Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    ರಾಜಕೀಯ

    ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.

    vartha chakraBy vartha chakraDecember 5, 2024158 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ
    ಅಕ್ರಮ ಆರೋಪದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಗೆ ಜಾರಿ ನಿರ್ದೇಶನಾಲಯ ಪತ್ರ ಬರೆದಿದ್ದು ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ತಿಳಿಸಿದೆ
    ಭೂಮಾಲೀಕರಿಗೆ 50:50ರ ಅನುಪಾತದಲ್ಲಿ ಪರಿಹಾರ ನಿವೇಶನ ನೀಡುವ ನಿಯಮವನ್ನು ರದ್ದುಪಡಿಸಿದ ಹಲವು ತಿಂಗಳ ನಂತರವೂ ಮುಡಾ 252 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದೆ ಎಂಬುದನ್ನು ಜಾರಿ ನಿರ್ದೇಶನಾಲಯ ಪತ್ರದಲ್ಲಿ ಉಲ್ಲೇಖಿಸಿದೆ.
    ಆ ಅವಧಿಯಲ್ಲಿ ಮುಡಾ ಅಧ್ಯಕ್ಷರಾಗಿದ್ದ ಕೆ.ಮರೀಗೌಡ ಮತ್ತು ಆಯುಕ್ತರಾಗಿದ್ದ ಜಿ.ಟಿ.ದಿನೇಶ್‌ ಕುಮಾರ್‌ ಈ ಅಕ್ರಮದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ’ ಎಂದು ಹೇಳಿದೆ.
    ಮುಖ್ಯಮಂತ್ರಿ ಪತ್ನಿ ಪಾರ್ವತಿ ಅವರಿಗೆ ಹಂಚಿರುವ ನಿವೇಶನ​ಗಳೇ ಅಕ್ರಮವಾಗಿದ್ದು, ಈ ಸಂಬಂಧ ತಮ್ಮ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ತಿಳಿಸಿದೆ.
    ಭೂಸ್ವಾಧೀನ ಮಾಡಿಕೊಳ್ಳಲಾದ ಜಮೀನುಗಳಿಗೆ 50:50ರ ಅನುಪಾತದಲ್ಲಿ ಪರಿಹಾರ ನಿವೇಶನಗಳನ್ನು ನೀಡುವ ಸಂಬಂಧ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಿಯಮಗಳು-2009’ಕ್ಕೆ 2015ರಲ್ಲಿ ತಿದ್ದುಪಡಿ ತರಲಾಗಿತ್ತು. ಈ ನಿಯಮದ ಅನ್ವಯವೇ ಸಾವಿರಾರು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. 2023ರ ಅಕ್ಟೋಬರ್‌ನಲ್ಲಿ 50:50ರ ಅನುಪಾತವನ್ನು ರದ್ದುಪಡಿಸಲಾಗಿತ್ತು ಎಂದು ಇ.ಡಿ ವಿವರಿಸಿದೆ.
    ಹಿಂದಿನ ವರ್ಷವೇ ನಿಯಮ ರದ್ದಾಗಿದ್ದರೂ, 2024ರ ಮಾರ್ಚ್‌ ಅಂತ್ಯದವರೆಗೆ 252 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಈ ಹಂಚಿಕೆಗಳಿಗೆ ಯಾವುದೇ ಅನುಮತಿ ಪಡೆದಿಲ್ಲ. ಮರೀಗೌಡ ಮತ್ತು ದಿನೇಶ್‌ ಕುಮಾರ್‌ ಅವರ ಮೌಖಿಕ ಸೂಚನೆಯಂತೆ ಈ ಪ್ರಕ್ರಿಯೆ ನಡೆಸಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಹೇಳಿದೆ.
    ಇದೊಂದು ದೊಡ್ಡ ಪ್ರಮಾಣದ ದಂಧೆಯಾಗಿದ್ದು, ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಕೇಳಿದ ನಿವೇಶನಗಳನ್ನೇ ಹಂಚಿಕೆ ಮಾಡಲಾಗಿದೆ. 252 ನಿವೇಶನಗಳನ್ನೂ ಒಳಗೊಂಡು ಒಟ್ಟು 1,094 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಜಮೀನಿನ ಮಾಲೀಕರೇ ಅಲ್ಲದವರಿಗೆ ಪರಿಹಾರ ನಿವೇಶನ ನೀಡಲಾಗಿದೆ. ಅವು ರಿಯಲ್‌ ಎಸ್ಟೇಟ್‌ ಉದ್ಯಮಿಗಳಿಗೆ ವರ್ಗಾವಣೆಯಾಗಿದ್ದು, ಅವರು ಅವುಗಳನ್ನು ಮಾರುಕಟ್ಟೆ ದರದಲ್ಲಿ ಮಾರಾಟ ಮಾಡಿದ್ದಾರೆ ಎಂದು ವಿವರಿಸಿದೆ.
    ಮುಡಾ ವ್ಯಾಪ್ತಿಯಲ್ಲಿ ಒಟ್ಟು 700 ಕೋಟಿ ಮೌಲ್ಯದ 1 ಸಾವಿರದ 95 ನಿವೇಶನ​ಗಳನ್ನು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಹಾಗೂ ಪ್ರಭಾವಿಗಳಿಗೆ ಅಕ್ರಮವಾಗಿ ಹಂಚಲಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದ್ದು ಈ ಬಗ್ಗೆ ಕ್ರಮವಹಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸಲಹೆ ಮಾಡಿದೆ.

    Bangalore Karnataka News Politics Varthachakra ಕರ್ನಾಟಕ Bengaluru ಮೈ ಮೈಸೂರು Business ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯುಐ’ ಸಿನಿಮಾ ಪ್ರಚಾರ: ಧಾರವಾಡದಲ್ಲಿ ಕಾಲೇಜು ದಿನಗಳ ನೆನಪು ಮಾಡಿಕೊಂಡ ಉಪ್ಪಿ
    Next Article ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TimothyNug on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • manchester cigarettes on May 3, 2023 51st Year Free Mass Marriage at Sri Kshetra Dharmasthala
    • double happiness cigarette on ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe