Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಿವಾರ ಹಾಕಿ ಬರಬಹುದಂತೆ
    ಪ್ರಚಲಿತ

    ಜನಿವಾರ ಹಾಕಿ ಬರಬಹುದಂತೆ

    vartha chakraBy vartha chakraApril 28, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.28:
    ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳಿಗಾಗಿ ರೈಲ್ವೆ ನೇಮಕಾತಿ ಮಂಡಳಿ ನಡೆಸುತ್ತಿರುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸರ, ಕಾಲುಂಗುರ ಉಡುದಾರ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಧರಿಸಿ ಪರೀಕ್ಷಾ ಕೊಠಡಿಗೆ ಬರುವಂತಿಲ್ಲ ಎಂದು ನೀಡಿರುವ ಸೂಚನೆ ವಿವಾದ ಸೃಷ್ಟಿಸಿದೆ.
    ವಿಶ್ವ ಹಿಂದೂ ಪರಿಷತ್, ಅಖಿಲ ಭಾರತ ಬ್ರಾಹ್ಮಣ ಸಭಾ ಸೇರಿದಂತೆ ವಿವಿಧ ಸಂಘಟನೆಗಳು ರೈಲ್ವೆ ನೇಮಕಾತಿ ಮಂಡಳಿಯ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಇಲಾಖೆ ಎಚ್ಚೆತ್ತುಕೊಂಡಿದೆ.
    ರೈಲ್ವೆ ನೇಮಕಾತಿ ಮಂಡಳಿಯ ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು. ಈ ಕುರಿತಾಗಿ ಹೊರಡಿಸಿರುವ ಸುತ್ತೋಲೆಯನ್ನು ಮಾರ್ಪಾಡು ಮಾಡುವಂತೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಮಂತ್ರಿ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಈ ಕುರಿತು ತಮಗೆ ಮಂಗಳೂರು ಕ್ಷೇತ್ರದ ಬಿಜೆಪಿ ಸಂಸದ ಕ್ಯಾ. ಬಿಜೆಪಿ ಚೌಟ ಅವರು ಬರೆದಿರುವ ಪತ್ರವನ್ನು ಉಲ್ಲೇಖಿಸಿರುವ ಮಂತ್ರಿ ಸೋಮಣ್ಣ ಅವರು ತಕ್ಷಣವೇ ಪರಿಷ್ಕೃತ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ
    ರೈಲ್ವೆ ಇಲಾಖೆಯ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಹುದ್ದೆಗೆ ಏ.29ರಂದು ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮಂಗಳಸೂತ್ರ, ಕಾಲುಂಗುರ,ಜನಿವಾರ, ಕೈಬಳೆ ಇನ್ನಿತರ ಎಲ್ಲವುಗಳನ್ನೂ ತೆಗೆದಿಟ್ಟು ಪರೀಕ್ಷಾ ಕೊಠಡಿ ಪ್ರವೇಶ ಮಾಡುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
    ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಕ್ರಮ ತೀವ್ರ ವಿವಾದಕ್ಕೆ ಒಳಗಾಗಿತ್ತು. ಇದಾದ ಬೆನ್ನೆಲ್ಲೆ ಅಂತಹದ್ದೇ ಆದೇಶ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಗೂ ನೀಡಿರುವುದು ಆಕ್ಷೇಪಕ್ಕೆ ಕಾರಣವಾಗಿತ್ತು. ಪ್ರವೇಶ ಪತ್ರದಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಅಭ್ಯರ್ಥಿಗಳು ಹೊಂದಿರಬಾರದು ಎಂದು ನಮೂದಿಸಲಾಗಿದೆ
    ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ ಆಕ್ಷೇಪಿಸಿದ್ದು, ಈ ರೀತಿಯ ಆದೇಶ ಸರಿಯಲ್ಲ. ಇತ್ತೀಚಿಗೆ ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆಗೆ ದಕ್ಕೆ ತಂದಿದೆ. ದೇಶಾದ್ಯಂತ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣು ಮಗಳು ತಾಳಿ ಸರ ಕಳಚುವಂತೆ, ಜನಿವಾರ,ಶಿವದಾರ, ಉಡುದಾರ ತೆಗೆಯುವಂತೆ ಹೇಳುವುದು ಕೋಟ್ಯಂತರ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗೆ ನೋವು ತರುತ್ತದೆ” ಎಂದಿದೆ.

    ಧರ್ಮ ಧಾರ್ಮಿಕ ಬಿಜೆಪಿ Bengaluru
    Share. Facebook Twitter Pinterest LinkedIn Tumblr Email WhatsApp
    Previous ArticleKMF ಅಧ್ಯಕ್ಷರಾಗಲು ಡಿಕೆ ಸುರೇಶ್ ತಯಾರಿ
    Next Article ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    December 9, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethMef on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • playboy888_pfOn on ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • kypit kyrsovyu_dsOn on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe