Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರಪ್ಪ ಪ್ರತ್ಯಸ್ತ್ರ….!
    ಸುದ್ದಿ

    ಈಶ್ವರಪ್ಪ ಪ್ರತ್ಯಸ್ತ್ರ….!

    vartha chakraBy vartha chakraApril 16, 2022Updated:April 16, 2022No Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಇದೀಗ ತಮ್ಮದೇ ಶೈಲಿಯಲ್ಲಿ ವಿರೋಧಿಗಳಿಗೆ ಸೆಡ್ಡು ಹೊಡೆಯಲು ತೀರ್ಮಾನಿಸಿದ್ದಾರೆ.
    ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ತಮ್ಮ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರೂ, ಸೊಪ್ಪು ಹಾಕದ ಈಶ್ವರಪ್ಪ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ತಮ್ಮ ದೈನಂದಿನ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.
    ಇವರನ್ನು ಸಂಪರ್ಕಿಸಿದ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬೆಳವಣಿಗೆಯಿಂದ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರವಾದಂತಾಗಿದೆ. ಹೀಗಾಗಿ ತಾವು ರಾಜೀನಾಮೆ ನೀಡುವುದು ಸೂಕ್ತ ಎಂದು ಹೇಳಿ ಈ ವಿಷಯದ ಬಗ್ಗೆ ಮಾತನಾಡಲು ಬೆಂಗಳೂರಿಗೆ ಬರುವಂತೆ ಸೂಚಿಸಿದ್ದರು.
    ಆದರೆ, ಇದಕ್ಕೆ ಸೊಪ್ಪು ಹಾಕದ ಈಶ್ವರಪ್ಪ ಇದರಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಅಲ್ಲದೆ, ತಮ್ಮ ವಿರುದ್ಧ ಯಾವುದೇ ದಾಖಲೆಗಳೂ ಇಲ್ಲ, ಕಾಂಗ್ರೆಸ್ ಈ ವಿಷಯವನ್ನು ರಾಜಕೀಯಕ್ಕೆ ಬಳಕೆ ಮಾಡಲು ಪ್ರಯತ್ನ ನಡೆಸಿದೆ ಇದನ್ನು ರಾಜಕೀಯವಾಗಿಯೇ ಎದುರಿಸಬೇಕು. ಅದಕ್ಕಾಗಿ ತಮ್ಮ ಬಳಿ ಎಲ್ಲಾ ಅಸ್ತ್ರಗಳಿವೆ, ಎದುರಿಸುತ್ತೇನೆ. ಇದಕ್ಕಾಗಿ ಯಾಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿ ರಾಜೀನಾಮೆ ಕೊಡಲು ನಿರಾಕರಿಸಿದ್ದಷ್ಟೇ ಅಲ್ಲ ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಲಿಲ್ಲ.
    ಕಾಂಗ್ರೆಸ್ ವಿರುದ್ಧ ಪ್ರತಿ ರಾಜಕೀಯ ಹೋರಾಟಕ್ಕೆ ನಿರ್ಧರಿಸಿದ ಅವರು ಇದರ ಕಾರ್ಯತಂತ್ರ ರೂಪಿಸಲು ಶಿವಮೊಗ್ಗಕ್ಕೆ ತೆರಳಿದರು. ಈ ವೇಳೆ ತಮ್ಮನ್ನು ಸಂಪರ್ಕಿಸಿದ ಪಕ್ಷದ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರಿಗೂ ತಮ್ಮ ನಿಲುವು ತಿಳಿಸಿದ ಈಶ್ವರಪ್ಪ ತಾವು ರಾಜೀನಾಮೆ ನೀಡಿದರೆ ಕಾಂಗ್ರೆಸ್ ಮಾಡುತ್ತಿರುವ ಆರೋಪ ಒಪ್ಪಿಕೊಂಡಂತಾಗುತ್ತದೆ.
    ಯಾವುದೇ ತಪ್ಪು ಮಾಡದೆ ಶಿಕ್ಷೆ ಯಾಕೆ ಅನುಭವಿಸಬೇಕು ಎಲ್ಲವನ್ನೂ ರಾಜಕೀಯವಾಗಿ ಎದುರಿಸುತ್ತೇನೆ ಎಂದು ಸಮಜಾಯಿಷಿ ನೀಡಿದರೆನ್ನಲಾಗಿದೆ.
    ಈಶ್ವರಪ್ಪ ಅವರ ಈ ಸಮರ್ಥನೆಗೆ ವರಿಷ್ಟರೂ ಕೂಡಾ ಸಮ್ಮತಿಸಿ ರಾಜೀನಾಮೆ ವಿಷಯ ಅಲ್ಲಿಗೆ ಮುಗಿಸುವ ಸಿದ್ದತೆಯಲ್ಲಿದ್ದರೆಂದು ಗೊತ್ತಾಗಿದೆ. ಈ ನಡುವೆ ಬಿಜೆಪಿ ಯುವ ನಾಯಕರೊಬ್ಬರು ಮಧ್ಯ ಪ್ರವೇಶಿಸಿ, ಇಡೀ ಬೆಳವಣಿಗೆಗೆ ರೋಚಕ ತಿರುವು ನೀಡಿರುವುದಾಗಿ ಬಿಜೆಪಿಯ ಮೂಲಗಳು ತಿಳಿಸಿವೆ.
    ಶಿವಮೊಗ್ಗ ರಾಜಕಾರಣದಲ್ಲಿ ಹಿಡಿತ ಸಾಧಿಸುವ ಮೂಲಕ ರಾಜ್ಯ ಮಟ್ಟದಲ್ಲಿ ಪ್ರಭಾವಿಯಾಗಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿರುವ ಈ ಯುವ ನಾಯಕ ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರಭಾವಿಯಾಗಿರುವಷ್ಟು ಕಾಲ ತಾವು ಎನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿ ಈ ಪ್ರಕರಣವನ್ನು ಬಳಕೆ ಮಾಡಿದರೆನ್ನಲಾಗಿದೆ.
    ಹೈಕಮಾಂಡ್ ಮಟ್ಟದಲ್ಲಿ ತಮಗಿರುವ ಪ್ರಭಾವ ಬಳಸಿದ ಈ ನಾಯಕ, ಸಂಘಟನಾ ಕಾರ್ಯದರ್ಶಿ ವರಿಷ್ಟರಿಗೆ ವಿವರ ನೀಡುವ ಮುನ್ನವೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂಲಕ ಪ್ರಕರಣದಲ್ಲಿ ಈಶ್ವರಪ್ಪ ತಪ್ಪಿತಸ್ಥರು ಎಂಬರ್ಥದ ವಿವರ ಮುಟ್ಟಿಸುವಲ್ಲಿ ಯಶಸ್ವಿಯಾಗುತ್ತಾರೆ. ಅಷ್ಟೇ ಅಲ್ಲ ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯುತ್ತೇವೆ ಎಂದು ಅರುಣ್ ಸಿಂಗ್ ಬಹಿರಂಗ ಹೇಳಿಕೆ ಕೊಡುವಂತೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ.
    ಈ ಎಲ್ಲಾ ಮಾಹಿತಿ ಪಡೆದ ಈಶ್ವರಪ್ಪ ಒತ್ತಡಕ್ಕೆ ಮಣಿದು ರಾಜೀನಾಮೆ ಕೊಟ್ಟರೂ ಅದಕ್ಕೂ ಮುನ್ನ ಅವರು ನಡೆಸಿದ ಚಟುವಟಿಕೆ ಹಾಗು ರಾಜೀನಾಮೆ ನಂತರ ನಡೆಸುತ್ತಿರುವ ವಿದ್ಯಮಾನ ಇದೀಗ ಪಕ್ಷದ ನಾಯಕತ್ವಕ್ಕೆ ಸವಾಲಾಗಿ ಪರಿಣಮಿಸಿದೆ.
    ರಾಜೀನಾಮೆಗೂ ಮುನ್ನ ಶಿವಮೊಗ್ಗದಲ್ಲಿ ತಮ್ಮ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆ ನಡೆಸಿದ ಅವರು ಪಕ್ಷದ ಕಚೇರಿಯಲ್ಲೇ ಹೋಮ ಹವನ ನೆರವೇರಿಸುವ ಮೂಲಕ ಸಂದೇಶವೊಂದನ್ನು ರವಾನಿಸಿದರು. ಈ ವೇಳೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಮಹಿಳಾ ಕಾರ್ಯಕರ್ತರು ಶಿವಮೊಗ್ಗದಲ್ಲಿ ಈಶ್ವರಪ್ಪ ಅವರನ್ನು ಸುಲಭವಾಗಿ ಪರಿಗಣಿಸುವಂತಿಲ್ಲವೆಂಬ ಸಂದೇಶ ರವಾನಿಸಿದರು.
    ಇಷ್ಟಕ್ಕೆ ಸುಮ್ಮನಾಗದ ಅವರು, ಶಿವಮೊಗ್ಗದಿಂದ ಬೆಂಗಳೂರಿಗೆ ಬರಲು ಹಿಡಿದ ರಸ್ತೆ ಮಾರ್ಗ ಸಹ ಗಮನ ಸೆಳೆಯಿತು. ತಮ್ಮೊಂದಿಗೆ ಬೆಂಬಲಿಗರ 150 ಕಾರುಗಳೊಂದಿಗೆ ಕಡೂರಿಗೆ ತೆರಳಿ ಅಲ್ಲಿ ಬೆಂಬಲಿಗರ ಸಭೆ ನಡೆಸಿದರು. ನಂತರ ತಿಪಟೂರು, ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ಬೆಂಬಲಿಗರ ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು.
