Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೀಪ ಆರುವ ಮುನ್ನ ಪ್ರಜ್ವಲಿಸುತ್ತದೆಯಂತೆ.
    ರಾಜಕೀಯ

    ದೀಪ ಆರುವ ಮುನ್ನ ಪ್ರಜ್ವಲಿಸುತ್ತದೆಯಂತೆ.

    vartha chakraBy vartha chakraMay 15, 202426 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.15:
    ದೀಪ ಆರುವ ಮುನ್ನ ಪ್ರಜ್ವಲಿಸಿ ಉರಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಜ್ವಲಿಸುತ್ತಿದ್ದಾರೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಹಪಹಪಿಸುವರು ಯಾರು ಇಲ್ಲ ಎಂದು ತಿಳಿಸಿದ್ದಾರೆ.
    ಬಿಜೆಪಿಯಲ್ಲಿ ವಿಜಯೇಂದ್ರ ಅವರ ಸ್ಥಾನವನ್ನು ಕಿತ್ತುಕೊಳ್ಳಲು ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತದೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಸಿಗಲಿದೆ ಎಂದು  ಹೇಳಿದ್ದಾರೆ.
    ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ ಎಂದಿದ್ದಾರೆ
    ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ, ನಿಮ್ಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ ಎಂದು ಹೇಳಿದ್ದಾರೆ
    ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ ಎಂದಿದ್ದಾರೆ
    ನೀವು ಮುಖ್ಯಮಂತ್ರಿಯಾಗುವ ವೇಳೆ ಶಿವಕುಮಾರ್ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್ ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ ಎಂದು ಎಚ್ಚರಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ Election ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇವೆಂಟ್ ಮ್ಯಾನೇಜ್ಮೆಂಟ್ ಕೈ ನಲ್ಲಿದೆ ಸರ್ಕಾರ.
    Next Article ಸಚಿವ ಎಂ. ಬಿ. ಪಾಟೀಲ್ ಹೇಳಿದ ರಾಜಕೀಯ ಭವಿಷ್ಯ.
    vartha chakra
    • Website

    Related Posts

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    IPS ಅಧಿಕಾರಿ ತಲೆದಂಡ

    January 20, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    January 19, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on ನಾಲ್ವರಿಗೆ ಒಲಿದ ಅದೃಷ್ಟ !
    • Daviddek on ಹೀಗೂ ಸುದ್ದಿಯಾದ ನಳಪಾಡ್.
    • Anya153on on ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    January 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.