Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶಿಸಲು ಮುಂದಾದ ಬಿಜೆಪಿ ನಿಷ್ಠರ ಬಣ*
    ರಾಜಕೀಯ

    ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶಿಸಲು ಮುಂದಾದ ಬಿಜೆಪಿ ನಿಷ್ಠರ ಬಣ*

    vartha chakraBy vartha chakraNovember 27, 2024No Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯ

    ಶೀಘ್ರದಲ್ಲೇ ದೆಹಲಿಗೆ ಪಯಣ: ಎಂಪಿ ರೇಣುಕಾಚಾರ್ಯ

    ಬೆಂಗಳೂರು- ಅತ್ತ ವಕ್ಪ್ ನೋಟಿಸ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಜನಜಾಗೃತಿ ಅಭಿಯಾನ, ಇತ್ತ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ ನಿಷ್ಠರು ಮಧ್ಯ ಕರ್ನಾಟಕ ರಾಜಧಾನಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ.

    ಈ ಕುರಿತು ಬುಧವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ಸೇರಿದ್ದ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಮಾಜಿ ಶಾಸಕರಾದ ಎಂ.ವೈ.ಸಂಪಂಗಿ, ಎಂ.ಡಿ.ಲಕ್ಷ್ಮಿನಾರಾಯಣ, ತಿಪ್ಪರಾಜು, ಬಸವರಾಜ್ ಸಭೆ ನಡೆಸಿ ದಾವಣಗೆರೆಯಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ.

    ಇದು ಯಾವುದೇ ವ್ಯಕ್ತಿಯ ಇಲ್ಲವೇ ಬಣದ ಪರವಾಗಿ ಸಮಾವೇಶ ನಡೆಸದೆ ಕಾರ್ಯಕರ್ತರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಿ ಹೊಸ ಹುರುಪು ತುಂಬಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವುದೇ ಇದರ ಮುಖ್ಯ ಉದ್ದೇಶ
    ವಾಗಿದೆ.
    ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ಕುಮಾರಬಂಗಾರಪ್ಪ, ರಮೇಶ್ ಜಾರಕಿಹೊಳಿ ಮತ್ತಿತರರು ಪಕ್ಷದ ಅಧ್ಯಕ್ಷರ ಅನುಮತಿಯನ್ನು ಪಡೆಯದೆ ಚಿಹ್ನೆಯನ್ನು ಬಳಸದೆ ಜನಜಾಗೃತಿ ಅಭಿಯಾನಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು,ತಕ್ಷಣವೇ ವರಿಷ್ಠರು ಮಧ್ಯಪ್ರವೇಶಿಸಿ ಅ ಭಿಯಾನ ನಡೆಸದಂತೆ ಸ್ಪಷ್ಟ ಸೂಚನೆ ನೀಡಬೇಕೆಂದು ಪ್ರಮುಖರು ಒತ್ತಾಯಿಸಿದ್ದಾರೆ.

    ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಕೆಲವರು ಪಕ್ಷಕ್ಕಿಂತ ನಾನೇ ದೊಡ್ಡವನೆಂದು ಬಿಂಬಿಸಿಕೊಂಡು ನಾಲ್ಕಾರು ಜನರ ಮೂಲಕ ಅಭಿಯಾನ ನಡೆಸುತ್ತಿದ್ದಾರೆ. ಇದು ಪಕ್ಷದ ಹಿತಕ್ಕಿಂತ ಸ್ವಾರ್ಥವೇ ಹೆಚ್ಚಾಗಿದೆ ಎಂದು ವಾಗ್ದಾಳಿ ನಡೆಸಿದರು.
    ವಿಜಯೇಂದ್ರ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದು ಈಗ ಪಾದಯಾತ್ರೆ ನಡೆಸುತ್ತಿರುವವರಲ್ಲ. ಪ್ರಧಾನಿ ನರೇಂದ್ರಮೋದಿ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸಂಪೂರ್ಣವಾಗಿ ಬೆಂಬಲ ಕೊಟ್ಟಿದ್ದಾರೆ.
    ಆದರೆ ಉದ್ದೇಶಪೂರ್ವಕವಾಗಿಯೇ ಪಕ್ಷದೊಳಗೆ ಬೆಂಬಲ ಸೂಚಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಯತ್ನಾಳ್ ಹಾಗೂ ಅವರ ತಂಡದ ವಿರುದ್ದ ಕಿಡಿಕಾರಿದರು.
    ನೀವು ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಟೀಕಿಸಿದರೆ ಮೋದಿ, ಮತ್ತು ಅಮಿತ್ ಷಾ ಅವರನ್ನು ಟೀಕಿಸಿದಂತೆ. ಯಡಿಯೂರಪ್ಪ ರಾಜಕೀಯಕ್ಕೆ ಬಂದಾಗ ಕೆಲವರು ಇನ್ನು ಕಣ್ಣೇ ಬಿಟ್ಟಿರಲಿಲ್ಲ. ಅಂಥವರು ಕೂಡ ನಾಲ್ಕು ಮಂದಿ ಕಟ್ಟಿಕೊಂಡು ಪ್ರಚಾರಕ್ಕಾಗಿ ಅಭಿಯಾನ ಮಾಡುತ್ತಿದ್ದಾರೆ.ಇದಕ್ಕೆ ಕವಡೆಕಾಸಿನ ಕಿಮ್ಮಿತ್ತಿನ ಬೆಲೆ ಇಲ್ಲ ಎಂದು ಕೆಂಡಕಾರಿದರು.

    ದಾವಣಗೆರೆಯಲ್ಲಿ ನಾವು ಯಾವುದೇ ವ್ಯಕ್ತಿ ಅಥವಾ ಬಣದ ಪರವಾಗಿ ಸಮಾವೇಶ ಮಾಡುತ್ತಿಲ್ಲ. ಸಂಘಟನೆ ಪ್ರಬಲವಾಗಬೇಕು. ಕಾರ್ಯಕರ್ತರಲ್ಲಿ ನವಚೈತನ್ಯ ಮೂಡಿಸಬೇಕು ಇದು ನಮ್ಮ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.
    ಯತ್ನಾಳ್ ಅವರೇ ನಿಮ್ಮ ಹೋರಾಟ ಯಾರ ವಿರುದ್ಧ, ಕಾಂಗ್ರೆಸ್ ವಿರುದ್ಧ ಇರಬೇಕು. ಮುಹಮ್ಮದ್ ಬಿಲ್ ತುಘಲಕ್ ತರ ಪ್ರವಾಸ ಹೊರಟಿದ್ದಾರೆ. ಸಿದ್ದರಾಮಯ್ಯ ಅಡಿಯಾಳಾಗಿ ಕೆಲಸ ಮಾಡ್ತಿದ್ದಾರೆ .
    ನಮ್ಮಲ್ಲಿ ಸಿಎಂ ಆಗುತಾರೆ ಎಂದು ಹೇಳಲು ಯತ್ನಾಳ್ ಗೆ ಏನು ಅಧಿಕಾರ ಇದೆ. ಯಡಿಯೂರಪ್ಪ ಅವರಿಗೂ ಅಧಿಕಾರ ಇಲ್ಲ. ಸ್ವಾರ್ಥಕ್ಕಾಗಿ ಕೆಟ್ಟ ಉದ್ದೇಶದಿಂದ ಕೆಲಸ ಮಾಡ್ತಾರೆ. ಯಡಿಯೂರಪ್ಪ ರಕ್ಷಣೆಗೆ ಏಕೆ ನಿಲ್ಲುತ್ತಿಲ್ಲ ಎಂದು ನಮ್ಮನ್ನು ಕಾರ್ಯಕರ್ತರು ಕೇಳ್ತಿದ್ದಾರೆ. ಅವರಿಗೆ ಉತ್ತರ ಹೇಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

    ನೀವು ನಡೆಸುತ್ತಿರುವ ಹೋರಾಟ ಸಿದ್ದರಾಮಯ್ಯ ಮೋರ್ಚಾ ಎಂದು ಹಿರಿಯ ಮುತ್ಸದ್ದಿ ವಿಶ್ವನಾಥ್ ಅವರೇ ಹೇಳಿದ್ದಾರೆ. ನರಿ ಕಥೆ ನಿಮಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.
    ಕೋಲಾರದ ಮುಳಬಾಗಿಲು ಭೇಟಿ ಬಳಿಕ ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಬಿಜೆಪಿ ಬಲವರ್ಧನೆಗಾಗಿ, ಅಲ್ಲಿಂದ ಮುರುಡೇಶ್ವರ ದರ್ಶನ ಪಡೆದು ರವೀಂದ್ರ ನಾಥ್ ಪಾಟೀಲ್ ಅಧ್ಯಕ್ಷತೆಯಲ್ಲಿ ಪೂರ್ವ ಬಾವಿ ಸಭೆಯನ್ನು ನಡೆಸುತ್ತೇವೆ. ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ನಿಟ್ಟಿನಲ್ಲಿ ದಾವಣಗೆರೆಯಲ್ಲಿ ಸಮಾವೇಶ ಮಾಡುತ್ತೇವೆ ಎಂದರು. 29 ರಂದು ಹತ್ತು ಗಂಟೆಗೆ ಹೊರಟು ಕೋಲಾರ ಮುಳಬಾಗಿಲು ಗಣೇಶನ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸುತ್ತೇವೆ. ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇವೆ. ಯಡಿಯೂರಪ್ಪ ಕಷ್ಟದಲ್ಲಿ ಪಕ್ಷ ಕಟ್ಟಿದ್ದಾರೆ. ಕರ್ನಾಟಕದಲ್ಲಿ ಅಧಿಕಾರ ತರಲು ಅವರ ಪಾತ್ರ ಪ್ರಮುಖವಾಗಿದೆ. ಪಕ್ಷ ಕಟ್ಟಿದ ನಾಯಕರ ಬಗ್ಗೆ ಮಾತನಾಡುವುದು ರಾಷ್ಟ್ರೀಯ ನಾಯಕರ ವಿರುದ್ಧ ಮಾತನಾಡಿದಂತೆ ಎಂದು ಕಿಡಿಕಾರಿದರು.

