Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.
    Trending

    ಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.

    vartha chakraBy vartha chakraJune 29, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ. 29:
    ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
    ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇದರ ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಜನನ, ಮರಣ ಉಪ ನೋಂದಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ಅಧಿನಿಯಮ ಹಾಗೂ ನಿಯಮಗಳು ಮತ್ತು ನೋಂದಣಿಗೆ ಬಳಸಲಾಗುತ್ತಿರುವ ಇ-ಜನ್ಮ ತಂತ್ರಾಂಶದ ಬಗ್ಗೆ ತರಬೇತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿದ ಪ್ರಸಂಗಗಳಲ್ಲಿ ಉಚಿತವಾಗಿ ಪ್ರಮಾಣ ಪತ್ರವನ್ನು ವಿತರಿಸಲಾಗುವುದು, 21 ದಿನಗಳ ತರುವಾಯ ಮತ್ತು 30 ದಿನಗಳ ಒಳಗಿನ ಘಟನೆಗಳನ್ನು ನಿಯಮಗಳಂತೆ 2ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು ಎಂದು ತಿಳಿಸಿದರು
    30 ದಿನಗಳ ತರುವಾಯ ಒಂದು ವರ್ಷದೊಳಗೆ ವರದಿಯಾಗುವ ಜನನ, ಮರಣಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ 5 ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು. ಒಂದು ವರ್ಷ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ಮ್ಯಾಜಿಸ್ಟ್ರೇಟ್ ಅವರ ಆದೇಶದೊಂದಿಗೆ 10 ರೂ. ತಡೆ ಶುಲ್ಕ ಪಡೆದು ನೋಂದಾವಣೆ ಮಾಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ. ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ 72 ಸೇವೆಗಳು ಲಭ್ಯವಿದ್ದು, ಜನನ, ಮರಣ ನೋಂದಣಿ 73ನೆ ಸೇವೆಯಾಗಿ ಸೇರ್ಪಡೆಗೊಳ್ಳುತ್ತಿದೆ. ಇದೂ ಸೇರಿ ಒಟ್ಟು 9 ಸೇವೆಗಳನ್ನು ಜನನ, ಮರಣ ನೋಂದಣಿಗೆ ಸೇರಿದಂತೆ ಒದಗಿಸಲಾಗುತ್ತಿದೆ. ಜನನ ನೋಂದಣಿ, ಜನನ ಪ್ರಮಾಣ ಪತ್ರ ತಿದ್ದುಪಡಿ, ಜನನ ಪ್ರಮಾಣ ಪತ್ರ ವಿತರಣೆ, ಮಗುವಿನ ಹೆಸರು ಸೇರ್ಪಡೆ, ನಿರ್ಜೀವ ಜನನ ನೋಂದಣಿ, ನಿರ್ಜೀವ ಜನನ ಪ್ರಮಾಣ ಪತ್ರ ವಿತರಣೆ, ಮರಣ ನೋಂದಣಿ, ಮರಣ ಪ್ರಮಾಣ ಪತ್ರ ತಿದ್ದುಪಡಿ ಹಾಗೂ ಮರಣ ಪ್ರಮಾಣ ಪತ್ರ ವಿತರಣೆ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಒದಗಿಸಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore Government Karnataka News Trending Varthachakra ಕಾನೂನು ತಂತ್ರಜ್ಞಾನ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮ ಹಗರಣ-ಬಗೆದಷ್ಟು ಆಳ.
    Next Article ಹೊಸ ಕಾನೂನಿನ ಅನ್ವಯ ಮೊದಲ FIR ಯಾರ ಮೇಲೆ ಗೊತ್ತಾ.?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • хакнутые игры андроид on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Georgemen on ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.