ಬೆಂಗಳೂರು,ಮಾ.27:
ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ತಮ್ಮನ್ನು ಉಚ್ಛಾಟಿಸಿರುವ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್
ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತಂತೆ ಸುಧೀರ್ಘ ಹೇಳಿಕೆಯನ್ನು ನೀಡಿರುವ ಅವರು
ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರನ್ನು ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನನ್ನು ಉಚ್ಚಾಟನೆ ಮಾಡಿರುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ’ ಎಂದು ಟೀಕಿಸಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು, ಯಾರ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ನಿಂದ ಎಂಬುದನ್ನು ಪಕ್ಷದ ಹೈಕಮಾಂಡ್ ವಿಶ್ಲೇಷಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ನ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲಬುರಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ’ ಎಂದು ಬಣ್ಣಿಸಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು, ಯಾರ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ನಿಂದ ಎಂಬುದನ್ನು ಪಕ್ಷದ ಹೈಕಮಾಂಡ್ ವಿಶ್ಲೇಷಿಸಬೇಕು’ ಎಂದು ಆಗ್ರಹಿಸಿದ್ದಾರೆ
ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ
ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ’ ಎಬುದನ್ನು ಹೈಕಮಾಂಡ್ ಗಮನಿಸಬೇಕು ಎಂದಿದ್ದಾರೆ
ಹಿಂದುತ್ವವಾದದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ರಿಂದಲ್ಲ ಎಂದು ಗುಡುಗಿದ್ದಾರೆ.
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ. ವಾಲ್ಮೀಕಿ ಹಗರಣ, ದಲಿತರ ಅನುದಾನದ ದುರ್ಬಳಕೆಯನ್ನು ಖಂಡಿಸಿ ಹೋರಾಟ ರೂಪಿಸಿದ್ದೆವು. ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆಪಿಸಿ ಅಧ್ಯಕ್ಷರಾದ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.
ಪ್ರತಿಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆ, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದೇನೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದೇನೆ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ವಾಗಿದೆ ಎಂದು ಕುಟುಕಿದ್ದಾರೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