    ಅಲ್ಲಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದು ಸಿಎಂ ನಿವಾಸಕ್ಕೆ ಅಗಮಿಸುವ ವೇಳೆಗೆ ಅಲ್ಲಿ ಅವರ ಬೆಂಬಲಿಗರ ಪಡೆಯೇ ನೆರೆದಿತ್ತು. ನಂತರ ಇವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರಾದ ಮುರುಗೇಶ್ ನಿರಾಣಿ, ಅರಗ ಜ್ಞಾನೇಂದ್ರ , ಎಂ.ಟಿ.ಬಿ.ನಾಗರಾಜ್, ಬೈರತಿ ಬಸವರಾಜ್ ಹಾಜರಿದ್ದು ಬೆಂಬಲ ವ್ಯಕ್ತಪಡಿಸಿದರು. ಇದೆಲ್ಲವೂ ಈಶ್ವರಪ್ಪ ಅವರ ಕಾರ್ಯತಂತ್ರದ ಭಾಗ.
    ಮರುದಿನ ತಮ್ಮ ನಿವಾಸದಲ್ಲಿ ಮಠಾಧೀಶರೊಂದಿಗೆ ಸಭೆ ನಡೆಸಿದರು. ರಾಜ್ಯದ ವಿವಿಧ ಭಾಗಗಳಲ್ಲಿರುವ ಹಿಂದುಳಿದ, ದಲಿತ ಸಮುದಾಯಕ್ಕೆ ಸೇರಿದ ಮಠಾಧೀಶರು ಹಾಜರಾಗಿ ಸಭೆ ನಡೆಸಿದರು. ಇದರಲ್ಲಿ ಕನಕಗುರುಪೀಠದ
    ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ,ಕುಂಚಿಟಿಗ ಮಹಾಸಂಸ್ಥಾನ ಮಠದ ಶಾಂತವೀರ ಸ್ವಾಮೀಜಿ,
    ಭೋವಿಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಮಾದರಚನ್ನಯ್ಯ ಸ್ವಾಮೀಜಿ, ಭಗೀರಥ ಪೀಠದ ಪುರುಷೋತ್ತಮನಾಂದಪುರಿ ಸ್ವಾಮೀಜಿ ಕನಕಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ,
    ನಾರಾಯಣ ಗುರುಪೀಠದ ರೇಣುಕಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಬಸವಮಾಚಿದೇವ ಮಹಾಸ್ವಾಮೀಜಿ ಉಪಸ್ಥಿತರಿದ್ದು,ಈಶ್ವರಪ್ಪ ಅವರ ಹೋರಾಟದಲ್ಲಿ ಬೆಂಬಲಕ್ಕೆ ನಿಲ್ಲುವುದಾಗಿ ಭರವಸೆ ನೀಡಿದರೆನ್ನಲಾಗಿದೆ.
    ಈ ಹಿಂದೆ ಯಡಿಯೂರಪ್ಪ ಅಧಿಕಾರ ವಂಚಿತರಾದಾಗ ವೀರಶೈವ-ಲಿಂಗಾಯತ ಮಠಗಳು ಅವರ ಬೆಂಬಲಕ್ಕೆ ನಿಂತಂತೆ ಇದೀಗ ದಲಿತ ಮತ್ತು ಹಿಂದುಳಿದ ಸಮುದಾಯಕ್ಕೆ ಸೇರಿದ ಮಠಾಧೀಶರು ಇವರ ಬೆಂಬಲಕ್ಕೆ ನಿಲ್ಲುವ ಮೂಲಕ ಹಿಂದುಳಿದ ವರ್ಗಕ್ಕೆ ಸೇರಿದ ತಮ್ಮನ್ನು ಮುಟ್ಟುವುದು ಅಷ್ಟು ಸುಲಭವಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಅಷ್ಟೇ ಅಲ್ಲ ಪಕ್ಷ ಕೂಡಾ ತಾವೊಬ್ಬ ಹಿಂದುಳಿದ ಸಮುದಾಯದ ನಾಯಕನಾಗಿದ್ದು ತಮ್ಮ ನ್ನು ಸೂಕ್ತ ರೀತಿಯಲ್ಲಿ ಗಮನಿಸಿಕೊಳ್ಳಬೇಕು ಎಂಬ ಸಂದೇಶ ರವಾನಿಸಿದ್ದಾರೆ.
    ಮಂತ್ರಿ ಸ್ಥಾನದ ರಾಜಿನಾಮೆ ಪಡೆದ ಬಿಜೆಪಿ ನಾಯಕರಿಗೆ ಇದೀಗ ಈಶ್ವರಪ್ಪ ಪ್ರಯೋಗಿಸುತ್ತಿರುವ ಪ್ರತ್ಯಸ್ತ್ರ ತಲೆಬಿಸಿ ಮಾಡಿದೆ.

    Verbattle
    Verbattle
    Verbattle
    #eshwarappa Politics
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಕುಮಾರಣ್ಣ..? ಮಾಜಿ ಶಾಸಕ ನರೇಂದ್ರಸ್ವಾಮಿ ಕಿಡಿ
    Next Article ಲಕ್ಷ್ಮಿಗೆ ನಿರಾಣಿ ಸವಾಲು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug on ಎದೆ ನಡುಗಿಸಿದ ಭೀಕರ ಹತ್ಯೆ.
    • Williamdug on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Tylermem on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.