Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?
    ಸುದ್ದಿ

    ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?

    vartha chakraBy vartha chakraAugust 25, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಧರ್ಮಸ್ಥಳದ ಬಳಿ‌ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿ ಕೋಲಾಹಲ ಸೃಷ್ಟಿಸಿದ್ದ ಮುಸುಕುಧಾರಿ ಚಿನ್ನಯ್ಯ ತನ್ನ ಬಳಿ ಇದ್ದ ಬುರಡೆಯನ್ನು ದೆಹಲಿಗೆ ಕೊಂಡೊಯ್ದಿದ್ದಾನೆ.
    ಈ ಅಂಶ ಎಸ್ ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಪಿತೂರಿ ಗ್ಯಾಂಗ್ ನಿಂದ ಆರಂಭದಲ್ಲಿ 2 ಲಕ್ಷ ರೂಪಾಯಿಗಳನ್ನು ಪಡೆದು ಹಣ  ಹೂತು ಹಾಕಿರುವ ಸುಳ್ಳು ಕತೆಗಳನ್ನು ಕಟ್ಟಲು ಚಿನ್ನಯ್ಯ ಆರಂಭಿಸಿದ್ದಾನೆ ಎಂದು ಎಸ್ ಐಟಿ ಪತ್ತೆ ಮಾಡಿದೆ.
    ಧರ್ಮಸ್ಥಳದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬನ ಮೃತದೇಹದ ತಲೆಯನ್ನು ಕುತ್ತಿಗೆಯಿಂದ ಬೇರ್ಪಡಿಸಿದ ನಂತರ ಬುರುಡೆಯನ್ನು ರಹಸ್ಯವಾಗಿ ತೆಗೆದುಕೊಂಡು ಹೋಗಿ ಗ್ಯಾಂಗ್ ನಿರ್ದೇಶನದಂತೆ ಪ್ರಮುಖರೊಬ್ಬರನ್ನು ಭೇಟಿಯಾಗಿದ್ದ.
    ಇವರ ಸಲಹೆಯಂತೆ ಜುಲೈ 3ರಂದು ವಕೀಲರೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಎಸ್ಪಿ ಕಚೇರಿಗೆ
    ಆಗಮಿಸಿದ ಈತ ತಲೆ ಬುರುಡೆ ನೀಡಿ ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಮಹಿಳೆಯರ ಮತ್ತು ಮಕ್ಕಳ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿದ್ದ.ತನ್ನ ಬಳಿ ಇದ್ದ ಬುರುಡೆಯನ್ನೇ ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ಚಿನ್ನಯ್ಯ ಮನವಿ ಮಾಡಿದ್ದ.ಇದು ಪೊಲೀಸರ ಹಾದಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಎಸ್ ಐಟಿ ಅಭಿಪ್ರಾಯ ಪಟ್ಟಿದೆ.
    ಈ ನಡುವೆ ಅವರ ತಂಡದಲ್ಲಿದ್ದ ಉನ್ನತ ವ್ಯಕ್ತಿಯೊಬ್ಬರು ಈತನನ್ನು ದೆಹಲಿಗೆ ತಲುಪಿಸಲು ಸಕಲ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದರು.
    ದೆಹಲಿಯಲ್ಲಿ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯನ್ನು ರಹಸ್ಯವಾಗಿ ಭೇಟಿ ಮಾಡಿದ ಆತ ಪೊಲೀಸರು, ನ್ಯಾಯಾಧೀಶರು ಹಾಗೂ ತನಿಖಾಧಿಕಾರಿಗಳ ಮುಂದೆ ಯಾವ ರೀತಿ ಹೇಳಿಕೆಗಳನ್ನು ನೀಡಬೇಕು ಎಂಬುದರ ಬಗ್ಗೆಯೂ ತರಬೇತಿಯನ್ನು ಪಡೆದುಕೊಂಡಿದ್ದ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
    ನಾನು ಹೇಳಿದಂತೆ ನಡೆದುಕೊಂಡರೆ ಯಾವುದೇ ರೀತಿಯ ಕಾನೂನು ಸಮಸ್ಯೆಗಳು ಎದುರಾಗುವುದಿಲ್ಲ. ನಿಮಗೆ ಬೇಕಾದ ಆರ್ಥಿಕ ನೆರವನ್ನು ನಮ್ಮ ಕಡೆಯವರು ತಲುಪಿಸಿದ್ದಾರೆ. ಮೊದಲು ನೀವು ನಾನು ಹೇಳಿದಂತೆ ನಡೆದುಕೊಳ್ಳಿ ಅಪ್ಪಿತಪ್ಪಿಯೂ ಈ ರಹಸ್ಯವನ್ನು ಎಲ್ಲಿಯೂ ಬಾಯಿಬಿಡದಂತೆ ಗಣ್ಯವ್ಯಕ್ತಿ ಹೇಳಿಕೊಟ್ಟಿದ್ದರು ಎನ್ನಲಾಗಿದೆ.
    ಎಲ್ಲವೂ ಮುಗಿದ ನಂತರವೇ ಏಕಾಏಕಿ ಜು.3ರಂದು ಪ್ರತ್ಯಕ್ಷನಾದ ಮುಸುಕುಧಾರಿ 1995ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ನಾನು ಶವಗಳನ್ನು ಹೂತು ಹಾಕಿದ್ದಾಗಿ ಕಥೆ ಕಟ್ಟಿದ್ದ.ಜೊತೆಗೆ ಆತ ಒಂದು ತಲೆಬುರುಡೆಯನ್ನು ಸಾಕ್ಷಿಯಾಗಿ ಒಪ್ಪಿಸಿದ್ದ. ಆದರೆ, ಎಸ್‌‍ಐಟಿ ತನಿಖೆಯಲ್ಲಿ ಈ ತಲೆಬುರುಡೆಯು ಧರ್ಮಸ್ಥಳದ ಕಾಡಿನಲ್ಲಿ ಒಂದು ಅಸ್ಥಿಪಂಜರದ ಭಾಗವಾಗಿ ಕಂಡುಬಂದಿತ್ತು ಎಂದು ತಿಳಿದುಬಂದಿದೆ.
    ಈ ಅಸ್ಥಿಪಂಜರವು ನೇಣುಬಿಗಿದು ಮೃತಪಟ್ಟ ಒಬ್ಬ ವ್ಯಕ್ತಿಯದ್ದಾಗಿತ್ತು ಎಂದು ತನಿಖೆಯಿಂದ ದೃಢಪಟ್ಟಿದೆ. ಚಿನ್ನಯ್ಯ ಈ ತಲೆಬುರುಡೆಯನ್ನು ಎತ್ತಿಕೊಂಡು, ತನ್ನ ಗುಂಪಿನ ಸಹಾಯದಿಂದ ಸಾಕ್ಷಿಯಾಗಿ ಪೊಲೀಸರಿಗೆ ಒಪ್ಪಿಸಿದ್ದನು.

    Verbattle
    Verbattle
    Verbattle
    ಕಾನೂನು ಕೊಲೆ ಚಿನ್ನ ಧರ್ಮ ನ್ಯಾಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಲಿಂಗಾಯತರ ಶಕ್ತಿ ಪ್ರದರ್ಶನ
    Next Article ಟ್ರಾಫಿಕ್ ದಂಡ ಪಾವತಿ ಮುನ್ನ ಎಚ್ಚರ !
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonyTot on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • AntonioGop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • AnthonyTot on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.