Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರೇ ಬೆಚ್ಚಿ ಬಿದ್ದ ಘಟನೆ ಇದು !
    ಬಂಧನ

    ಪೊಲೀಸರೇ ಬೆಚ್ಚಿ ಬಿದ್ದ ಘಟನೆ ಇದು !

    vartha chakraBy vartha chakraJune 7, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.7
    ರಾಜಧನಗರದ  ಹೊರವಲಯದ ಆನೇಕಲ್ ಬಳಿಯ ಹೀಲಲಿಗೆ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿರುವ ಘಟನೆ ಪೊಲೀಸರನ್ನೇ ಬೆಚ್ಚಿಬೀಳುವಂತೆ ಮಾಡಿದೆ.
    ಎಂದಿನಂತೆ ಠಾಣೆಯಲ್ಲಿ ಪೊಲೀಸರು ಕರ್ತವ್ಯ ನಿರತರಾಗಿದ್ದರು. ಈ ವೇಳೆ ಬ್ಯಾಗ್ ಹಿಡಿದು ಒಳಬಂದ ವ್ಯಕ್ತಿಯೊಬ್ಬ ಅದರೊಳಗೆ ಇದ್ದ‌ ರುಂಡವನ್ನು ಪೊಲೀಸರ ಟೇಬಲ್ ಮೇಲೆ ಇಟ್ಟು ನಾನು ಕೊಲೆ ಮಾಡಿದ್ದೇನೆ ನನ್ನನ್ನು ಬಂಧಿಸಿ ಎಂದಿದ್ದಾನೆ.
    ಈ ವಿದ್ಯಮಾನ ಕರ್ತವ್ಯದಲ್ಲಿದ್ದ ಪೊಲೀಸರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
    ಪ್ರಿಯಕರನ ಜೊತೆ ಸರಸವಾಡುತ್ತಿದ್ದ ಪತ್ನಿಯನ್ನು ರೆಡ್ ಹ್ಯಾಂಡಾಗಿ ಹಿಡಿದು ರೊಚ್ಚಿಗೆದ್ದ ಪತಿ ಆಕೆಯ ಕತ್ತು ಕತ್ತರಿಸಿ ರುಂಡವನ್ನು ಕೈಯಲ್ಲಿ ಹಿಡಿದುಕೊಂಡು ಸೂರ್ಯನಗರ ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ.
    ಹೆನ್ನಾಗರ ನಿವಾಸಿ ಶಂಕರ್‌(28) ತನ್ನ ಪತ್ನಿ ಮಾನಸ ಳ ರುಂಡ ಕಡಿದು ಬೈಕ್‌ ನಲ್ಲೇ ಹಿಡಿದುಕೊಂಡು ಸೂರ್ಯನಗರ ಠಾಣೆಗೆ ಬಂದಿದ್ದಾನೆ.
    ಶಂಕ‌ರ್ ಹಾಗೂ ಮಾನಸ ಇಬ್ಬರೂ ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ದಂಪತಿ ತಿಂಗಳ ಹಿಂದಷ್ಟೇ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಬಂದಿದ್ದರು ಇದೇ ತಿಂಗಳು 3ನೇ ತಾರೀಕು ರಾತ್ರಿ ಕೆಲಸ ನಿಮಿತ್ತ ತೆರಳಿದ್ದ ಶಂಕ‌ರ್, ಪತ್ನಿಗೆ ಬೆಳಗ್ಗೆ ಬರುವುದಾಗಿ ಹೇಳಿ ಹೋಗಿದ್ದ. ಆದರೆ ತಡರಾತ್ರಿಯೇ ಮನೆಗೆ ಬಂದಿದ್ದಾನೆ. ಈ ವೇಳೆ ಪತ್ನಿ ಕಳ್ಳಾಟ ಬಯಲಾಗಿದೆ.
    ಈ ವೇಳೆ ಪತ್ನಿ ತನ್ನ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದು ಆತನಿಗೆ ಕಂಡುಬಂದಿದೆ. ಮಹಿಳೆ ರೆಡ್ ಹ್ಯಾಂಡ್ ಆಗಿ ಪ್ರಿಯಕರನ ಜೊತೆ ಸಿಕ್ಕಿಬಿದ್ದಿದ್ದಾಳೆ. ಇದನ್ನು ಕಂಡು ಆಕ್ರೋಶಗೊಂಡ ಶಂಕರ್ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ. ಪತ್ನಿಯ ಸಹವಾಸ ಬೇಡ ಎಂದು ಆಕೆಯನ್ನು ಪ್ರಿಯಕರನ ಜೊತೆಯೇ ಕಳುಹಿಸಿದ್ದಾನೆ. ಆದರೆ ಪತ್ನಿ ಮಾನಸ ಮಾತ್ರ ಪದೇ ಪದೆ ಮನೆಗೆ ಬಂದು ಗಂಡ ಶಂಕರ್‌ಗೆ ಹಿಂಸೆ ನೀಡುತ್ತಿದ್ದಳು.
    ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಶಂಕರ್ ಆಕೆಯ ತಲೆ ಕಡಿದು ಪೊಲೀಸ್‌ ಠಾಣೆಗೆ ತಂದಿದ್ದಾನೆ. ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    ಕೊಲೆ Bengaluru ಬೈಕ್ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಬಾಬು ಗೆ ಬಂಪರ್
    Next Article ಫೈನಲ್ ಪಂದ್ಯಕ್ಕೂ ಮೊದಲೇ ವಿಜಯೋತ್ಸವಕ್ಕೆ ಅರ್ಜಿ ಸಲ್ಲಿಸಿದ RCB.
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertnes on ಬೆಂಗಳೂರು ರಸ್ತೆಗಳ ದುರಸ್ತಿ
    • Robertnes on ಪರಿಷತ್ ನಾಮಕರಣ: ಸಿಕ್ಕವರಿಗೆ ಸೀರುಂಡೆ (ಸುದ್ದಿ ವಿಶ್ಲೇಷಣೆ) | Karnataka Vidhan Parishad
    • Robertnes on AMAZON ಪಾರ್ಸೆಲ್ ನಲ್ಲಿ ಬಂದಿದ್ದು ನೋಡಿ ಬೆಚ್ಚಿದ ದಂಪತಿ.
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe