Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.
    Viral

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    vartha chakraBy vartha chakraJune 13, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.13-
    ಉತ್ಪಾದನಾ ವಲಯದಲ್ಲಿ ಕರ್ನಾಟಕವನ್ನು ದೇಶದಲ್ಲೇ ಮೊದಲ ಸ್ಥಾನದಲ್ಲಿರುವಂತೆ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.
    ತಮ್ಮ ಇಲಾಖೆಯ 2 ವರ್ಷಗಳ ಸಾಧನೆಯ ಪಟ್ಟಿ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಯೆಟ್ನಾಂ ಹಾಗೂ ಇತರ ದೇಶಗಳಂತೆ ಕರ್ನಾಟಕದಲ್ಲೂ ಉತ್ಪಾದನಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಮೂಲಕ ಉತ್ಪಾದನೆಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
    ಇದಕ್ಕಾಗಿ,ಶ್ರೀನಿವಾಸಪುರದಲ್ಲಿ ಫಾರ್ಮ ಪಾರ್ಕ್‌, ವಿಜಯಪುರದಲ್ಲಿ ಎಲೆಕ್ಟ್ರಿಕಲ್‌ ಸೆಲ್‌ ಉತ್ಪಾದನೆ, ಚಿತ್ರದುರ್ಗದಲ್ಲಿ ಡ್ರೋನ್‌ ಪಾರ್ಕ್‌, ಹುಬ್ಬಳ್ಳಿಯಲ್ಲಿ ನವೋದ್ಯಮ ಹಾಗೂ ಭವಿಷ್ಯದ ತಾಂತ್ರಿಕ ಅಭಿವೃದ್ಧಿ, ದಾಬಸ್‌‍ಪೇಟೆ-ದೊಡ್ಡಬಳ್ಳಾಪುರ ನಡುವೆ ಆರೋಗ್ಯ, ಶಿಕ್ಷಣ ಸೇವೆಗಳ ಮೂಲಕ ಕ್ಲೀನ್‌ ಸಿಟಿ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಕಡೆ ವಿಶೇಷ ಪಾರ್ಕ್‌ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು
    ಹುಬ್ಬಳ್ಳಿಯ ಎನ್‌ಜಿಎಫ್‌ ಅನ್ನು ಪುನರುಜ್ಜೀವನ ಗೊಳಿಸಲಾಗುವುದು. ಎಂಎಸ್‌‍ಐಎಲ್‌ನ ಚಿಟ್‌ ಫಂಡ್‌ ವಹಿವಾಟನ್ನು 5 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.ಮೈಸೂರು ಸ್ಯಾಂಡಲ್‌ನ ಕೆಎಸ್‌‍ಡಿ ಸಿಎಲ್‌ ವಹಿವಾಟು ಈ ತಿಂಗಳಿನಲ್ಲಿ 180 ಕೋಟಿ ರೂ. ದಾಟಿದ್ದು ಐತಿಹಾಸಿಕ ದಾಖಲೆಯಾಗಿದೆ. ಒಟ್ಟು ವಹಿವಾಟನ್ನು ಮುಂದಿನ 3 ವರ್ಷದಲ್ಲಿ 5 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸುವ ಗುರಿ ಇದೆ ಎಂದರು. ಬಂಡವಾಳ ಹೂಡಿಕೆಯಲ್ಲಿ ಗಣನೀಯ ಸಾಧನೆಯಾಗಿದೆ ಎಂದು ತಿಳಿಸಿದರು ಕಳೆದ ಎರಡು ವರ್ಷಗಳ ಅವಧಿಯಲ್ಲಿ 115 ಒಡಂಬಡಿಕೆಗಳಿಂದ 6,58,660 ಕೋಟಿ ರೂ. ಹೂಡಿಕೆಯಾಗಿದ್ದು, 2,32,771 ಕೋಟಿ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಏಕಗವಾಕ್ಷಿ ಅನುಮೋದನಾ ಸಮಿತಿ 1,13,200 ಕೋಟಿ ರೂ. ಹೂಡಿಕೆಯ 906 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದ್ದು, 2,23,982 ಉದ್ಯೋಗಗಳು ಸೃಷ್ಟಿಯಾಗುತ್ತವೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 3,550 ಉದ್ಯೋಗಿಗಳು ಭಾಗವಹಿಸಿದ್ದು, 6,23,957 ಕೋಟಿ ರೂ.ಗಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳ ಲಾಗಿದೆ. ಅದರಲ್ಲಿ 4.03 ಲಕ್ಷ ಕೋಟಿ ರೂ. ಹೂಡಿಕೆಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ ಶೇ.75 ರಷ್ಟು ಬೆಂಗಳೂರಿನ ಹೊರವಲಯದಲ್ಲಿದ್ದು, ಶೇ.45 ರಷ್ಟು ಉತ್ತರ ಕರ್ನಾಟಕ ಭಾಗದಲ್ಲಿ ಹೂಡಿಕೆಯಾಗುತ್ತದೆ ಎಂದರು.
    ಬಂಡವಾಳ ಹೂಡಿಕೆದಾರರಿಗೆ ಉದ್ಯೋಗ ಸೃಷ್ಟಿ, ಹೂಡಿಕೆ, ಪರಿಸರ ಸ್ನೇಹಿ ಕ್ರಮಗಳನ್ನು ಆಧರಿಸಿ ವಿವಿಧ ರಿಯಾಯಿತಿ ಹಾಗೂ ಸೌಲಭ್ಯಗಳನ್ನು ನೀಡಲಾಗುತ್ತದೆ. ಕೈಗಾರಿಕಾ ಪ್ರದೇಶಗಳಿಗೆ ಸಮರ್ಪಕ ನೀರಿನ ವ್ಯವಸ್ಥೆಗಾಗಿ 3,600 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. 18 ಪ್ರದೇಶಗಳಲ್ಲಿ 44,165 ಎಕರೆಯಲ್ಲಿ ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದರು.
    ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನದಿಂದ ಕರ್ನಾಟಕ, 2024-25ನೇ ಸಾಲಿನಲ್ಲಿ 56 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ 2ನೇ ಸ್ಥಾನಕ್ಕೇರಿದೆ. 1,65,545 ಮಿಲಿಯನ್‌ ಡಾಲರ್‌ ರಫ್ತಿನೊಂದಿಗೆ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ ಎಂದು ವಿವರಿಸಿದರು.

    Verbattle
    Verbattle
    Verbattle
    ಆರೋಗ್ಯ ಕರ್ನಾಟಕ ಚಿತ್ರದುರ್ಗ Bengaluru ಮೈ ಮೈಸೂರು ಶಿಕ್ಷಣ ಸರ್ಕಾರ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.
    Next Article Blackmail ಪೂಜಾರಿ ಪೊಲೀಸ್ ಬಲೆಗೆ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamlop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • AnthonyTot on ಅಕ್ಕಿ ಬದಲಿಗೆ ಹಣ – ಹಿಂದೆ ಇದೆ ದೊಡ್ಡ ರಹಸ್ಯ
    • AnthonyTot on Toilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.