Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !
    ಸುದ್ದಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    vartha chakraBy vartha chakraJuly 7, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.7- ಯುವತಿಯ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಂತೆ
    ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸೋಲದೇವನಹಳ್ಳಿಯಲ್ಲಿ ನಡೆದೆ.
    ಹಲ್ಲೆಗೊಳಗಾದ ಯುವಕ ಕುಶಾಲ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆತನ ಸ್ಥಿತಿ ಗಂಭೀರವಾಗಿದೆ.
    ಪ್ರಕರಣ ಸಂಬಂಧ ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಸೇರಿ‌ 10 ಮಂದಿ ಆರೋಪಿಗಳನ್ನು ಸೋಲದೇವನಹಳ್ಳಿ ಪೊಲೀಸರು‌ ಬಂಧಿಸಿ ಪ್ರಕರಣದ ಸೂತ್ರಧಾರಿ 17 ವರ್ಷದ ಬಾಲಕಿಯನ್ನು ವಶಕ್ಕೆ ಪಡೆದು ಕಾನೂನು ಸಂಘರ್ಷ ಸಾಂತ್ವನ ಕೇಂದ್ರದಲ್ಲಿ ಇರಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.
    17 ವರ್ಷದ ಹುಡಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಯುವಕ ಕುಶಾಲ್​ನ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿ ಶಾಲೆ ಮುಗಿಸಿಕೊಂಡು ಕಾಲೇಜು ಮೆಟ್ಟಿಲು ಹತ್ತಿದ ಮೇಲೆ ಪ್ರೇಮಿಗಳ ನಡುವೆ ಬಿರುಕು ಮೂಡಿದೆ.
    ಎರಡು ವರ್ಷದ ಪ್ರೀತಿ ಕೆಲ ದಿನಗಳ ಹಿಂದೆಯಷ್ಟೇ ಬ್ರೇಕ್​ ಅಪ್​ ಆಗಿದೆ. ಬಳಿಕ ಯುವಕ ಕುಶಾಲ್​ ಖಾಸಗಿ ಕ್ಷಣದ ಫೋಟೋಗಳನ್ನು ವೈರಲ್​ ಮಾಡುವುದಾಗಿ ಬಾಲಕಿಗೆ ಬ್ಲ್ಯಾಕ್​ ಮೇಲ್​ ಮಾಡಿದ್ದಾನೆ.
    ಸಂಚು ರೂಪಿಸಿದ ಬಾಲಕಿ:
    ಈ ವಿಚಾರವನ್ನು ಬಾಲಕಿ ತನ್ನ ಸ್ನೇಹಿತರ ಮುಂದೆ ನೋವಿನಿಂದಕೊಂಡು ಹೇಳಿಕೊಂಡು ಕುಶಾಲ್​ನನ್ನು ಅಪಹರಿಸಿ ಬುದ್ಧಿ ಕಲಿಸುವಂತೆ ವಿನಂತಿಸಿದ್ದಾಳೆ. ಅದರಂತೆ ಅಕೆಯ ಸ್ನೇಹಿತರು, ಕುಶಾಲ್​ನನ್ನು ಸಂಪರ್ಕಿಸಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಬಾ ಅಂತ ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡಿದ್ದಾರೆ.
    ಸ್ಥಳಕ್ಕೆ ಬಂದ ಕುಶಾಲ್​ನನ್ನು ಅಪಹರಿಸಿ ಕಾರಿನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಕಾರಿನಲ್ಲಿ ಬಾಲಕಿಯೂ ಇದ್ದಳು. ಕಾರ್​ನಲ್ಲಿ ಆಕೆಯ ಮುಂದೆಯೇ ಆರೋಪಿಗಳು ಕುಶಾಲ್​ ಮೇಲೆ ಹಲ್ಲೆ ಮಾಡಿ ಹಾಡು ಹೇಳುವಂತೆ ಒತ್ತಾಯಿಸಿದ್ದಾರೆ.
    ರೇಣುಕಾಸ್ವಾಮಿಯಂತೆ ಹಲ್ಲೆ:
    ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಮೇಲೆ ಆರೋಪಿಗಳು ಆಕೆಯ ಮುಂದೆಯೇ ಯುವಕ ಕುಶಾಲ್​ನ ಬಟ್ಟೆ ಬಿಚ್ಚಿಸಿ ಬೆತ್ತಲಗೊಳಿಸಿ ವಿಕೃತಿ ಮೆರೆದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
    ಪ್ರಕರಣ ಸಂಬಂಧ ಬಾಲಕಿಯನ್ನು ವಶಕ್ಕೆ ಪಡೆದು ಇತರ ಜನರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ 8 ಜನ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆರೋಪಿಗಳಾದ ಶಶಾಂಕ್ ಗೌಡ, ಸಲ್ಮಾನ್, ಯಶ್ವಂತ್, ವಿದ್ಯಾರ್ಥಿಗಳಾದ ತೇಜಸ್, ರಾಕೇಶ್, ರಾಹುಲ್ ಮತ್ತು ಹೇಮಂತ್​​ ಬಿಡುಗಡೆಯಾದವರು. ಆರೋಪಿ ಹೇಮಂತ ಈ ಹಿಂದೆ ಹಲವು ಬಾರಿ ಹಲ್ಲೆ ಪ್ರಕರಣದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಬಂದಿದ್ದಾನೆ.
    ಪ್ರೇರಣೆ ಗೊತ್ತಿಲ್ಲ: ಪರಂ
    ಪ್ರಕರಣ ಸಂಬಂಧ ಗೃಹ ಸಚಿವ ಜಿ. ಪರಮೇಶ್ವರ್​ ಮಾತನಾಡಿ, ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ರೇಣುಕಾಸ್ವಾಮಿ ಪ್ರಕರಣ ಪ್ರೇರಣೆ ಆಗುತ್ತಿದೆಯಾ ಎನ್ನುವುದು ಗೊತ್ತಿಲ್ಲ. ಆ ಬಗ್ಗೆ ಮನಶ್ಶಾಸ್ತ್ರಜ್ಞರು ಅಧ್ಯಯನ ಮಾಡಿ ಹೇಳಬೇಕಾಗುತ್ತದೆ ಎಂದು ಹೇಳಿದರು. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ

    ಕಾನೂನು ಕಾಲೇಜು ಚಿತ್ರದುರ್ಗ Bengaluru ವಿದ್ಯಾ ವಿದ್ಯಾರ್ಥಿ ವೈರಲ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?
    Next Article ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup on ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    • Ralphhow on ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • Patricktup on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe