Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?
    ರಾಜಕೀಯ

    ಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?

    vartha chakraBy vartha chakraFebruary 10, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.10-
    ಕರ್ನಾಟಕ ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ
    ಬಣ ಬಡಿದಾಟ, ಆಂತರಿಕ ಕಚ್ಚಾಟ, ರಾಜ್ಯಾಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಗಮನ ಹರಿಸಲು ಹೈಕಮಾಂಡ್ ಮುಂದಾಗಿದೆ.
    ಕಳೆದ ಕೆಲವಾರು ದಿನಗಳಿಂದ ನಡೆಯುತ್ತಿರುವ ಆಂತರಿಕ ಕಲಹಕ್ಕೆ ಬ್ರೇಕ್ ಹಾಕಲು ತೀರ್ಮಾನಿಸಿರುವ ಹೈಕಮಾಂಡ್ ಇದರ ಮೊದಲ ಹಂತವಾಗಿ ಭಿನ್ನಮತಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ಜಾರಿಗೊಳಿಸಲಾಗಿದೆ. ಇದರ ಬಳಿಕ ಎಲ್ಲ ನಾಯಕರನ್ನು ಭೇಟಿ ಮಾಡಿ ಬಿಕ್ಕಟ್ಟು ಬಗೆಹರಿಸಲು ಪ್ರಯತ್ನ ನಡೆಸಲಿದೆ ಎಂದು ಹೇಳಲಾಗಿದೆ.
    ಕೇಂದ್ರ ಮಂತ್ರಿ ವಿ ಸೋಮಣ್ಣ ಅವರ ನಿವಾಸದಲ್ಲಿನ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮ್ಮ ಬಣದ ನಾಯಕರೊಂದಿಗೆ ಆಗಮಿಸಿರುವ ಯತ್ನಾಳ್ ಅವರಿಗೆ ಪಕ್ಷದ ರಾಷ್ಟ್ರೀಯ ಪ್ರಸ್ತುತ ಸಮಿತಿ ಶೋಕಾಸ್ ಜಾರಿಗೊಳಿಸಿದ್ದು 72 ಗಂಟೆಯಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದೆ.
    ಕಳೆದ ಎರಡು ತಿಂಗಳ ಹಿಂದೆ ಇದೇ ರೀತಿಯ ನೋಟೀಸ್ ಅನ್ನು ಕೇಂದ್ರ ಶಿಸ್ತು ಸಮಿತಿ ಜಾರಿಗೊಳಿಸಿದ್ದು ಅದಕ್ಕೆ ಯತ್ನಾಳ್ ಅವರು ಸುದೀರ್ಘ ಉತ್ತರ ನೀಡಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು.
    ಇದಾದ ನಂತರ ಯತ್ನಾಳ್ ಬಣ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಬಣದ ನಡುವೆ ಸಮರ ತೀವ್ರಗೊಂಡಿದ್ದು, ಒಬ್ಬರು ಇನ್ನೊಬ್ಬರ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದಿದ್ದರು ಆದರೆ ಹೈಕಮಾಂಡ್ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
    ಇದೀಗ ದೆಹಲಿ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಕ್ಕಟ್ಟು ಶಮನಕ್ಕೆ ಮುಂದಾಗಿದ್ದು ಉಭಯ ಬಣಗಳ ನಾಯಕರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಆದರೆ ಇದೇ ವೇಳೆ ಮಾಜಿ ಸಚಿವ ಶ್ರೀರಾಮುಲು ಅವರನ್ನು ದೆಹಲಿಗೆ ಬರುವುದು ಬೇಡ ಎಂದು ಹೇಳಿ ವಾಪಸ್ ಕಳುಹಿಸಿದೆ.
    ಹೈಕಮಾಂಡ್ ಕರೆಯ ಹಿನ್ನೆಲೆಯಲ್ಲಿ ದಾವಣಗೆರೆಯ ರಾಜನಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವಿಜಯೇಂದ್ರ ತಮ್ಮ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ದೆಹಲಿಗೆ ಆಗಮಿಸಿದ್ದಾರೆ. ಮತ್ತೊಂದೆಡೆ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬಣ ಕೂಡ ದೆಹಲಿಗೆ ಆಗಮಿಸಿದ್ದು ಪ್ರತ್ಯೇಕವಾಗಿ ಸಭೆ ನಡೆಸುವ ಮೂಲಕ ಗಮನ ಸೆಳೆದರು.
    ಇದೆ ವೇಳೆ ಪೂರ್ವ ನಿಯೋಜಿತದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರ ನಿವಾಸದ ಪೂಜೆಗೆ ಯತ್ನಾಳ್ ಹಾಗೂ ಅವರ ತಂಡ ಭಾಗಿಯಾದರೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೊರಗುಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
    ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿ ತಮಗೆ ನೀಡಿರುವ ಶೋಕಾಸ್ ಗೆ ಯಾವ ಉತ್ತರ ನೀಡಲಿದ್ದಾರೆ ಎಂಬುದನ್ನು ಗಮನಿಸಲಿರುವ ಹೈಕಮಾಂಡ್ ಈ ಎರಡೂ ಬಣದ ನಾಯಕರನ್ನು ಕೂರಿಸಿ ಬಣ ರಾಜಕೀಯಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ.
    ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ನಾಯಕರು ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

    Verbattle
    Verbattle
    Verbattle
    ಕರ್ನಾಟಕ Election ಬಿಜೆಪಿ Bengaluru ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    Next Article ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಮಂತ್ರಿಗಳು
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Mozctd on February 11, 2026 8:52 pm

      mgm gambling app online casino betmgm play betmgm Connecticut

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Grspbi on ದಾಸ ವಿದೇಶ ಯಾತ್ರೆ ಹೋಗುವಂತಿಲ್ಲ.
    • LinwoodGah on Crypto ವಂಚಕ Arrest.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.