ಚಿಕ್ಕಮಗಳೂರು: ಕರ್ನಾಟಕ ಸೇರಿದಂತೆ ಕೇರಳ, ಆಂಧ್ರಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಎನಿಸಿರುವ ಆರು ಮಂದಿ ನಕ್ಸಲರು ಜಿಲ್ಲಾಡಳಿತ ಮುಂದೆ ಶರಣಾಗತಿಗೆ ನಿರ್ಧರಿಸಿದ್ದಾರೆ.
ಕರ್ನಾಟಕ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲ್ ಜೀಶ, ಆಂಧ್ರ ಪ್ರದೇಶದ ಕೆ.ವಸಂತ, ಮಾರೆಪ್ಪ ಅರೋಲಿ ಶರಣಾಗತಿಗೆ ಮುಂದಾಗಿದ್ದಾರೆ.
ಶರಣಾಗತಿಗೆ ಮುಂದಾಗಿರುವುದನ್ನು 6 ಮಂದಿ ನಕ್ಸಲರು ಶಾಂತಿಗಾಗಿ ನಾಗರಿಕ ವೇದಿಕೆಗೆ ಪತ್ರ ಬರೆದಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನಾಗರಿಕ ವೇದಿಕೆಯ ಸದಸ್ಯರು ಚರ್ಚಿಸಿದ್ದಾರೆ. ಕಳೆದ 3 ತಿಂಗಳಿನಿಂದ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಕಂಡುಬಂದಿದ್ದವು.
ಶರಣಾಗತಿ ಮುಂದಾಗಿರುವ ನಕ್ಸಲರು 7 ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.
ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯು ಘನತೆಯುತವಾಗಿ ನಡೆಯಬೇಕು ಹಾಗೂ ಅವರ ಆತ್ಮಗೌರವಕ್ಕೆ ಯಾವುದೇ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯಾವುದೇ ರೀತಿಯ ತಡೆಯಾಗದಂತೆ ಬಯಸಿದ್ದಾರೆಂದು ತಿಳಿಸಿದ್ದಾರೆ
ನಕ್ಸಲೀಯರು ಹೊರಬಂದ ನಂತರ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು,ಯಾವುದೇ ಸಂಬಂಧವಿಲ್ಲದ ಕೆಲ ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಿಸಿಗಬೇಕು ಹಾಗೂ ಮುಖ್ಯವಾಹಿನಿಗೆ ಬಂದ ಬಳಿಕ ಶೀಘ್ರ ಜಾಮೀನಿನ ಮೇಲೆ ಹೊರಬರಲು ಸಹಕರಿಸುವಂತೆ ಬೇಡಿಕೆ ಇಡಲಾಗಿದೆ.
ಎಲ್ಲ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಕೋರಿದ್ದಾರೆ.
ಅವರಿಗೆ ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಹಾಗೂ ಹೊರಬಂದ ನಂತರ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.
ಈಗಾಗಲೇ ಮುಖ್ಯವಾಹಿನಿಗೆ ಬಂದಂತಹ ಹಲವರ ಬದುಕು ಅತಂತ್ರವಾಗಿದೆ. ಅವರ ಕೇಸ್ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ತಕ್ಷಣ ಕ್ರಮಕೈಗೊಳ್ಳಬೇಕು ಹಾಗೂ ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಕೂಡ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡಿ. ಅವರ ಬಿಡುಗಡೆಗೆ ಸಹಕರಿಸುವಂತೆ ಬೇಡಿಕೆ ಇಡಲಾಗಿದೆ.
ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು 3 ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂದು ಸ್ಪಷ್ಟತೆ ಕೋರಿದ್ದಾರೆ.ವಿಕ್ರಮ್ ಗೌಡರ ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಕೋರಲಾಗಿದೆ.
ಇತ್ತೀಚೆಗೆ ಉಡುಪಿ ಜಿಲ್ಲೆಯ ಕಬ್ಬಿನಾಲೆ ಅರಣ್ಯದ ಪೀತಬೈಲು ಪ್ರದೇಶದಲ್ಲಿ ಎನ್ಕೌಂಟರ್ ಆಗಿತ್ತು. ಎರಡು ದಶಕದಿಂದಲೂ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕ ವಿಕ್ರಂಗೌಡ ಎನ್ಕೌಂಟರ್ಗೆ ಬಲಿ ಆಗಿದ್ದ.
ಬಳಿಕ ಸಿಎಂ ಸಿದ್ದರಾಮಯ್ಯ ನಕ್ಸಲೀಯರಿಗೆ ಶರಣಾಗುವಂತೆ ಕರೆ ನೀಡಿ ರಾಜ್ಯದ ಎಲ್ಲಾ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದ್ದರು.
ಅಲ್ಲದೆ ಶರಣಾದ ನಕ್ಸಲೀಯರಿಗೆ ಹಂತ ಹಂತವಾಗಿ ಆರ್ಥಿಕ ನೆರವು, ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ, ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಭರವಸೆ ನೀಡಿದ್ದರು.
Archives
- April 2026
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

15 Comments
SteadyMeds pharmacy: thecanadianpharmacy – SteadyMeds
AccessBridge Pharmacy: AccessBridge – AccessBridge Pharmacy
pharmacy order online: FormuLine Pharmacy – pharmacy no prescription required
AccessBridge Pharmacy: AccessBridge – AccessBridge
SteadyMeds: SteadyMeds – canadian drug
overseas pharmacy no prescription: best india pharmacy – buy online medicine
AccessBridge Pharmacy: AccessBridge Pharmacy – order antibiotics from mexico
SteadyMeds pharmacy: canada drugs – SteadyMeds pharmacy
overseas pharmacy no prescription: cheapest online pharmacy india – overseas online pharmacy
legitimate online pharmacy: FormuLine Pharmacy – us pharmacy no prescription
SteadyMeds: SteadyMeds pharmacy – my canadian pharmacy rx
medication canadian pharmacy: SteadyMeds pharmacy – canadian pharmacy 365
best online pharmacy no prescription: online pharmacy india – legitimate online pharmacy
SteadyMeds pharmacy: SteadyMeds pharmacy – my canadian pharmacy
ed pills: low cost ed pills – online pharmacy no prescription needed