ಬೆಂಗಳೂರು,ಆ.29:
ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕಾನೂನಿನ ಕುಣಿಕೆಯಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾರಾಗಿದ್ದಾರೆ.
ಡಿಕೆ ಶಿವಕುಮಾರ್ ಅವರು ತಮ್ಮ ನಿಗದಿತ ಆದಾಯ ಮೂಲಕ್ಕಿಂತ ಹೆಚ್ಚು ಆದಾಯ ಹೊಂದಿದ್ದಾರೆ ಎಂದು ಆರೋಪಿಸಲಾದ ಪ್ರಕರಣವನ್ನು ಸಿ ಬಿ ಐ ತನಿಖೆಯಿಂದ ವಾಪಸ್ ಪಡೆದು ಲೋಕಾಯುಕ್ತ ತನಿಖೆಗೆವಹಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿತ್ತು.
ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರನ್ನು ಬಚಾವ್ ಮಾಡುವ ದೃಷ್ಟಿಯಿಂದ ಈ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆಯಲಾಗಿದೆ ಎಂದು ಆಪಾದಿಸಿದ್ದರು.
ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಸಂಬಂಧ ಸಿ ಬಿ ಐ ಈಗಾಗಲೇ ತನ್ನ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿದೆ ಇಂತಹ ಸಮಯದಲ್ಲಿ ತನಿಖಾ ಸಂಸ್ಥೆಯಿಂದ ಪ್ರಕರಣವನ್ನು ವಾಪಸ್ ಪಡೆದಿರುವ ಕ್ರಮ ಸರಿಯಲ್ಲ ಎಂದು ಸಿಬಿಐ ಕೂಡ ಮನವಿ ಸಲ್ಲಿಸಿತ್ತು
ಈ ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಸೋಮಶೇಖರ್ ಮತ್ತು ಉಮೇಶ್ ಅಡಿಗ ಅವರಿದ್ದ ವಿಭಾಗೀಯ ಪೀಠ ವಾದ- ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತ್ತು.
ಈ ತೀರ್ಪು ಇದೀಗ ಪ್ರಕಟವಾಗಿದ್ದು ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಈ ಪ್ರಕರಣ ಕರ್ನಾಟಕ ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದವಾಗಿದೆ ಈ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಈ ವಿವಾದವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕಾಗಿದೆ ಹೀಗಾಗಿ ಈ ವಿಚಾರಣೆಯನ್ನು ಹೈಕೋರ್ಟ್ ನ ವಿಭಾಗೀಯ ಪೀಠ ನಡೆಸಿ ತೀರ್ಪು ಪ್ರಕಟಿಸಲು ಸಾಧ್ಯವಿಲ್ಲ ಎಂದು ನ್ಯಾಯ ಪೀಠ ಹೇಳಿದೆ ಈ ಮೂಲಕ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ದೊಡ್ಡ ರಿಲೀಫ್ ಸಿಕ್ಕಿದೆ.
Archives
- April 2026
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
