Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಅಧಿಕಾರಿಯೇ‌ ದರೋಡೆ ರೂವಾರಿ
    ಸುದ್ದಿ

    ಪೊಲೀಸ್ ಅಧಿಕಾರಿಯೇ‌ ದರೋಡೆ ರೂವಾರಿ

    vartha chakraBy vartha chakraFebruary 17, 202527 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು:
    ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಬಳಿ ಉದ್ಯಮಿಯೊಬ್ಬರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು 30 ಲಕ್ಷ ರೂ ದರೋಡೆ ಮಾಡಿದ್ದ
    ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಅ‌ಚ್ಚರಿ ಎಂದರೆ ಪೊಲೀಸ್ ಅಧಿಕಾರಿಯೇ ಈ ದರೋಡೆಯ ಸೂತ್ರಧಾರ.
    ದರೋಡೆ ಪ್ರಕರಣ ಸಂಬಂಧ
    ಕೇರಳದ ಕೊಡಂಗಲ್ಲೂರು ಠಾಣೆ ಎಎಸ್​ಐ ಸೇರಿದಂತೆ ಇನ್ನೂ ನಾಲ್ಕು ಮಂದಿ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
    ಕೊಡಂಗಲ್ಲೂರು ಪೊಲೀಸ್‌ ಠಾಣೆ ಎಎಸ್​ಐ ಶಫೀರ್​ ಬಾಬು (48), ಮನೆಯ ಮಾಹಿತಿ ನೀಡಿದ್ದ ಸ್ಥಳೀಯ ಆರೋಪಿ ಕೊಳ್ನಾಡು ನಿವಾಸಿ ಸಿರಾಜಿದ್ದೀನ್​ (37), ಬಂಟ್ವಾಳ ನಿವಾಸಿ ಮೊಹಮ್ಮದ್​ ಇಕ್ಬಾಲ್​ (38) ಹಾಗೂ ಮಂಗಳೂರು ಪಡೀಲ್​ ನಿವಾಸಿ ಮೊಹಮ್ಮದ್​ ಅನ್ಸಾರ್ (27)​ ಬಂಧಿತ ನಾಲ್ವರು ಆರೋಪಿಗಳಾಗಿದ್ದಾರೆ.
    ತನಿಖಾ ತಂಡವು ಈಗಾಗಲೇ ಕೇರಳ ಕೊಲ್ಲಂ ನಿವಾಸಿಗಳಾದ ಅನಿಲ್​ ಫರ್ನಾಂಡೀಸ್ (49), ಸಚ್ಚಿನ್​ ಟಿ.ಎಸ್. (29), ಹಾಗೂ ಶಬಿನ್​ ಎಸ್​. (27) ಎಂಬವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಿದೆ.​ ಪ್ರಕರಣ ಸಂಬಂಧ ಈವರೆಗೆ ಎಲ್ಲ 7 ಮಂದಿ ಆರೋಪಿಗಳನ್ನು ಬಂಧಿಸಿದಂತಾಗಿದೆ ಎಂದು ಎಸ್​ಪಿ ಯತೀಶ್ ಮಾಹಿತಿ ನೀಡಿದ್ದಾರೆ.
    ದರೋಡೆ ಕೃತ್ಯದ ಸೂತ್ರದಾರ ಕೇರಳದ ಎಎಸ್​ಐ ಶಫೀರ್ ಎಂದು ತಿಳಿದು ಬಂದಿದೆ. ತ್ರಿಶೂರ್ ಜಿಲ್ಲಾ ಎಸ್​ಪಿಯ ಅನುಮತಿಯೊಂದಿಗೆ ಪೊಲೀಸ್ ಕ್ವಾರ್ಟರ್ಸ್​ನಿಂದ ಆರೋಪಿ ಶಫೀರ್​ ಬಾಬುನನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಟ್ಲ ಪೊಲೀಸ್ ಠಾಣೆಗೆ ಕರೆದು ತರಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ಕೃತ್ಯಕ್ಕೆ ಮನೆಯ ಮಾಹಿತಿ ನೀಡಿದ್ದ ಸ್ಥಳೀಯ ಆರೋಪಿ ಕೊಳ್ನಾಡು ನಿವಾಸಿ ಸಿರಾಜುದ್ದೀನ್​ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು. ಆತ ನೀಡಿದ ಮಾಹಿತಿಯ ಆಧಾರದಲ್ಲಿ ಮೊಹಮ್ಮದ್​ ಇಕ್ಬಾಲ್​ ಹಾಗೂ ಮೊಹಮ್ಮದ್​ ಅನ್ಸಾರ್​ ಎಂಬವರನ್ನು ಬಂಧಿಸಲಾಯಿತು. ಆ ಬಳಿಕ, ಕೇರಳದ ಎಎಸ್​ಐ ಶಫೀರ್​ ಬಾಬುನನ್ನು ಬಂಧಿಸಲಾಗಿದೆ ಎಂದು ಎಸ್​ಪಿ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
    ಎಸ್​ಪಿ ಯತೀಶ್​ ಎನ್​. ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ವ್ಯಾಪ್ತಿಯು ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಅಧಿಕಾರಿ ಹಾಗೂ ಸಿಬ್ಬಂದಿಯ ನಾಲ್ಕು ತಂಡಗಳು ತನಿಖೆಯಲ್ಲಿ ಕಾರ್ಯಾಚರಣೆ ನಡೆಸಿವೆ.
    ಏನಿದು ಘಟನೆ?:
    ಕಳೆದ ಜ. 3ರಂದು ರಾತ್ರಿ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಸಮೀಪದ ಬೋಳಂತೂರು ನಾರ್ಶ ಎಂಬಲ್ಲಿ, ಸಿಂಗಾರಿ ಬೀಡಿ ಕಂಪೆನಿಯ ಮಾಲೀಕ ಎಂ.ಸುಲೈಮಾನ್​ ಅವರ ಮನೆಗೆ ತಮಿಳುನಾಡು ರಿಜಿಸ್ಟ್ರೇಶನ್ ಹೊಂದಿರುವ ಕಾರಿನಲ್ಲಿ ಆಗಮಿಸಿದ 6 ಮಂದಿಯ ತಂಡವೊಂದು ಇ.ಡಿ ದಾಳಿ ನಡೆಸಿದಂತೆ ನಟಿಸಿತ್ತು. ತಾವು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಎಂದು ನಂಬಿಸಿ, ಸುಮಾರು ಎರಡೂವರೆ ಗಂಟೆವರೆಗೆ ತನಿಖೆ ನಡೆಸಿದ ನಾಟಕ ಮಾಡಿ, ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ.ಗಳಷ್ಟು ಹಣವನ್ನು ದೋಚಿಕೊಂಡು ಪರಾರಿಯಾಗಿತ್ತು.

    Verbattle
    Verbattle
    Verbattle
    ಇಡಿ ತಮಿಳುನಾಡು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleವಕೀಲರ ಸಂಘಕ್ಕೆ ವಿವೇಕ್ ಸುಬ್ಬಾರೆಡ್ಡಿ ಅಧಿಪತಿ
    Next Article ನೀರಲ್ಲಿ ತೇಲುತ್ತಿದ್ದ ಯೋಗ ಪಟುಗೆ ಏನಾಯ್ತು ಗೊತ್ತಾ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LinwoodGah on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.