Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕಿಸ್ತಾನದಿಂದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ.
    Trending

    ಪಾಕಿಸ್ತಾನದಿಂದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ.

    vartha chakraBy vartha chakraNovember 8, 2024Updated:November 8, 202438 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ. 8-
    ‌ಸಿಲಿಕಾನ್ ‌ಸಿಟಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ಬ್ರೂಕ್ ಫೀಲ್ಡ್ ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಪಾಕಿಸ್ತಾನದ ನಂಟಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ
    ಪ್ರಕರಣದ ತನಿಖೆ ಮಾಡಿದ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯಕ್ಕೆ  ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಘಟನೆಗೆ ಪಾಕಿಸ್ತಾನದ ನಂಟಿರುವ ಮಾಹಿತಿ ಉಲ್ಲೇಖವಾಗಿದೆ.
    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಪಾಕ್ ಮೂಲದ ಶಂಕಿತ ಉಗ್ರ ಫೈಸಲ್ ಶಾಮೀಲಾಗಿದ್ದಾನೆ
    ಸದ್ಯ ಈತ ಪಾಕಿಸ್ತಾನದಲ್ಲಿದ್ದಾನೆ ಎನ್ನಲಾಗಿದೆ.
    ಈ ಸ್ಪೋಟದ ರೂವಾರಿಗಳಾದ ತಾಹಾ ಮತ್ತು ಶಾಜಿಬ್ ಮಂಗಳೂರು ಕುಕ್ಕರ್ ಸ್ಫೋಟದ ಬಳಿಕ ನಾಪತ್ತೆಯಾಗಿದ್ದರು. ಕೆಲಕಾಲದ ಬಳಿಕ ಮತ್ತೆ ವಾಪಾಸ್ ಬೆಂಗಳೂರಿಗೆ ಬಂದಿದ್ದರು. ಆಗ ಮುಜಾಮಿಲ್ ಷರೀಫ್ ಎಂಬಾತನ ಪರಿಚಯವಾಗಿತ್ತು.
    ಮುಜಾಮಿಲ್ ಮೆಜೆಸ್ಟಿಕ್ ಬಳಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ತಾಹಾ ಮತ್ತು ಶಾಜಿಬ್ ಮನಪರಿವರ್ತಿಸಿ ಐಸಿಸ್‌ಗೆ ಸೇರ್ಪಡೆ ಮಾಡಿದ್ದ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ
    ಈತ ಮೊದಲ ಹಂತದಲ್ಲಿ ಕೆಲವು ದುಷ್ಕೃತ್ಯ ನಡೆಸಲು ಮುಜಾಮಿಲ್‌ಗೆ ತಾಹಾ ಮತ್ತು ಶಾಜಿಬ್ ಟಾಸ್ಕ್ ನೀಡಿದ್ದರು.ಅದರಂತೆ‌ ಇವರು 2023 ಡಿಸೆಂಬರ್‌ನಲ್ಲಿ ಬೆಂಗಳೂರಲ್ಲಿ ಬಾಂಬ್ ಸ್ಫೋಟ ನಡೆಸಲು ಸಂಚು ಹೂಡಿದ್ದರು.
    ಆನ್‌ಲೈನ್ ಹ್ಯಾಂಡ್ಲರ್ ಮೂಲಕ ಅವರಿಗೆ ಈ ಸೂಚನೆ ಬಂದಿತ್ತು. ಈ ಆನ್‌ಲೈನ್ ಹ್ಯಾಂಡ್ಲರ್ ಪಾಕಿಸ್ತಾನದಲ್ಲಿ ನೆಲೆಸಿರುವ ಫೈಸಲ್.ಈತ ಜನವರಿ 22, 2024ರಂದು ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅಂದೇ ಸ್ಫೋಟ ನಡೆಸಿ ಎಂಬ ಸೂಚನೆ ನೀಡಿದ್ದ
    ಈ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿ ಗುರಿಯಾಗಿಸಿಕೊಂಡಿದ್ದ ಶಾಜಿಬ್, ಬೆಂಗಳೂರಿನಿಂದ ಚೆನ್ನೈಗೆ ಜಾಗ ಬದಲಿಸಿದ್ದ.ಅಲ್ಲಿನ ಟ್ರಿಪ್ಲಿಕೇನ್ ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡೆ ಐಇಡಿ ಬಾಂಬ್ ತಯಾರಿಕೆ ಮಾಡಿ 2024 ಜನವರಿ 22ರಂದು ಬೆಳಗ್ಗೆ ಐಇಡಿ ಬಾಂಬ್ ತೆಗೆದುಕೊಂಡು ಬೆಂಗಳೂರಿಗೆ ಬಂದಿದ್ದ.
    ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಾಂಬ್ ಇಡಲು ಸಂಚು ಹೂಡಿದ್ದ.ಹೆಚ್ಚಿನ ಭದ್ರತೆ ಹಿನ್ನೆಲೆಯಲ್ಲಿ ಅಲ್ಲಿಡಲು ಸಾಧ್ಯವಾಗದೆ ಬಿಜೆಪಿ ಕಚೇರಿ ಹಿಂಭಾಗದಲ್ಲಿ ಬಾಂಬ್ ಇಟ್ಟು 90 ನಿಮಿಷಕ್ಕೆ ಟೈಮರ್ ಸೆಟ್ ಮಾಡಿ ಚೆನ್ನೈಗೆ ಪರಾರಿಯಾಗಿದ್ದ.
    ದ್ದ. ಬಾಂಬ್ ಸ್ಫೋಟವಾಗಲಿಲ್ಲ.ತಾಂತ್ರಿಕ ಕಾರಣದಿಂದ ಆ ಬಾಂಬ್ ಸ್ಫೋಟವಾಗಲಿಲ್ಲ.ಆ ಕನಿಷ್ಠಪಕ್ಷ ಆ ಬಾಂಬ್ ಪತ್ತೆಯೂ ಆಗಿರಲಿಲ್ಲ.
    ಮಲ್ಲೇಶ್ವರಂನ  ಬಿಜೆಪಿ ಕಚೇರಿಯ ಹಿಂಭಾಗ ಇಟ್ಟಿದ್ದ ಬಾಂಬ್ ಸ್ಫೋಟಗೊಳ್ಳದ ಹಿನ್ನೆಲೆಯಲ್ಲಿ ಮತ್ತೆ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ಮಾಡಿ ಅಂತಿಮವಾಗಿ ಫೆಬ್ರವರಿ ತಿಂಗಳಲ್ಲಿ ಐಇಡಿ ಬಾಂಬ್ ತಯಾರಿಸಿ, ಫೆಬ್ರವರಿ 29ರಂದು ಶಾಜಿಬ್ ಚೆನ್ನೈನಿಂದ ಬೆಂಗಳೂರಿಗೆ ಬಂದು ಕೆಆರ್ ಪುರಂ ಟಿನ್ ಫ್ಯಾಕ್ಟರಿ ಬಳಿ ಇಳಿದು, ಕುಂದಲಹಳ್ಳಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟಿದ್ದ ಅದು ಸ್ಪೋಟ ವಾಯಿತು ಎಂದು ಹೇಳಿರುವ ಎನ್ಐಎ ಇಡೀ ವಿದ್ಯಮಾನವನ್ನು ಎಳೆ ಎಳೆಯಾಗಿ ಚಾರ್ಜ್ ಶೀಟ್ನಲ್ಲಿ ಬಿಚ್ಚಿಟ್ಟಿದೆ.

    Bangalore Congress Government Karnataka News Politics Varthachakra ಅಪರಾಧ ಸುದ್ದಿ ಇಡಿ ಉಗ್ರ ಎನ್ಐಎ ನ್ಯಾಯ ಬಿಜೆಪಿ Bengaluru ರಾಮೇಶ್ವರಂ ಕೆಫೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಈ ರಸ್ತೆಯಲ್ಲಿ ಆಟೋ ಸಂಚಾರ ಇಲ್ಲ.
    Next Article ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MyronCohah on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Fabiantat on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • DichaelFew on ಅಗಲಿದ “ಕಲಾ ತಪಸ್ವಿ”
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe