Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಪ್ ಲೆಕ್ಕಾಚಾರ..
    ಸುದ್ದಿ

    ಆಪ್ ಲೆಕ್ಕಾಚಾರ..

    vartha chakraBy vartha chakraApril 22, 2022Updated:April 22, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದೆಹಲಿ : ಎರಡನೆ ಬಾರಿ ಅಧಿಕಾರ ಹಿಡಿದು ಜನ ಮೆಚ್ಚುಗೆಗಳಿಸಿರುವ ಆಮ್ ಆದ್ಮಿ ಪಾರ್ಟಿ ಇದೀಗ ಪಂಜಾಬ್ ಗೆಲುವಿನ ನಂತರ‌ ಇತರೆ ರಾಜ್ಯಗಳತ್ತ ಗಮನ ಹರಿಸಿದೆ.
    ಪಕ್ಷದ ಪ್ರಮುಖ ನಾಯಕ‌ ಅರವಿಂದ್ ಕೇಜ್ರಿವಾಲ್ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿರುವ ಗುಜರಾತ್ ನತ್ತ ಹೆಚ್ಚಿನ ಗಮನ ಹರಿಸಿದ್ದಾರೆ. ಇದರ ಜೊತೆಗೆ ರಾಜ್ಯದಲ್ಲೂ ಆಮ್‌ ಆದ್ಮಿ ಪಕ್ಷಕ್ಕೆ ರಾಜಕೀಯ ಅಸ್ತಿತ್ವಕ್ಕೆ ಅಡಿಪಾಯ ಹಾಕಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕಾಂಗ್ರೆಸ್‌, ಬಿಜೆಪಿ ಹಾಗು ಜೆಡಿಎಸ್‌ನ ಪ್ರಮುಖ ನಾಯಕರನ್ನು ಸಂಪರ್ಕ ಮಾಡಿದ್ದಾರೆ.
    ಈಗಾಗಲೆ ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ‌ ಆಪ್ ಕಚೇರಿ ಆರಂಭಗೊಂಡಿದ್ದು ಬಿಬಿಎಂಪಿ ಚುನಾವಣೆಗೆ ಭರದ ಸಿದ್ದತೆ ನಡೆಸಿದೆ.ಸರ್ಕಾರದ ವೈಪಲ್ಯಗಳು, ಹಾಗು ನಾಗರೀಕ ಸಮಸ್ಯೆಗಳ ವಿರುದ್ದ ಸರಣಿ ಹೋರಾಟ ನಡೆಸುತ್ತಿದ್ದು, ಜನರ ಗಮನ ಸೆಳೆದಿದೆ.ಆದರೆ ಇದನ್ನು ಪಕ್ಷದ ಪರ ಅಭಿಪ್ರಾಯವಾಗಿ ಪರಿವರ್ತಿಸಲು ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ.
    ಇಂತಹ ನಾಯಕತ್ವಕ್ಕಾಗಿ ಹುಡುಕಾಟ ನಡೆಸಿರುವ ಅರವಿಂದ ಕೇಜ್ರಿವಾಲ್ ರಾಜ್ಯ ರಾಜಕಾರಣದಲ್ಲಿ ಉತ್ತಮ ಹಿನ್ನೆಲೆ ಹಾಗು ಸಾರ್ವಜನಿಕವಾಗಿ ಒಳ್ಳೆಯ ವರ್ಚಸ್ಸು ಮತ್ತು ಹೆಸರು ಇಟ್ಟುಕೊಂಡಿರುವ 50 ರಿಂದ 75 ನಾಯಕರ ಪಟ್ಟಿ ಮಾಡಿಕೊಂಡು ಅವರ ಜತೆ ಸಂಪರ್ಕದಲ್ಲಿದ್ದಾರೆ.
    ಕೇಜ್ರಿವಾಲ್ ಬೆಂಗಳೂರು ಭೇಟಿಯ ವೇಳೆ ದೂರವಾಣಿ ಮೂಲಕ ಕೆಲವು ನಾಯಕರ ಜತೆ ಸಮಾಲೋಚನೆ ಸಹ ನಡೆಸಿದ್ದಾರೆ.
    ಈ ಮಧ್ಯೆ, ಕೇಜ್ರಿವಾಲ್‌ ಅವರನ್ನು ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಸಹ ಸಂಪರ್ಕಿಸಿ ಸ್ವಯಂ ನಿವೃತ್ತಿ ಪಡೆದು ಆಮ್‌ ಆದ್ಮಿ ಪಕ್ಷಕ್ಕೆ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ.
    ಈ ಮೊದಲು ಕಾಂಗ್ರೆಸ್‌ನತ್ತ ಮುಖ ಮಾಡಿದ್ದ ನಾಯಕರು ಪಂಚರಾಜ್ಯಗಳ ಚುನಾವಣೆ ನಂತರ ಇದೀಗ ಆಮ್‌ ಆದ್ಮಿ ಪಕ್ಷದತ್ತ ಒಲವು ಹೊಂದಿದ್ದಾರೆಂದು ಹೇಳಲಾಗಿದೆ.
    ಈಗಾಗಲೇ ಕಾಂಗ್ರೆಸ್‌ನ ಎಸ್‌.ಆರ್‌.ಪಾಟೀಲ್‌, ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಸೇರಿ ಹಲವು ನಾಯಕರ ಜತೆ ಆಪ್‌ ಮುಖಂಡರು ಮಾತನಾಡಿದ್ದು ಕೇಜ್ರಿವಾಲ್‌ ಸಹ ಅವರ ಜತೆ ಚರ್ಚಿಸಿದ್ದಾರೆಂದು ಹೇಳಲಾಗಿದೆ. ಕಾಂಗ್ರೆಸ್‌ನ ಬಿ.ಆರ್‌.ಪಾಟೀಲ್‌, ಜೆಡಿಎಸ್‌ ನ ವೈಎಸ್‌ವಿ ದತ್ತಾ, ಶಿವಲಿಂಗೇಗೌಡ. ಬಿಜೆಪಿಯ ಎಚ್‌ .ಸಿ.ವಿಜಯಶಂಕರ್‌ ಅವರನ್ನು ಸೆಳೆಯುವ ಬಗ್ಗೆಯೂ ಪ್ರಯತ್ನ ನಡೆದಿದೆ ಎಂದು ಹೇಳಲಾಗಿದೆ.
    ಆಮ್‌ ಆದ್ಮಿ ಪಕ್ಷದ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲೂ ಕುತೂಹಲವಿದ್ದು ರಾಜ್ಯದಲ್ಲಿ ಆ ಪಕ್ಷಕ್ಕೆ ಯಾವ ರೀತಿಯಲ್ಲಿ ಸ್ಪಂದನೆ ದೊರೆಯಬಹುದು, ಅದರಿಂದ ನಮಗಾಗಬಹುದಾದ ಲಾಭ-ನಷ್ಟ ಏನು ಎಂಬ ಬಗ್ಗೆಯೂ ಮೂರೂ ಪಕ್ಷಗಳು ತಲೆಕೆಡಿಸಿಕೊಂಡಿವೆ.

    Verbattle
    Verbattle
    Verbattle
    #aap #kejrival
    Share. Facebook Twitter Pinterest LinkedIn Tumblr Email WhatsApp
    Previous Articleತಾಜ್ ಮೇಲೆ ಉಗ್ರರ ಕೆಂಗಣ್ಣು
    Next Article ಅಮ್ಮ.. ಕಾಪಾಡಮ್ಮ…
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hplddb on ಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.
    • Aooeth on ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    • Ksmkjd on 1500 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವು.
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.