Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.
    ಸಿನೆಮ

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    vartha chakraBy vartha chakraJune 3, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.3:
    ಕನ್ನಡ ಭಾಷೆಯ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಬಹುಭಾಷಾ ನಟಿ ಕಮಲ ಹಾಸನ್ ಅವರಿಗೆ ರಾಜ್ಯ ಹೈಕೋರ್ಟ್ ತಪರಾಕಿ ನೀಡಿದೆ.
    ಕನ್ನಡ ಭಾಷೆಯ ಕುರಿತು ಹೇಳಿಕೆ ನೀಡಿರುವ ಕಮಲಹಾಸನ್ ಅವರು ಭಾಷಾ ತಜ್ಞರೆ ಅಥವಾ ಇತಿಹಾಸಕಾರರೇ ಎಂದು ಖಾರವಾಗಿ ಪ್ರಶ್ನಿಸಿದೆ.
    ಕಮಲಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ಕೊಡಿಸಬೇಕು ಎಂದು ಕೋರಿ ಅವರ ಪರ ವಕೀಲರು ಸಲ್ಲಿಸಿರುವ ಆರ್ಜಿಯನ್ನು ನ್ಯಾಯಮೂರ್ತಿ ನಾಗ ಪ್ರಸನ್ನ ವಿಚಾರಣೆ ನಡೆಸಿದರು.
    ಈ ವೇಳೆ ಅರ್ಜಿದಾರರನ್ನು ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು ನೆಲ, ಭಾಷೆಯ ಜೊತೆ ಜನರ ಭಾವನೆ ಇರುತ್ತದೆ. ಜನರ ಭಾವನೆಗೆ ಯಾರೂ ಧಕ್ಕೆ ತರಬಾರದು. ಜನರು ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ. ಕಮಲ್‌ ಹಾಸನ್‌ ಕ್ಷಮೆ ಕೇಳಿದ್ದಾರಾ ಎಂದು ಪ್ರಶ್ನಿಸಿದರು.
    ಭಾಷೆ ಹುಟ್ಟಿದರ ಬಗ್ಗೆ ನೀವು ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ ಅಥವಾ ಇತಿಹಾಸಕಾರರೇ? ಒಂದೇ ಒಂದು ಕ್ಷಮೆ ಕೇಳೋದಕ್ಕೆ ಯಾಕೆ ಇಷ್ಟೊಂದು ಹಾವ ಭಾವ? ಈ ಹಿಂದೆ ರಾಜಗೋಪಾಲಾಚಾರಿ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಕ್ಷಮೆಯಾಚನೆ ಮಾಡಿದ್ದು ನಿಮಗೆ ಗೊತ್ತಿಲ್ಲವೆ ಎಂದು ಪ್ರಶ್ನಿಸಿದರು.
    350 ಕೋಟಿ ರೂ. ಸಿನಿಮಾಗೆ ಹಾಕಿದ್ದೀರಿ ಎನ್ನುತ್ತೀರಿ. ಭಾವನೆಗೆ ಧಕ್ಕೆ ಮಾಡಿ ಇಲ್ಲಿ ಸಂಪಾದನೆ ಮಾಡಬೇಕಾ? ಎಲ್ಲವೂ ಸರಾಗವಾಗಿ ಆಗಬೇಕು ಅಂದರೆ ಕ್ಷಮೆಯನ್ನು ಕೋರಿ. ಅಭಿವ್ಯಕ್ತಿ ಸ್ವಾತಂತ್ರ‍್ಯದಿಂದ ಭಾವನೆ ಧಕ್ಕೆ ಆಗಬಾರದು. ಕೋಟ್ಯಂತರ ರೂಪಾಯಿ ಹಾಕಿದ್ದೀರಿ. ಕರ್ನಾಟಕದಲ್ಲಿ ಯಾಕೆ ಸಿನಿಮಾ ಬಿಡುಗಡೆಮಾಡುತ್ತೀರಿ? ಕರ್ನಾಟಕವನ್ನು ಬಿಟ್ಟು ಬಿಡಿ ಎಂದು ಖಾರವಾಗಿ ತಿಳಿಸಿದರು.
    ಈ ಸಂದರ್ಭದಲ್ಲಿ ಸಿನಿಮಾ ನೋಡುವುದು ಎಲ್ಲರ ಮೂಲಭೂತ ಹಕ್ಕು. ಹೀಗಾಗಿ ಭದ್ರತೆಗೆ ನೀಡಲು ಮನವಿ ಮಾಡುತ್ತಿದ್ದೇವೆ. ಏನೋ ಹೇಳಲು ಹೋಗಿ ಏನೋ ಆಗಿದೆ ಎಂದು ಕಮಲ್‌ ಪರ ವಕೀಲರು ಮನವಿ ಮಾಡಿಕೊಂಡರು.
    ಇದಕ್ಕೆ ನಾಲಿಗೆ ತಪ್ಪಾಗಿ ಹೇಳಿದರೆ ಇಷ್ಟು ಹೊತ್ತಿಗೆ ಕ್ಷಮೆ ಕೇಳಬಹುದಿತ್ತು. ಚಿತ್ರ ಮಂದಿರಕ್ಕೆ ಭದ್ರತೆ ಬೇಕಾ? ಬೇಡ್ವಾ ಎಂದು ಆದೇಶ ಮಾಡುವ ಮೊದಲು ಕ್ಷಮೆ ಕೇಳಲಿ. ಒಂದು ವೇಳೆ ಇತಿಹಾಸಕಾರ ದಾಖಲೆ ಸಮೇತ ಹೇಳಿದರೆ ಚರ್ಚೆ ವಿಷಯ ಆಗುತ್ತಿತ್ತು. ಕ್ಷಮೆ ಕೇಳದ ಹೊರತು ಹೇಳಿಕೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಸೂಚಿಸಿದರು.

    ಕರ್ನಾಟಕ ನ್ಯಾಯ Bengaluru ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !
    Next Article ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.
    vartha chakra
    • Website

    Related Posts

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • beyss on ತಲೆ ತಿರುಕರು ಹೀಗೆ ಮಾತನಾಡುವುದು – Yediyurappa
    • RonaldClore on ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ ಅಂದ್ರು ಸಿ.ಎಂ.
    • nzoyd on ಪೋಸ್ಟರ್ ಅಂಟಿಸಿದವರಿಗೆ ಸಿಕ್ತು ನೋಡಿ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe