Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರ ರಾತ್ರಿ ಪ್ರಯಾಣಕ್ಕೆ ಬ್ರೇಕ್
    Bengaluru

    ಪೊಲೀಸರ ರಾತ್ರಿ ಪ್ರಯಾಣಕ್ಕೆ ಬ್ರೇಕ್

    vartha chakraBy vartha chakraSeptember 10, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.8-ಗಾಂಜಾ ಗ್ಯಾಂಗ್ ಬಂಧನಕ್ಕೆ ಬೆನ್ನತ್ತಿ ಹೋಗಿದ್ದಾಗ ಆಂಧ್ರಪ್ರದೇಶದ ಚಿತ್ತೂರು ಬಳಿ ಕಾರು ಅಪಘಾತ ಸಂಭವಿಸಿ ಸಬ್ ಇನ್​ಸ್ಪೆಕ್ಟರ್, ಕಾನ್​ಸ್ಟೇಬಲ್ ಸೇರಿ ಮೂವರು ದಾರುಣ ಮೃತಪಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಸಿಬ್ಬಂದಿಗಳ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
    ಕಾನೂನು ಸುವ್ಯವಸ್ಥೆ ಬಂದೋ ಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖಾ ಸಂಬಂಧ ಹಾಗೂ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ಆದೇಶಿಸಲಾಗಿದೆ.
    ಸಿಐಡಿ ಕಚೇರಿಯಲ್ಲಿ ಇರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾತ್ರ ಅನ್ವಯಿಸುವಂತೆ ಸಿಐಡಿ ಡಿಜಿಪಿ ಆದೇಶ ಹೊರಡಿಸಿದ್ದಾರೆ.
    ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿಯಲ್ಲದೆ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರು, ಸಿಎಆರ್, ಡಿಎಆರ್, ಕೆಎಸ್ಸಾರ್ಪಿ ಹಾಗೂ ಇತರೆ ಘಟಕಗಳ ಅಧಿಕಾರಿ ಮತ್ತು ಸಿಬ್ಬಂದಿಯೂ ರಾತ್ರಿ ಪ್ರಯಾಣದ ವೇಳೆ ಅಪಘಾತಗಳಾಗಿ ಮೃತಪಟ್ಟಿರುವ ಉದಾಹರಣೆಗಳಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್​ಸಿಆರ್​ಬಿ) ವರದಿ ಪ್ರಕಾರ ದೇಶದಲ್ಲಿ 2021ರಲ್ಲಿ ವಿವಿಧ ದರ್ಜೆಯ 427 ಅಧಿಕಾರಿ, ಸಿಬ್ಬಂದಿ ಮೃತಪಟ್ಟಿದ್ದಾರೆ. ಇದರಲ್ಲಿ 339 ಮಂದಿ ರಸ್ತೆ ಅಪಘಾತಗಳಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ದೇಶದಲ್ಲಿ ಒಟ್ಟಾರೆ ಕರ್ತವ್ಯದ ವೇಳೆ 1,632 ಮಂದಿ ಗಾಯಗೊಂಡಿದ್ದಾರೆ. ರಸ್ತೆ ಅಪಘಾತಗಳಲ್ಲಿ 372 ಅಧಿಕಾರಿ ಮತ್ತು ಸಿಬ್ಬಂದಿ ಗಾಯಗೊಂಡಿದ್ದಾರೆ. ಕರ್ನಾಟಕದಲ್ಲಿ ನಾಲ್ವರು ಮೃತಪಟ್ಟಿದ್ದರೆ 25 ಮಂದಿ ಗಾಯಗೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಹೀಗಾಗಿ ಪೊಲೀಸರ ಹಿತದೃಷ್ಟಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸುವ ಆದೇಶ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    ಅಪಘಾತ ಕಾನೂನು ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಹೆದ್ದಾರಿಗಳ ಅಭಿವೃದ್ಧಿಗೆ ನೀಲ ನಕ್ಷೆ
    Next Article ದಿನೇಶ್ ಗುಂಡೂರಾವ್ ಮನೆಕೆಲಸದ ವ್ಯಕ್ತಿ ಎಲ್ಲಿ?
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 83ag6 on ಮಹಿಳಾ ಅಧಿಕಾರಿಗಳ ಮಾಹಿತಿ ಕದಿಯುತ್ತಿದ್ದ ಖದೀಮ
    • nsddh on Dating App ಮೂಲಕ ವಂಚನೆ
    • Melvinboory on ಬಾಟಲಿ ನೀರು ಸುರಕ್ಷಿತವಲ್ಲ
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe