ್ಲಿ ಹೆಚ್ಚು ಸಕ್ರಿಯವಾಗಿ ತೊಡಗುವಂತೆ ಮನವಿ ಮಾಡಿದರು ಎನ್ನಲಾಗಿದೆ.
    ಕಚೇರಿಗೆ ಹಾಜರು:
    ಇದಾದ ನಂತರ ಯಡಿಯೂರಪ್ಪ ಅವರು ನೇರವಾಗಿ ಪಕ್ಷದ ಕಚೇರಿಗೆ ಆಗಮಿಸಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಇನ್ನು ಮುಂದೆ ತಾವು ಪ್ರತಿ ದಿನ ಪಕ್ಷದ ಕಚೇರಿಗೆ ಆಗಮಿಸಲಿದ್ದು ಪಕ್ಷದ ಎಲ್ಲ ನಾಯಕರು ಬಂದು ತಮ್ಮನ್ನು ಭೇಟಿಯಾಗಬಹುದು ಎಂದು ತಿಳಿಸಿದ್ದಾರೆ.
    ಸಂಘಟನಾತ್ಮಕ ವಿಚಾರ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ತಮ್ಮ ಜೊತೆ ಮಾತನಾಡಲು ಬಯಸುವವರು ಪಕ್ಷದ ಕಚೇರಿಗೆ ಬರುವಂತೆ ಹೇಳಿರುವ ಅವರು ಇಲ್ಲಿಯವರೆಗೆ ಆಗಿದ್ದನ್ನು ಮರೆತು ಎಲ್ಲರೂ ಒಟ್ಟಾಗಿ ಮುಂದುವರೆಯಬೇಕು ಎಂದು ತಿಳಿಸಿರುವುದಾಗಿ ಮೂಲಗಳು ಹೇಳಿವೆ.

    Election ಜೆಡಿಎಸ್ ಬಿಜೆಪಿ Bengaluru ಮೈ ಯಡಿಯೂರಪ್ಪ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.
    Next Article E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ko5r2 on ಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ NIA ದಾಳಿ
    • AlbertDuabe on ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • AlbertDuabe on ಚುರುಕಾದ ನಕ್ಸಲರು.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe