Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೆನ್ ಡ್ರೈವ್ ಹಂಚಿದವರು ಯಾರು ??
    Trending

    ಪೆನ್ ಡ್ರೈವ್ ಹಂಚಿದವರು ಯಾರು ??

    vartha chakraBy vartha chakraMay 8, 2024Updated:May 8, 202417 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು, ಮೇ.8-
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಪೆನ್‌ಡ್ರೈವ್‌ ಬಯಲು ಮಾಡಿದ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರ ಮಾಜಿ ಡ್ರೈವರ್ ಕಾರ್ತಿಕ್ ಗೌಡನನ್ನು  ಬಂಧಿಸಲು ಮುಂದಾಗಿದ್ದಾರೆ.
    ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪ್ರಕರಣ ದಾಖಲಾದ ಬಳಿಕ ಡ್ರೈವರ್ ಕಾರ್ತಿಕ್ ಅವರನ್ನು ವಿಚಾರಣೆ ಮಾಡಲಾಗಿತ್ತು. ಕಳೆದ ಏಪ್ರಿಲ್ 30ರಂದು ಎಸ್‌ಐಟಿ ವಿಚಾರಣೆಗೆ ಕಾರ್ತಿಕ್ ಗೌಡ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಹಾಸನದ ಪೆನ್‌ಡ್ರೈವ್‌ ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಹೀಗಾಗಿ ಯಾವುದೇ ಹೇಳಿಕೆ, ದಾಖಲೆಯನ್ನು ಬಹಿರಂಗ ಪಡಿಸಬಾರದು ಎಂದು ಎಚ್ಚರಿಕೆ ನೀಡಲಾಗಿತ್ತು.
    ಪೆನ್‌ಡ್ರೈವ್‌ ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಯಾವುದೇ ಹೇಳಿಕೆ, ದಾಖಲೆ ಬಹಿರಂಗ ಪಡಿಸಬಾರದು. ಇದರಿಂದ ತನಿಖೆಗೆ ಹಿನ್ನೆಡೆಯಾಗುತ್ತೆ ಎಂದು ಕಾರ್ತಿಕ್ ಗೌಡಗೆ ಎಸ್‌ಐಟಿ ಸೂಚಿಸಿತ್ತು. ಆದರೆ ಕಾರ್ತಿಕ್ ಗೌಡ ಅವರು ಸಂದರ್ಶನಗಳನ್ನು ನೀಡಿದ್ದು, ಕೆಲವು ಮಹತ್ವದ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ. ಪೋಟೋ, ವಿಡಿಯೋ ವೈರಲ್ ಆಗಿರಬಹುದಾದ ಬಗ್ಗೆ ಆರೋಪಿಯ ಬಗ್ಗೆ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
    ಡ್ರೈವರ್ ಕಾರ್ತಿಕ್ ಗೌಡ ಅವರು ಮೊದಲ ವಿಚಾರಣೆಯಲ್ಲಿ ಫೋಟೋ ವಿಡಿಯೋ ಮೊದಲು ನನಗೆ ಸಿಕ್ಕಿದ್ದು ನಂತರ ದೇವರಾಜೇಗೌಡರಿಗೆ ಕೊಟ್ಟಿದ್ದೆ. ಅವರೇ ಪೆನ್‌ಡ್ರೈವ್ ವಿಡಿಯೋ ವೈರಲ್ ಮಾಡಿರಬಹುದು ಎಂದಿದ್ದರು.
    ಆದರೆ,ಪೋಟೋ, ವಿಡಿಯೋಗಳನ್ನು ಪ್ರಜ್ವಲ್ ಸ್ನೇಹಿತ ಮೊದಲು ನನಗೆ ಕೊಟ್ಟಿತ್ತು. ಪ್ರಜ್ವಲ್ ಸ್ನೇಹಿತ ಬ್ಲೂ ಟೂತ್‌ನಲ್ಲಿ ನನ್ನ ಮೊಬೈಲ್‌ಗೆ ಕಳಿಸಿದ್ದ. ಅದರಲ್ಲಿ ಕೆಲ ಫೋಟೋಗಳನ್ನ ನಾನು ಭವಾನಿ ರೇವಣ್ಣ ಅವರಿಗೆ ಕಳಿಸಿ ಪ್ರಜ್ವಲ್ ಕೃತ್ಯದ ಬಗ್ಗೆ ಹೇಳಿದ್ದೆ ಎಂದಿದ್ದಾರೆ. ಈ ಹೇಳಿಕೆಗಳ ಹಿನ್ನೆಲೆಯಲ್ಲಿ ಡ್ರೈವರ್‌ ಕಾರ್ತಿಕ್ ಅವರನ್ನು ವಶಕ್ಕೆ ಪಡೆಯಲು ಎಸ್ಐಟಿ ಸಿದ್ಧತೆ ನಡೆಸಿದ್ದಾರೆ.
    ಜೆಡಿಎಸ್ ದೂರು:
    ಈ ನಡುವೆ ಸಂತ್ರಸ್ತ ಮಹಿಳೆಯರ ಅಶ್ಲೀಲ ಚಿತ್ರಗಳುಳ್ಳ ವಿಡಿಯೋಗಳನ್ನು ಬಿತ್ತರಿಸಿರುವ ವ್ಯಕ್ತಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ 2022ರಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಎಸ್‌ಪಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ಜೆಡಿಎಸ್‌ ಮಹಿಳಾ ವಿಭಾಗ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದೆ.
    ಸಂತ್ರಸ್ತ ಮಹಿಳೆಯರಿಗೆ ಹಾಗೂ ಕುಟುಂಬದವರಿಗೆ ನ್ಯಾಯ ಒದಗಿಸಲು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ರಾಜಕೀಯ ಮುಖಂಡರು, ಕಾರ್ಯಕರ್ತರು, ಸಮಾಜಘಾತುಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಜೆಡಿಎಸ್‌ ಮಹಿಳಾ ವಿಭಾಗ ಒತ್ತಾಯಿಸಿದೆ.
    ಜೆಡಿಎಸ್‌ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷೆ ರಶ್ಮಿ ರಾಮೇಗೌಡ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ವಿಫಲವಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.
    ಮಹಿಳಾ ಆಯೋಗದ ಪತ್ರವನ್ನು ಆಧರಿಸಿ ಸರ್ಕಾರ ಹಾಸನ ವಿಡಿಯೋ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ರಚಿಸಿರುವುದನ್ನು ಸ್ವಾಗತಿಸುವುದಾಗಿ ತಿಳಿಸಲಾಗಿದೆ

    Verbattle
    Verbattle
    Verbattle
    ಕಾನೂನು ತಂತ್ರಜ್ಞಾನ ನ್ಯಾಯ ರಾಜಕೀಯ ವೈರಲ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕರ್ ಬಿದರಿ ಫೇಸ್ ಬುಕ್ ನಲ್ಲಿ ಏನಿದೆ ಗೊತ್ತಾ.
    Next Article ಕುಮಾರಸ್ವಾಮಿ ಬ್ಲಾಕ್ ಮೇಲ್ ಕಿಂಗ್ ಅಂತೆ…
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fzwdub on ವಿಜಯೇಂದ್ರ ಗೆ ಹೈಕಮಾಂಡ್ ಕೊಟ್ಟ ಸೂಚನೆ ಗೊತ್ತಾ
    • Tracymix on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Dzjasg on ಬದಲಾಗುತ್ತಾ ನರೇಂದ್ರ ಮೋದಿ ಹುದ್ದೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.