    ಯತ್ನಾಳ್ ಅವರೇ ನಿಮ್ಮ ಹೋರಾಟ ಯಾರ ವಿರುದ್ಧ, ಕಾಂಗ್ರೆಸ್ ವಿರುದ್ಧ ಇರಬೇಕು. ಮುಹಮ್ಮದ್ ಬಿಲ್ ತುಘಲಕ್ ತರ ಪ್ರವಾಸ ಹೊರಟಿದ್ದಾರೆ. ಸಿದ್ದರಾಮಯ್ಯ ಅಡಿಯಾಳಾಗಿ ಕೆಲಸ ಮಾಡ್ತಿದ್ದಾರೆ ಎಂದು ಆರೋಪಿಸಿದರು. ನಮ್ಮಲ್ಲಿ ಸಿಎಂ ಆಗ್ತಾರೆ ಎಂದು ಹೇಳಲು ಯತ್ನಾಳ್ ಗೆ ಏನು ಅಧಿಕಾರ ಇದೆ. ಯಡಿಯೂರಪ್ಪ ಅವರಿಗೂ ಅಧಿಕಾರ ಇಲ್ಲ. ಸ್ವಾರ್ಥಕ್ಕಾಗಿ ಕೆಟ್ಟ ಉದ್ದೇಶದಿಂದ ಕೆಲಸ ಮಾಡ್ತಾರೆ. ಯಡಿಯೂರಪ್ಪ ರಕ್ಷಣೆಗೆ ಏಕೆ ನಿಲ್ಲುತ್ತಿಲ್ಲ ಎಂದು ನಮ್ಮನ್ನು ಕಾರ್ಯಕರ್ತರು ಕೇಳ್ತಿದ್ದಾರೆ. ಅವರಿಗೆ ಉತ್ತರ ಹೇಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
    ಮಾಜಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ,
    ವಿಜಯೇಂದ್ರ ಸಾರಥ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಇದು ಕಾರ್ಯಕರ್ತರ ಒಕ್ಕೋಲರ ಅಭಿಪ್ರಾಯವಾಗಿದೆ. ಕೆಲವರು ಆಗಲೇ ನಮ್ಮ ಬಣದವರೇ ಮುಖ್ಯಮಂತ್ರಿಯಾಗಲಿ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರ ಆಸೆ ಈಡೆರುವುದಿಲ್ಲ ಎಂದು ಪರೋಕ್ಷವಾಗಿ ಯತ್ನಾಳ್‍ಗೆ ತಿರುಗೇಟು ಕೊಟ್ಟರು.

    ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾತನಾಡಿ,ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೇ ಹೊಣೆ ಎಂದು ಹೇಳಿದ್ದಾರೆ. ಅವರು ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ದೂರಿದರು.
    ಯಡಿಯೂರಪ್ಪ ರಾಜಕಾರಣಕ್ಕೆ ಬಂದಾಗ ಇವರು ಕಣ್ಣೇ ಬಿಟ್ಟಿರಲಿಲ್ಲ. ಕೇವಲ ನಾಲ್ಕೈದು ಜನರು ಸೇರಿ ರಾಜ್ಯಾಧ್ಯಕ್ಷರನ್ನು ಇಳಿಸುತ್ತೇವೆ ಎಂದು ಹೋದರೆ ಅದು ಅವರ ಭ್ರಮೆ ಎಂದು ಟೀಕಿಸಿದರು.
    ಯತ್ನಾಳ್ ಟೀಮ್ ಜೊತೆ ಹೋಗಿ ಯುದ್ದ ಮಾಡುವುದಕ್ಕೆ ಆಗುವುದಿಲ್ಲ. ಆದರೆ ಅವರ ಟೀಕೆಗೆ ನಾವು ತಕ್ಕ ಉತ್ತರ ಕೊಡಬೇಕು. ಯತ್ನಾಳ್ ಪ್ರತ್ಯೇಕ ಹೋರಾಟದಿಂದ ಪಕ್ಷದಲ್ಲಿ ತೊಂದರೆಯಾಗಿದೆ. ಕಾರ್ಯಕರ್ತರು ಎಲ್ಲರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಕಾರು Election ಬಿಜೆಪಿ Bengaluru ಮೈ ಯಡಿಯೂರಪ್ಪ ರಾಜಕೀಯ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ.ಶಿವಕುಮಾರ್ ಅಧ್ಯಕ್ಷ ಸ್ಥಾನ ಬಿಡುತ್ತಾರಂತೆ.
    Next Article ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಳ್ಳಿನ ಹಾದಿ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • alpha66_aqKr on ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • Hzptwp on ಸರ್ಕಾರದ ಆಸ್ಪತ್ರೆಗಳಲ್ಲಿ AI ಆಧಾರಿತ ಕ್ಯಾನ್ಸರ್ ಪತ್ತೆ ಸೌಲಭ್ಯ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.