ಬೆಂಗಳೂರು,ಮಾ.4-ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆದಿರುವ ರನ್ಯಾ ರಾವ್ ಅವರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು.
ನಟಿ ರನ್ಯಾ ರಾವ್ ಪೊಲೀಸ್ ಮಹಾ ನಿರ್ದೇಶಕ ( ಡಿಜಿಪಿ) ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ರನ್ಯಾ ದುಬೈನಿಂದ , ನಗರಕ್ಕೆ ನಿನ್ನೆ ರಾತ್ರಿ ಮರಳಿದ್ದಾರೆ. Bengaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ನ ಡಿಆರ್ಐ ಅಧಿಕಾರಿಗಳು ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಾಣಿಕೆ ಮಾಡುತ್ತಿದ್ದರು ಎಂಬ ಆರೋಪದ ರನ್ಯಾ ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ.
ಪೊಲೀಸರೂ ವಶಕ್ಕೆ:
ಇನ್ನೂ ಬಂಧಿತ ಐಪಿಎಸ್ ಅಧಿಕಾರಿ ಸಂಬಂಧಿಯ ಎಸ್ಕಾರ್ಟ್ಗೆ ಬಂದಿದ್ದ ಪೊಲೀಸರನ್ನೂ ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೀವು ನೀವು ಸ್ಮಗ್ಲಿಂಗ್ಗೆ ಸಹಾಯ ಮಾಡುತ್ತಿದ್ದೀರಿ ಎಂದು ಹೇಳಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ.
ರನ್ಯಾ ಜನಿಸಿದ್ದು 1991ರಲ್ಲಿ. ಅವರು ಮೂಲತಃ ಚಿಕ್ಕಮಗಳೂರಿನವರು. ನಟನಾ ವೃತ್ತಿ ಆರಂಭಿಸಲು ಬೆಂಗಳೂರಿಗೆ ಬಂದರು. 2014ರಲ್ಲಿ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಈ ಚಿತ್ರದಲ್ಲಿ ಮಾನಸಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರು. 2016ರಲ್ಲಿ ತಮಿಳಿನ ಸಿನಿಮಾ ಒಂದನ್ನು ಮಾಡಿದರು. ಆದರೆ, ಇದು ಅಷ್ಟಾಗಿ ಗೆಲುವು ತಂದುಕೊಡಲಿಲ್ಲ.
2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಪಟಾಕಿ’ ಸಿನಿಮಾದಲ್ಲಿ ಸಂಗೀತಾ ಹೆಸರಿನ ಪಾತ್ರ ಮಾಡಿದರು. ಆ ಬಳಿಕ ಅವರಿಗೆ ಅಷ್ಟಾಗಿ ಆಫರ್ಗಳು ಬರಲೇ ಇಲ್ಲ. ಆ ಬಳಿಕ ಅವರು ಸಿನಿಮಾ ಮಾಡಿಲ್ಲ. ಈಗ ಅವರು ಅಕ್ರಮ ಚಿನ್ನ ಸಾಗಣೆ ಮಾಡಿದ ಆರೋಪದಲ್ಲಿ ಸುದ್ದಿ ಆಗಿದ್ದಾರೆ.
Previous Articleಕಳ್ಳತನ ಮಾಡಿದ್ರಾ ಐಪಿಎಸ್ ರೂಪಾ ಮೌದ್ಗೀಲ್
Next Article ಸಿನಿಮೀಯ ಶೈಲಿಯಲ್ಲಿ ಮೋಸ್ಟ್ ವಾಂಟೆಡ್ ಅರೆಸ್ಟ್