Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.
    Trending

    ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.

    vartha chakraBy vartha chakraSeptember 23, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.

    ಬೆಂಗಳೂರು,ಸೆ. 23- ವೈಯಾಲಿಕಾವಲ್​ನ ಮುನೇಶ್ವರ ಬ್ಲಾಕ್ ನ ಮಹಾಲಕ್ಷ್ಮೀ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ ಎಸ್ ಎಲ್) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ.
    ಕೊಲೆಯಾದ ಮಹಾಲಕ್ಷ್ಮೀ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್​ಎಸ್​​ಎಲ್​ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತುಗಳು ಪತ್ತೆಯಾಗಿಲ್ಲ. ಕೊಲೆ ಆರೋಪಿ ಯಾವುದೇ ಗುರುತು ಸಿಗದಂತೆ ಮನೆಯನ್ನು ಸ್ವಚ್ಛಗೊಳಿಸಿ ಪರಾರಿಯಾಗಿದ್ದಾನೆ.
    ಕೊಲೆ ನಡೆದ ಸ್ಥಳದಲ್ಲಿ, ರಕ್ತ ಕಾಣಬಾರದೆಂದು ಸ್ವಚ್ಛ ಮಾಡಿದ ಮೇಲೂ ಕಲೆಗಳನ್ನು ಪತ್ತೆ ಹಚ್ಚಬಹುದು. ಎಫ್​ಎಸ್​ಎಲ್​ ತಜ್ಞನರು ಲುಮಿನಾಲ್ ಎಂಬ ಕೆಮಿಕಲ್ ಬಳಸಿ ರಕ್ತದ ಕಲೆಗಳನ್ನು ಪತ್ತೆ ಹಚ್ಚುತ್ತಾರೆ. 200 ದಿನಗಳ ಹಿಂದಿನ ರಕ್ತದ ಕಲೆಗಳನ್ನೂ ಸಹ ಲುಮಿನಾಲ್ ಕೆಮಿಕಲ್ ಬಳಸಿ ಪತ್ತೆ ಮಾಡಬಹುದು.
    ಆದರೆ, ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಲುಮಿನಾಲ್ ಕೆಮಿಕಲ್ ಬಳಸಿದರೂ ರಕ್ತದ ಕಲೆಗಳು ಪತ್ತೆಯಾಗಿಲ್ಲ. ಹೀಗಾಗಿ ಕೊಲೆ ಆರೋಪಿ ಯಾವುದೊ ಕೆಮಿಕಲ್ ಬಳಸಿ ಮನೆ ಸ್ವಚ್ಛ ಮಾಡಿರುವ ಶಂಕೆ ಪೊಲೀಸರಿಗೆ ಬಂದಿದೆ. ಇನ್ನು, ಆರೋಪಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಲು, ಪಕ್ಕಾ ಪ್ಲ್ಯಾನ್​ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸಾಕ್ಷ್ಯ ಹೇಗೆ ನಾಶ ಮಾಡಬೇಕು ಎಂಬುವುದನ್ನೂ ಮುಂಚೆಯೇ ಅಧ್ಯಯನ ಮಾಡಿದ್ದಾನೆ ಎಂಬ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ.
    ಮಹಾಲಕ್ಷ್ಮೀ ಸಂಪರ್ಕದಲ್ಲಿದ್ದ ಆಶ್ರಫ್​
    ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಟಿಂಗ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಎಂಬಾತನನ್ನು, ಕರೆದು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಆಶ್ರಫ್​, ಮಹಾಲಕ್ಷ್ಮೀ ಜೊತೆ ಸಂಪರ್ಕದಲ್ಲಿದ್ದೆ ಎಂದು ಹೇಳಿದ್ದಾನೆ. “ಮಹಾಲಕ್ಷ್ಮೀ ಜೊತೆ ಸಂಪರ್ಕ ಇದ್ದಿದ್ದು ನಿಜ. ಆದರೆ ನಾನು ಕೊಲೆ ಮಾಡಿಲ್ಲ. ಆರು ತಿಂಗಳ ಹಿಂದೆ ಆಕೆ ಜೊತೆ ಸಂಪರ್ಕ ಇತ್ತು. ಈಗ ದೂರ ಆಗಿದ್ದೆ. ನಮ್ಮ ಇಬ್ಬರ ವಿಚಾರ ಕುಟುಂಬಸ್ಥರಿಗೆ ಗೊತ್ತಾಗಿ ಜಗಳವಾದ ಮೇಲೆ ಆಕೆಯ ತಂಟೆಗೆ ಹೋಗಿಲ್ಲ. ಈ ಕೊಲೆಗು, ನನಗು ಯಾವುದೇ ಸಂಬಂಧ ಇಲ್ಲ” ಎಂದು ಹೇಳಿದ್ದಾನೆ.
    ಬಳಿಕ, ಪೊಲೀಸರು ಅಶ್ರಫ್ ಮೊಬೈಲ್​ ಪರಿಶೀಲಿಸಿದಾಗ, ಇಬ್ಬರ ಮಧ್ಯೆ ಕಳೆದ ಆರು ತಿಂಗಳಿಂದ ಸಂಪರ್ಕ ಇಲ್ಲದಿರುವುದು ತಿಳಿದಿದೆ. ಸದ್ಯ ಪೊಲೀಸರು ಅಶ್ರಫ್​ನನ್ನು ಬಿಟ್ಟು ಕಳಿಸಿದ್ದಾರೆ.
    ಮಹಾಲಕ್ಷ್ಮೀಯ ಮೊಬೈಲ್ ಪತ್ತೆ:
    ಮಹಾಲಕ್ಷ್ಮೀ ಮನೆಯಲ್ಲೇ ಆಕೆಯ ಮೊಬೈಲ್​ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಮೊಬೈಲ್​ ವಶಕ್ಕೆ ಪಡೆದ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಕಲೆ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಡಿಐಜಿಪಿ ಮಗನ ಮೇಲೆ ಹಲ್ಲೆ.
    Next Article ರಾಜ್ಯಪಾಲರು ಯಾಕೆ ಹೀಗೆ ?
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • king_shEi on ಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    • Gcsnqf on ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ- ಭಾರಿ ಪ್ರಮಾಣದಲ್ಲಿ ವಿದ್ಯುತ್ ತರ ಕಡಿತ | Karnataka
    • LeonardReawn on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.