Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಶ್ಚಿಮಘಟ್ಟ ಉಳಿಸಲು ಸಚಿವ ಖಂಡ್ರೆ ಪ್ಲಾನ್.
    Trending

    ಪಶ್ಚಿಮಘಟ್ಟ ಉಳಿಸಲು ಸಚಿವ ಖಂಡ್ರೆ ಪ್ಲಾನ್.

    vartha chakraBy vartha chakraAugust 17, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.16:
    ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.
    ಈ ಪ್ರದೇಶದಲ್ಲಿ ಪ್ರವಾಸೋದ್ಯಮದ ಹೆಸರಲ್ಲಿ ನಡೆಯುತ್ತಿರುವ ವಾಣಿಜ್ಯ ಮತ್ತು ಕೈಗಾರಿಕೆ ಚಟುವಟಿಕೆಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಿದೆ ಇದಕ್ಕಾಗಿಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸಲು ತೀರ್ಮಾನಿಸಿದೆ.
    ಭೂ ಉಪಯೋಗದ ಹೊಸ ನಿಯಮಾವಳಿ ಪ್ರಕಟವಾಗುವವರೆಗೂ ಈ ಪ್ರದೇಶದ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
    ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ.
    ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ.
    ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
    ಇದೇ ಮಾದರಿಯಲ್ಲಿ, ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ , ನಗರಾಭಿವೃದ್ದಿ , ಪೌರಾಢಳಿತ ಇಲಾಖೆ, ನಗರ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ (Zonal Regulation and Master plan on Land use pattern) ರೂಪಿಸಲಾಗುವುದು ಎಂದು ಹೇಳಿದ್ದಾರೆ.
    ಈ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವಾಗಿದ್ದು, ಕೂಡಲೇ ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
    ಇದರ ನಡುವೆಯೂ, ಅತೀ ಜರೂರಾದ, ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತ ಎಂದು ತಿಳಿಸಿದ್ದಾರೆ.
    ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಭೂ ಉಪಯೋಗ ಕುರಿತಂತೆ ಹೊಸ ನಿಯಮಾವಳಿ ರೂಪಿಸಲು ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆಯೂ ಅವರು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದಾರೆ.

    Bangalore Government Karnataka m News Politics Trending Varthachakra ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Next Article ವಿಜಯೇಂದ್ರ ಕೈ ಕಟ್ಟಿ ಹಾಕಿದ ಬಿ ಎಲ್ ಸಂತೋಷ್.
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    3 Comments

    1. cheap cialis tablets on June 9, 2025 5:50 pm

      Proof blog you be undergoing here.. It’s intricate to assign strong worth belles-lettres like yours these days. I honestly recognize individuals like you! Withstand mindfulness!!

      Reply
    2. 7958u on June 21, 2025 7:15 pm

      amoxicillin order – where can i buy valsartan combivent drug

      Reply
    3. ivlt6 on June 23, 2025 10:14 pm

      buy azithromycin generic – buy bystolic 5mg generic bystolic ca

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldClore on IT Raid ನಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ | IT Raid
    • Melvinboory on ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • nsuot on ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಸಿ.ಟಿ.ರವಿ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe