ಬೆಂಗಳೂರು,ನ. 8-
ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ಬ್ರೂಕ್ ಫೀಲ್ಡ್ ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಪಾಕಿಸ್ತಾನದ ನಂಟಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ
ಪ್ರಕರಣದ ತನಿಖೆ ಮಾಡಿದ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಘಟನೆಗೆ ಪಾಕಿಸ್ತಾನದ ನಂಟಿರುವ ಮಾಹಿತಿ ಉಲ್ಲೇಖವಾಗಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಪಾಕ್ ಮೂಲದ ಶಂಕಿತ ಉಗ್ರ ಫೈಸಲ್ ಶಾಮೀಲಾಗಿದ್ದಾನೆ
ಸದ್ಯ ಈತ ಪಾಕಿಸ್ತಾನದಲ್ಲಿದ್ದಾನೆ ಎನ್ನಲಾಗಿದೆ.
ಈ ಸ್ಪೋಟದ ರೂವಾರಿಗಳಾದ ತಾಹಾ ಮತ್ತು ಶಾಜಿಬ್ ಮಂಗಳೂರು ಕುಕ್ಕರ್ ಸ್ಫೋಟದ ಬಳಿಕ ನಾಪತ್ತೆಯಾಗಿದ್ದರು. ಕೆಲಕಾಲದ ಬಳಿಕ ಮತ್ತೆ ವಾಪಾಸ್ ಬೆಂಗಳೂರಿಗೆ ಬಂದಿದ್ದರು. ಆಗ ಮುಜಾಮಿಲ್ ಷರೀಫ್ ಎಂಬಾತನ ಪರಿಚಯವಾಗಿತ್ತು.
ಮುಜಾಮಿಲ್ ಮೆಜೆಸ್ಟಿಕ್ ಬಳಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ತಾಹಾ ಮತ್ತು ಶಾಜಿಬ್ ಮನಪರಿವರ್ತಿಸಿ ಐಸಿಸ್ಗೆ ಸೇರ್ಪಡೆ ಮಾಡಿದ್ದ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ
ಈತ ಮೊದಲ ಹಂತದಲ್ಲಿ ಕೆಲವು ದುಷ್ಕೃತ್ಯ ನಡೆಸಲು ಮುಜಾಮಿಲ್ಗೆ ತಾಹಾ ಮತ್ತು ಶಾಜಿಬ್ ಟಾಸ್ಕ್ ನೀಡಿದ್ದರು.ಅದರಂತೆ ಇವರು 2023 ಡಿಸೆಂಬರ್ನಲ್ಲಿ ಬೆಂಗಳೂರಲ್ಲಿ ಬಾಂಬ್ ಸ್ಫೋಟ ನಡೆಸಲು ಸಂಚು ಹೂಡಿದ್ದರು.
ಆನ್ಲೈನ್ ಹ್ಯಾಂಡ್ಲರ್ ಮೂಲಕ ಅವರಿಗೆ ಈ ಸೂಚನೆ ಬಂದಿತ್ತು. ಈ ಆನ್ಲೈನ್ ಹ್ಯಾಂಡ್ಲರ್ ಪಾಕಿಸ್ತಾನದಲ್ಲಿ ನೆಲೆಸಿರುವ ಫೈಸಲ್.ಈತ ಜನವರಿ 22, 2024ರಂದು ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅಂದೇ ಸ್ಫೋಟ ನಡೆಸಿ ಎಂಬ ಸೂಚನೆ ನೀಡಿದ್ದ
ಈ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿ ಗುರಿಯಾಗಿಸಿಕೊಂಡಿದ್ದ ಶಾಜಿಬ್, ಬೆಂಗಳೂರಿನಿಂದ ಚೆನ್ನೈಗೆ ಜಾಗ ಬದಲಿಸಿದ್ದ.ಅಲ್ಲಿನ ಟ್ರಿಪ್ಲಿಕೇನ್ ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡೆ ಐಇಡಿ ಬಾಂಬ್ ತಯಾರಿಕೆ ಮಾಡಿ 2024 ಜನವರಿ 22ರಂದು ಬೆಳಗ್ಗೆ ಐಇಡಿ ಬಾಂಬ್ ತೆಗೆದುಕೊಂಡು ಬೆಂಗಳೂರಿಗೆ ಬಂದಿದ್ದ.
ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಾಂಬ್ ಇಡಲು ಸಂಚು ಹೂಡಿದ್ದ.ಹೆಚ್ಚಿನ ಭದ್ರತೆ ಹಿನ್ನೆಲೆಯಲ್ಲಿ ಅಲ್ಲಿಡಲು ಸಾಧ್ಯವಾಗದೆ ಬಿಜೆಪಿ ಕಚೇರಿ ಹಿಂಭಾಗದಲ್ಲಿ ಬಾಂಬ್ ಇಟ್ಟು 90 ನಿಮಿಷಕ್ಕೆ ಟೈಮರ್ ಸೆಟ್ ಮಾಡಿ ಚೆನ್ನೈಗೆ ಪರಾರಿಯಾಗಿದ್ದ.
ದ್ದ. ಬಾಂಬ್ ಸ್ಫೋಟವಾಗಲಿಲ್ಲ.ತಾಂತ್ರಿಕ ಕಾರಣದಿಂದ ಆ ಬಾಂಬ್ ಸ್ಫೋಟವಾಗಲಿಲ್ಲ.ಆ ಕನಿಷ್ಠಪಕ್ಷ ಆ ಬಾಂಬ್ ಪತ್ತೆಯೂ ಆಗಿರಲಿಲ್ಲ.
ಮಲ್ಲೇಶ್ವರಂನ ಬಿಜೆಪಿ ಕಚೇರಿಯ ಹಿಂಭಾಗ ಇಟ್ಟಿದ್ದ ಬಾಂಬ್ ಸ್ಫೋಟಗೊಳ್ಳದ ಹಿನ್ನೆಲೆಯಲ್ಲಿ ಮತ್ತೆ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ಮಾಡಿ ಅಂತಿಮವಾಗಿ ಫೆಬ್ರವರಿ ತಿಂಗಳಲ್ಲಿ ಐಇಡಿ ಬಾಂಬ್ ತಯಾರಿಸಿ, ಫೆಬ್ರವರಿ 29ರಂದು ಶಾಜಿಬ್ ಚೆನ್ನೈನಿಂದ ಬೆಂಗಳೂರಿಗೆ ಬಂದು ಕೆಆರ್ ಪುರಂ ಟಿನ್ ಫ್ಯಾಕ್ಟರಿ ಬಳಿ ಇಳಿದು, ಕುಂದಲಹಳ್ಳಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟಿದ್ದ ಅದು ಸ್ಪೋಟ ವಾಯಿತು ಎಂದು ಹೇಳಿರುವ ಎನ್ಐಎ ಇಡೀ ವಿದ್ಯಮಾನವನ್ನು ಎಳೆ ಎಳೆಯಾಗಿ ಚಾರ್ಜ್ ಶೀಟ್ನಲ್ಲಿ ಬಿಚ್ಚಿಟ್ಟಿದೆ.
Previous Articleಬೆಂಗಳೂರಿನ ಈ ರಸ್ತೆಯಲ್ಲಿ ಆಟೋ ಸಂಚಾರ ಇಲ್ಲ.
Next Article ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್.


1 Comment
mrluck casino mcluckcasinogm.com mcluck РњРћ