Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಡಕಟ್ಟು ಜನರಿಂದ ಮತದಾನ: ಚುನಾವಣಾ ಆಯೋಗದ ಜಾಗೃತಿಯ ಫಲ
    ಸುದ್ದಿ

    ಬುಡಕಟ್ಟು ಜನರಿಂದ ಮತದಾನ: ಚುನಾವಣಾ ಆಯೋಗದ ಜಾಗೃತಿಯ ಫಲ

    vartha chakraBy vartha chakraMay 2, 2024498 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    01 MAY 2024
    ನಿರ್ದಿಷ್ಟ ದುರ್ಬಲ ಬುಡಕಟ್ಟು ಸಮೂಹ (ಪಿವಿಟಿಜಿ) ಸಮುದಾಯಗಳು ಮತ್ತು ಇತರ ಬುಡಕಟ್ಟು ಸಮೂಹದ ಜನರು ಚುನಾವಣಾ ಪ್ರಕ್ರಿಯೆ ಅರಿತು ಮತ  ಚಲಾಯಿಸುವಂತೆ ಮಾಡಲು ಕಳೆದ ಎರಡು ವರ್ಷಗಳಿಂದ ಭಾರತೀಯ ಚುನಾವಣಾ ಆಯೋಗ ಮಾಡಿದ ಪ್ರಯತ್ನಗಳು ಈಗ ಫಲ ಕೊಟ್ಟಿವೆ. ವಿವಿಧ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ಮೊದಲ ಮತ್ತು ಎರಡನೇ ಹಂತದ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ವಿವಿಧ ಮತಗಟ್ಟೆಗಳಲ್ಲಿ ಬುಡಕಟ್ಟು ಸಮೂಹಗಳು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು ಕಂಡುಬಂದಿದೆ. ಗ್ರೇಟರ್‌ ನಿಕೋಬಾರ್‌ ನ ಶೋಂಪೇನ್‌ ಬುಡಕಟ್ಟು ಜನರು ಇದೇ ಮೊದಲ ಬಾರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಿರುವುದು, ಐತಿಹಾಸಿಕ ನಡೆಯಾಗಿದೆ.

    ಚುನಾವಣಾ ಪ್ರಕ್ರಿಯೆಯಲ್ಲಿ ಪಿವಿಟಿಜಿಗಳ ಒಳಗೊಳ್ಳುವಿಕೆ ಬಗ್ಗೆ ಅರಿತ ಚುನಾವಣಾ ಆಯೋಗ, ಈ ಸಮೂಹದ ಜನರು ಮತದಾರರಾಗಿ ಸೇರ್ಪಡೆಯಾಗಲು ಮತ್ತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತಾಗಲು, ಕಳೆದ ಎರಡು ವರ್ಷಗಳಿಂದ ವಿಶೇಷ ಪ್ರಯತ್ನಗಳನ್ನು ಮಾಡಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯ ವಿಶೇಷ ಪ್ರಕ್ರಿಯೆಯಲ್ಲಿ, ನಿರ್ದಿಷ್ಟ ದುರ್ಬಲ ಬುಡಕಟ್ಟು ಸಮೂಹಗಳು ವಾಸಿಸುವ ರಾಜ್ಯಗಳಲ್ಲಿ ವಿಶೇಷ ಔಟ್‌ ರೀಚ್‌ ಶಿಬಿರಗಳನ್ನು ನಡೆಸುವ ಮೂಲಕ ಅಲ್ಲಿನ ಬುಡಕಟ್ಟು ವಾಸಿಗಳ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲಾಯಿತು. ವಿಶೇಷ ಸರಾಂಶ ಪರಿಷ್ಕರಣೆ 2023ರ ಮತದಾರರ ಪಟ್ಟಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆ ಮಾಡಿದ ಸಂದರ್ಭದಲ್ಲಿ, ನವೆಂಬರ್‌ 2022 ರಲ್ಲಿ ಪುಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಶ್ರೀರಾಜೀವ್‌ ಕುಮಾರ್‌ ಅವರು, ಪಿವಿಟಿಜಿ ಸಮುದಾಯದರವನ್ನು ದೇಶದ ಹೆಮ್ಮೆಯ ಮತದಾರರನ್ನಾಗಿ ಸಬಲೀಕರಣಗೊಳಿಸಲು ಆಯೋಗದ ಔಟ್‌ ರೀಚ್ (ದೂರದೂರುಗಳಲ್ಲಿ ಬಾಹ್ಯ ಕಾರ್ಯಕ್ರಮ) ಮತ್ತು ಮಧ್ಯಸ್ಥಿಕೆ ಆದ್ಯತೆ ಬಗ್ಗೆ ಒತ್ತಿ ಹೇಳಿದ್ದರು.

    ಕರ್ನಾಟಕದ ಪಶ್ಚಿಮ ಮತ್ತು ದಕ್ಷಿಣ ಭಾಗಗಳು ಜೇನು ಕುರುಬ ಮತ್ತು ಕೊರಗ ಎಂಬ ನಿರ್ದಿಷ್ಟ ದುರ್ಬಲ ಬುಡಕಟ್ಟು ಸಮೂಹಗಳ ಆವಾಸಸ್ಥಾನವಾಗಿದೆ. ಸಾರ್ವತ್ರಿಕ ಚುನಾವಣೆಗೂ ಮುನ್ನ,  ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಕಚೇರಿಯು ಸಾಮಾಜಿಕ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅರ್ಹ ಪಿವಿಟಿಜಿಗಳ ನೋಂದಣಿಯನ್ನು ಖಾತರಿಪಡಿಸಿದೆ. ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ಬುಡಕಟ್ಟು ಕಲ್ಯಾಣ ಸಮಿತಿಗಳನ್ನು ರಚಿಸಲಾಗಿತ್ತು. ಇವು ಎಲ್ಲಾ ಪಿವಿಟಿಜಿಗಳಲ್ಲಿ ಮತದಾನ ಜಾಗೃತಿ ಮೂಡಿಸಲು ಮತ್ತು ಅರ್ಹ ಮತದಾರರ ನೋಂದಣಿಗೆ ನಿಯಮಿತವಾಗಿ ಸಭೆ ಸೇರಿ ಕಾರ್ಯೋನ್ಮುಖವಾಗಿತ್ತು. ಚುನಾವಣಾ ಅಧಿಕಾರಿಗಳು ಈ ಪ್ರದೇಶಗಳಿಗೆ ಭೇಟಿ ನೀಡಿ, ನೋಂದಣಿ ಪ್ರಮಾಣ ಹೆಚ್ಚು ಮಾಡಿದ್ದಾರೆ ಮತ್ತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಹೆಚ್ಚಿಸುವಂತೆ ಮಾಡಿದ್ದಾರೆ. ಒಟ್ಟು ಜನಸಂಖ್ಯೆಯ ಪೈಕಿ 55,815 ಪಿವಿಟಿಜಿ ಗಳಿದ್ದು, ಈ ಪೈಕಿ 18 ವರ್ಷ ಮೇಲ್ಪಟ್ಟ 39,498 ಜನರಿದ್ದು, ಎಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

    ಮತದಾನದ ದಿನ ಮತದಾರರನ್ನು ಸೆಳೆಯುವ ಪ್ರಯತ್ನವಾಗಿ ವಿಶಿಷ್ಟ ಬುಡಕಟ್ಟು ಮಾದರಿಯಲ್ಲಿ ಅಲಂಕೃತಗೊಂಡ 40 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.

    Verbattle
    Verbattle
    Verbattle
    m Election
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ – ಬಿ.ವೈ.ವಿಜಯೇಂದ್ರ
    Next Article 2025ನೇ ಸಾಲಿನ ʻಪದ್ಮ ಪ್ರಶಸ್ತಿʼಗೆ ನಾಮನಿರ್ದೇಶನ ಆರಂಭ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Puftlz on ವಾಲ್ಮೀಕಿ ನಿಗಮ ಹಗರಣ:ED ತನಿಖೆ.
    • Yyfjeq on ಕರ್ನಾಟಕದಲ್ಲೂ ಕಾಟನ್ ಕ್ಯಾಂಡಿ BAN | Cotton Candy
    • Kyvluz on ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಅಧಿಕಾರ | Congress
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.