Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Viral

    ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas

    vartha chakraBy vartha chakraSeptember 6, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕೇಳಿಬಂದಿದ್ದ ಮಾಜಿ ಸಚಿವ ದಿವಂಗತ ಕೃಷ್ಣಪ್ಪ ಅವರ ಪುತ್ತಿ ಹಾಗೂ ಬಿಜೆಪಿ ನಾಯಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಇದೀಗ ಮತ್ತೊಮ್ಮೆ ರಾಜ್ಯ ರಾಜಕೀಯದ ಅಂಗಳದಲ್ಲಿ ಕೇಳಿಬಂದಿದೆ.
    ಈ ಸುದ್ದಿಗೆ ಪೂರಕವೆಂಬಂತೆ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಪೂರ್ಣಿಮಾ‌ ಶ್ರೀನಿವಾಸ್ (Poornima Srinivas) ಮನೆಗೆ ತೆರಳಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.
    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಿಜೆಪಿ ಶಾಸಕರಾಗಿದ್ದ ಪೂರ್ಣಿಮಾ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿತ್ತು. ನಂತರ ಅವರು ಬೆಂಗಳೂರಿನ ಕೆ.ಆರ್. ಪುರಂ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

    ಆದರೆ, ನಂತರದಲ್ಲಿ ನಡೆದ ವಿದ್ಯಮಾನಗಳು ಇಂತಹ ಬೆಳವಣಿಗೆಗಳಿಗೆ ಪೂರ್ಣ ವಿರಾಮ ಹಾಕಿದ್ದವು. ಹಿರಿಯೂರು ಕ್ಷೇತ್ರದಿಂದ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು ಸೋಲು ಅನುಭವಿಸಿದ್ದರು. ಇದಾದ ಬಳಿಕ ಮತ್ತೆ ಅವರು ಕಾಂಗ್ರೆಸ್ ಸೇರುವ ಸುದ್ದಿಗಳಿಗೆ ಚಾಲನೆ ಸಿಕ್ಕಿದೆ.
    ಬಿಬಿಎಂಪಿ ಸದಸ್ಯರಾಗಿ,ಶಾಸಕರಾಗಿ ತಮ್ಮದೆ ಪ್ರಭಾವ ಹೊಂದಿರುವ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಬಿಜೆಪಿ ನಾಯಕರು ಕಡೆಗಣಿಸಿದ್ದಾರೆ.ಪಕ್ಷ ಸಂಘಟನೆ ಸೇರಿದಂತೆ ಯಾವುದೇ ವಿಷಯದಲ್ಲೂ ಅವರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂಬ ಅಸಮಾಧಾನದಲ್ಲಿರುವ ಅವರನ್ನು ಪಕ್ಷ ತೊರೆಯುವಂತೆ ಅವರ ಬೆಂಬಲಿಗರು ಸಲಹೆ ಮಾಡುತ್ತಿದ್ದಾರೆ ಎನ್ನಲಾಗಿದೆ.

    Poornima Srinivas

    ಇನ್ನೂ ಅವರ ತಂದೆ ಕೃಷ್ಣಪ್ಪ ಅವರು ಕಾಂಗ್ರೆಸ್ ನ ಪ್ರಭಾವಿ ನಾಯಕರಾಗಿದ್ದರು. ಕೆ.ಆರ್.ಪುರಂ ವಿಧಾನಸಭೆ ಕ್ಷೇತ್ರದ ಟಿಕೆಟ್ ವಿಚಾರವಾಗಿ ಬೇಸರಗೊಂಡಿದ್ದ ಅವರು ಕಾಂಗ್ರೆಸ್ ತೊರೆದು ಜೆಡಿ ಎಸ್ ಸೇರಿ ಆ ಪಕ್ಷದ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.ಈ ವಿಷಯವಾಗಿ ಮೂಲ ಕಾಂಗ್ರೆಸ್ ನಾಯಕರು ತಮ್ಮ ನಾಯಕರಾಗಿದ್ದ ಕೃಷ್ಣಪ್ಪ ಅವರಿಗೆ ಅನ್ಯಾಯವಾಗಿದೆ.ಈ ಹಿನ್ನೆಲೆಯಲ್ಲಿ ಅವರ ಮಗಳನ್ನು ಪಕ್ಷಕ್ಕೆ ಕರೆತಂದು ಅವರಿಗೆ ಸ್ಥಾನಮಾನ ನೀಡಬೇಕು ಎಂಬ ಅಭಿಪ್ರಾಯ ಹೊಂದಿದ್ದಾರೆ. ಅಷ್ಟೇ ಅಲ್ಲ ಹಲವರು ಪೂರ್ಣಿಮಾ ಅವರನ್ನು ಸಂಪರ್ಕಿಸಿ ಕಾಂಗ್ರೆಸ್ ಸೇರಲು ಆಹ್ವಾನ ನೀಡುತ್ತಿದ್ದಾರೆ. ಈ ವಿಷಯವಾಗಿ ಮಾತುಕತೆಗಳು ನಡೆಯುತ್ತಿವೆ. ಇದರ ನಡುವೆ ಪೂರ್ಣಿಮಾ ಅವರ ಪತಿ‌ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು,ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

    ಈ ಎಲ್ಲಾ ಸುದ್ದಿಗಳ ನಡುವೆ ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ತೆರಳಿ ಹಬ್ಬ ಆಚರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ,ಮಾಧ್ಯಮಗಳು ಆಪರೇಷನ್ ಹಸ್ತದ ಬಗ್ಗೆ ಮಾತನಾಡುತ್ತಿದ್ದೀರಿ. ನಾನು ಯಾವುದೇ ಕಾರಣಕ್ಕೂ ಆಪರೇಷನ್ ಹಸ್ತ ಮಾಡುವುದಿಲ್ಲ. ನಮ್ಮದು ಕೇವಲ ಕೋಆಪರೇಷನ್ ಮಾತ್ರ” ಎಂದು ತಿಳಿಸಿದರು.
    ನಾವು ಕೇವಲ ಚುನಾವಣಾ ಸಮಯದಲ್ಲಿ ರಾಜಕಾರಣ ಮಾಡುತ್ತೇವೆ. ಈಗ ರಾಜಕಾರಣ ಮಾಡುವುದಿಲ್ಲ. ಮಾಜಿ ಸಚಿವ ಕೃಷ್ಣಪ್ಪ ಅವರು ನಮ್ಮ ನಾಯಕರು. ಅವರ ಸುಪುತ್ರಿ ಪೂರ್ಣಿಮಾ ಅವರು ನನಗೆ ಸಹೋದರಿ ಇದ್ದಂತೆ. ಅವರ ಅಳಿಯ ನನ್ನ ಸ್ನೇಹಿತರು. ಇಂದು ಅವರು ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಮಾಡಿ ಆಹ್ವಾನ ನೀಡಿದ್ದರು, ಹೀಗಾಗಿ ನಾನು ಇಲ್ಲಿಗೆ ಬಂದು ಭಗವಂತನ ಆಶೀರ್ವಾದ ಪಡೆದು ಊಟ ಮಾಡಿದ್ದೇನೆ” ಎಂದು ತಿಳಿಸಿದರು

    Verbattle
    Verbattle
    Verbattle
    Congress Hiriyur Karnataka Congress m poornima Poornima Srinivas ಕಾಂಗ್ರೆಸ್ Election ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬರ ಘೋಷಣೆಗೂ ಕೇಂದ್ರದ ಅಡ್ಡಿ? | Drought
    Next Article ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಬಂಪರ್ | Lok Sabha 2024
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. aviator_qgEt on February 12, 2026 12:48 pm

      aviator game online offers an exciting experience and the opportunity to win real money directly from your device.
      With each second that passes, players are faced with increasing pressure as they evaluate their decisions.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Gbaezg on GT ದೇವೇಗೌಡರ ಅನುಭವಕ್ಕೆ ಮನ್ನಣೆ | G T Devegowda
    • Dvikyy on ಗ್ರನೇಡ್ ಬಳಕೆ ಗೊತ್ತಿಲ್ಲದ ಶಂಕಿತ ಉಗ್ರರು | Grenade
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.