Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಭಿನ್ನಮತ.
    Trending

    ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಭಿನ್ನಮತ.

    vartha chakraBy vartha chakraAugust 13, 202429 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.12:ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ ಬಿಜೆಪಿಯಲ್ಲಿ ಇದೀಗ ಭಿನ್ನಮತ ಧಗದಗಿತೊಡಗಿದೆ. ಪಕ್ಷದ ಅಧ್ಯಕ್ಷ ವಿಜಯೇಂದ್ರ ಪದಚ್ಯುತಿಗೆ ಆಗ್ರಹ ತೀವ್ರಗೊಂಡಿದೆ ಇದರ ಬೆನ್ನಲ್ಲೇ ಹೊಂದಾಣಿಕೆ ಮೂಲಕ ಗೆಲುವು ಸಾಧಿಸಿರುವ ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಆಗ್ರಹ ಕೂಡ ಕೇಳಿಬಂದಿದೆ.
    ಬಿಜೆಪಿಯ ಅತೃಪ್ತ ಹಿರಿಯ ನಾಯಕರು ಬೆಳಗಾವಿಯಲ್ಲಿ ಸಭೆ ಸೇರಿ ಮತ್ತೊಂದು ಪಾದಯಾತ್ರೆಗೆ ತೀರ್ಮಾನಿಸಿರುವ ಬೆನ್ನೆಲ್ಲೇ ಹಲವು ನಾಯಕರು ಇವರನ್ನು ಬೆಂಬಲಿಸಿದ್ದಾರೆ ಇದೆ ವೇಳೆ ಇಂತಹ ಪಾದಯಾತ್ರೆ ನಡೆದಲ್ಲಿ ಬಿಜೆಪಿ ತಾಲೂಕು ಹಂತದಲ್ಲೇ ವಿಭಜನೆಯಾಗಲಿದೆ ಎಂದು ಎಚ್ಚರಿಸಿರುವ ಹಿರಿಯ ನಾಯಕ ಈಶ್ವರಪ್ಪ ವರಿಷ್ಠರು ತಕ್ಷಣವೇ ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದ್ದಾರೆ
    ಇದರ ನಡುವೆ ದಾವಣಗೆರೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
    ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮರುಚುನಾವಣೆ ಎದುರಿಸಬೇಕು. ಚುನಾವಣೆಯ ಗೆಲುವು ಕಾಂಗ್ರೆಸ್‌ ಭಿಕ್ಷೆಯಲ್ಲ ಬಿಜೆಪಿಯ ಶಕ್ತಿ ಎಂಬುದನ್ನು ನಿರೂಪಿಸಬೇಕು ಎಂದು ಆಗ್ರಹಿಸಿದರು.
    ಬಿ.ವೈ.ವಿಜಯೇಂದ್ರ ಶಾಸಕ ಸ್ಥಾನ ಕಾಂಗ್ರೆಸ್‌ ಭಿಕ್ಷೆ’ ಎಂಬ ಗಂಭೀರ ಆರೋಪವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಡಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ನಡುವಿನ ಹೊಂದಾಣಿಕೆ ರಾಜಕಾರಣದ ಆರೋಪಕ್ಕೆ ಇದು ಪುಷ್ಟಿ ನೀಡಿದೆ. ಇಂತಹ ಬ್ಲ್ಯಾಕ್‌ಮೇಲ್‌ಗೆ ಬಿ.ಎಸ್‌.ಯಡಿಯೂರಪ್ಪ ಕುಟುಂಬ ಸರಿಯಾಗಿ ಪ್ರತಿಕ್ರಿಯಿಸಬೇಕು. ಕಾಂಗ್ರೆಸ್‌ ಭಿಕ್ಷೆಯಿಂದ ಶಾಸಕರಾಗುವ ಅನಿವಾರ್ಯತೆ ಬಿಜೆಪಿ ನಾಯಕರಿಗೆ ಇಲ್ಲ ಎಂಬುದನ್ನು ತೋರಿಸಬೇಕು’ ಎಂದು ಹೇಳಿದರು.
    ರಾಜ್ಯದಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣ ಅಸಹ್ಯ ಹುಟ್ಟಿಸಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರು ಭ್ರಷ್ಟಾಚಾರ ಮುಚ್ಚಿಕೊಳ್ಳಲು ಪರಸ್ಪರ ಪ್ರಯತ್ನಿಸುತ್ತಿದ್ದಾರೆ. ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಮುಖಂಡರಿಗೆ ತಕ್ಕ ಪಾಠ ಕಲಿಸಲಿದ್ದೇವೆ’ ಎಂದರು.
    ‘ಬಿಜೆಪಿಯ ಸಮಾನ ಮನಸ್ಕರು ಬೆಳಗಾವಿಯಲ್ಲಿ ಸಭೆ ನಡೆಸಿದ್ದೇವೆ. ಪಕ್ಷದ ಬಲವರ್ಧನೆಯ ದೃಷ್ಟಿಯಿಂದ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ಶೀಘ್ರದಲ್ಲೇ ಆಯೋಜಿಸಲಾಗುತ್ತಿದೆ. ಪಕ್ಷದ ಸಾಕಷ್ಟು ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ವೈ.ವಿಜಯೇಂದ್ರ ಮಾಡಿರುವ ತಪ್ಪುಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುತ್ತದೆ. ಪಕ್ಷಕ್ಕೆ ಪರ್ಯಾಯ ನಾಯಕರ ಅಗತ್ಯವಿದ್ದು, ಹೈಕಮಾಂಡ್‌ ಒಪ್ಪಿಗೆ ಪಡೆದು ಮುಂದುವರಿಯುತ್ತೇವೆ’ ಎಂದು ಪ್ರತಿಕ್ರಿಯಿಸಿದರು.
    ಬಿಜೆಪಿ ಇಬ್ಭಾಗ:
    ರಾಜ್ಯ ಬಿಜೆಪಿಯಲ್ಲಿ ಪರ್ಯಾಯ ನಾಯಕತ್ವಕ್ಕಾಗಿ ಆಗ್ರಹಿಸಿ ಹಲವು ಹಿರಿಯ ನಾಯಕರು ಮಾಡುತ್ತಿರುವ ಹೋರಾಟವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು ತಪ್ಪಿದಲ್ಲಿ ಪಕ್ಷಕ್ಕೆ ದೊಡ್ಡ ಹಾನಿಯಾಗಲಿದೆ ಎಂದು ಹಿರಿಯ ನಾಯಕ ಈಶ್ವರಪ್ಪ ಎಚ್ಚರಿಸಿದ್ದಾರೆ.
    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ನಾಯಕರು ಮಾಡಿದ ಸಭೆಯನ್ನು ಹೈಕಮಾಂಡ್ ನಿರ್ಲಕ್ಷಿಸಬಾರದು ಈ ನಾಯಕರು ಘೋಷಿಸಿರುವಂತೆ ಪಾದಯಾತ್ರೆ ಮಾಡಿದರೆ ಬಿಜೆಪಿ ತಾಲೂಕು ಹಂತದಲ್ಲೇ ವಿಭಜನೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಎಂಬ ಒಂದೇ ಕಾರಣಕ್ಕೆ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಸರಿಯಲ್ಲ ಪಕ್ಷವನ್ನು ಒಂದು ಕುಟುಂಬದ ಹಿಡಿತಕ್ಕೆ ನೀಡಿರುವ ಕ್ರಮ ದುರದೃಷ್ಟಕರ ಎಂದು ಬಣ್ಣಿಸಿದರು.
    ಬಿಜೆಪಿ ಅಧ್ಯಕ್ಷರಾದ ನಂತರ ವಿಜಯೇಂದ್ರ ಪಕ್ಷ ಸಂಘಟನೆಗೆ ಯಾವುದೇ ಒತ್ತು ನೀಡಲಿಲ್ಲ ಪ್ರತಿ ಹಂತದಲ್ಲಿ ಹೊಂದಾಣಿಕೆ ಮಾಡಿಕೊಂಡರು ಇದರ ಪರಿಣಾಮ ಲೋಕಸಭೆ ಚುನಾವಣೆಯಲ್ಲಿ ಪಕ್ಷ ನಿರೀಕ್ಷಿತ ಸ್ಥಾನ ಗಳಿಸಲಿಲ್ಲ ಪ್ರಧಾನಿ ಮೋದಿ ನಮಗೆಲ್ಲ ದೊಡ್ಡ ನಾಯಕ ಆದರೆ ವಿಧಾನಸಭೆ ಸೇರಿದಂತೆ ಸ್ಥಳೀಯ ಚುನಾವಣೆಗಳಲ್ಲಿ ಅವರ ವರ್ಚಸ್ಸು ನಡೆಯುವುದಿಲ್ಲ ಹೀಗಾಗಿ ಅವರ ಮುಖ ತೋರಿಸಿ ಚುನಾವಣೆ ಗೆದ್ದು ಬರುತ್ತೇವೆ ಎಂಬ ನಿಲುವಿನಿಂದ ಹೈಕಮಾಂಡ್ ಹಿಂದೆ ಸರಿಯಬೇಕು ಇಲ್ಲವಾದರೆ ಕರ್ನಾಟಕದಲ್ಲಿ ಪಕ್ಷ ನಿರ್ನಾಮವಾಗಲಿದೆ ಎಂದು ಎಚ್ಚರಿಸಿದರು.

    Verbattle
    Verbattle
    Verbattle
    Bangalore BJP Government Karnataka News Politics Trending Varthachakra ಈಶ್ವರಪ್ಪ ಕಾಂಗ್ರೆಸ್ Election ಯಡಿಯೂರಪ್ಪ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಂಬಾನಿ ಮಾಡಿದ ಕೆಲಸ ಏನು ಗೊತ್ತಾ..
    Next Article ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lljboj on Honey trap ಗ್ಯಾಂಗ್ ಬೆಲೆಗೆ.
    • Lljboj on Honey trap ಗ್ಯಾಂಗ್ ಬೆಲೆಗೆ.
    • Tracymix on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.