Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉತ್ತರಾದಿ ಮಠದ ವಾದಕ್ಕೆ ಪುರಸ್ಕಾರ
    Trending

    ಉತ್ತರಾದಿ ಮಠದ ವಾದಕ್ಕೆ ಪುರಸ್ಕಾರ

    vartha chakraBy vartha chakraAugust 8, 202424 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.8-
    ಹಲವು ದಶಕಗಳಿಂದ ಉತ್ತರಾದಿ ಮಠ ಹಾಗೂ ಮಂತ್ರಾಲಯದ ರಾಘವೇಂದ್ರಸ್ವಾಮಿ ಮಠದ ನಡುವಿನ ಕೊಪ್ಪಳದ ಆನೆಗುಂದಿಯ ನವವೃಂದಾವನದ ಭೂ ಮಾಲಿಕತ್ವದ ವಿವಾದದ
    ಬಗೆಹರಿಯುವ ನಿಟ್ಟಿನಲ್ಲಿ ನಿರ್ಣಾಯಕ ತೀರ್ಮಾನ ವೊಂದು ಹೊರಬಿದ್ದಿದೆ.
    ಉಭಯ ಮಠಗಳ ನಡುವಿನ ಆಸ್ತಿ ವಿವಾದ ಬಗೆಹರಿಸುವ ಸಂಬಂಧ ಸರ್ವೆ ನಂಬರ್ 192ರ ಒಟ್ಟು ಜಮೀನಿನ ಜಂಟಿ ಸರ್ವೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ನೀಡಿತ್ತು.
    ಈ ಆದೇಶ ಪ್ರಶ್ನಿಸಿ ಉತ್ತರಾದಿ ಮಠದ ಪೀಠಾಧಿಪತಿ ಸತ್ಯಾತ್ಮತೀರ್ಥ ಸ್ವಾಮೀಜಿ ಮೇಲ್ಮನವಿ ಸಲ್ಲಿಸಿದ್ದರು.
    ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಆದೇಶವನ್ನು ಅಮಾನತ್ತಿನಲ್ಲಿರಿಸಿದೆ.
    ಉತ್ತರಾದಿ ಮಠದ ಪರ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಮುಕುಲ್ ರೋಹಟಗಿ ವಾದ ಮಂಡಿಸಿದರು. ವಿನಾಯಕ ಕುಲಕರ್ಣಿ ಹಾಗೂ ಅನಿಲ್ ಕೆಂಭಾವಿ ವಕಾಲತ್ತು ವಹಿಸಿದ್ದರು.
    ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಮೇಲ್ಮನವಿಯನ್ನು ವಿಚಾರಣೆಗೆ ಅಂಗೀಕರಿಸಿತು. ಅಲ್ಲದೇ, ಕೊಪ್ಪಳ ಜಿಲ್ಲೆ ಆನೆಗುಂದಿಯಲ್ಲಿ ನವವೃಂದಾವನ ಗಡ್ಡೆ ಇರುವ ಸರ್ವೆ ನಂಬರ್ 192ರ ಜಮೀನಿನ ಜಂಟಿಯಾಗಿ ಹೊಸದಾಗಿ ಸರ್ವೆ ನಡೆಸಿ, ಅದರಂತೆ ಕಂದಾಯ ಮತ್ತು ಸರ್ವೆ ದಾಖಲೆಗಳನ್ನು ಸರಿಪಡಿಸುವಂತೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಗೆ ನಿರ್ದೇಶನ ನೀಡಿ 2024ರ ಜುಲೈ 3ರಂದು ಏಕಸದಸ್ಯ ಪೀಠ ನೀಡಿದ ಆದೇಶವನ್ನು ಅಮಾನತ್ತಿದೆ. ಜೊತೆಗೆ, ಮುಂದಿನ ವಿಚಾರಣೆವರೆಗೆ ಏಕಸದಸ್ಯ ನ್ಯಾಯಪೀಠದ ಆದೇಶದಂತೆ ಮುಂದುವರೆಯುವಂತಿಲ್ಲ ಎಂದು ಆದೇಶಿಸಿ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿತು.
    ಆನೆಗುಂದಿಯ ಸರ್ವೆ ನಂಬರ್ 192ರಲ್ಲಿ ಒಟ್ಟು 75 ಎಕರೆ ಜಮೀನು ಇತ್ತು. 1916ರಲ್ಲಿ ಉತ್ತರಾದಿ ಮಠವು ಈ ಜಮೀನು ಖರೀದಿಸಿತ್ತು. ಬಳಿಕ ಈ ಜಮೀನಿಗೆ ಸಂಬಂಧಿಸಿದಂತೆ ವ್ಯಾಜ್ಯ ಉಂಟಾಯಿತು. ಕೆಲ ವರ್ಷಗಳ ವ್ಯಾಜ್ಯ ನಡೆದ ನಂತರ ಭೂ ಮಾಲಿಕತ್ವದ ಹಕ್ಕು ಪ್ರತಿಪಾದಿಸಿದ ಉತ್ತರಾದಿ ಮಠ ಜಮೀನ ಕಂದಾಯ ದಾಖಲೆಗಳಲ್ಲಿ ಮಠದ ಹೆಸರು ದಾಖಲಿಸುವಂತೆ ಭೂ ದಾಖಲೆಗಳ ಸಹಾಯಕ ಅಧೀಕ್ಷಕರಿಗೆ ಮನವಿ ಸಲ್ಲಿಸಿತ್ತು.
    ಕಳೆದ 1974ರ ಏಪ್ರಿಲ್ 18ರಂದು 14 ಎಕರೆ 7 ಗುಂಟೆ ಜಮೀನು ಮರು ಮಂಜೂರು ಮಾಡಲಾಗಿತ್ತು. ಆದರೆ, ಹೆಚ್ಚು ಜಮೀನು ಇದ್ದು, ಸರಿಪಡಿಸುವಂತೆ ಭೂ ದಾಖಲೆಗಳ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಗಿತ್ತು. ಆಗ ಜಮೀನು 27 ಎಕರೆ 30 ಗುಂಟೆ ಆಯಿತು. ಇದನ್ನು ಆಕ್ಷೇಪಿಸಿ ರಾಘವೇಂದ್ರಸ್ವಾಮಿ ಮಠ 2014ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದರ ಸುದೀರ್ಘ ವಿಚಾರಣೆ ನಡೆದು, ಮರು ಸರ್ವೆಗೆ ನ್ಯಾಯಾಲಯ ಆದೇಶಿಸಿತ್ತು. ಆ ಆದೇಶ ಪ್ರಶ್ನಿಸಿ ಉತ್ತರಾದಿಮಠ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು

    Verbattle
    Verbattle
    Verbattle
    Bangalore Karnataka News Trending Varthachakra ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಕನಕಪುರಕ್ಕೆ ಯಾವಾಗ ಬರುತ್ತಾರೆ ಗೊತ್ತಾ.
    Next Article ಮಹಾರಾಷ್ಟ್ರದಲ್ಲಿತ್ತು ಡ್ರಗ್ಸ್ Factory.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • aviator_hnkr on ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • RicardoCor on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.