Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.
    ಸುದ್ದಿ

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    vartha chakraBy vartha chakraMay 22, 20252 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಮೇ22:
    ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಕರ್ನಾಟಕಕ್ಕೆ 4500‌ ಇಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲಾಗಿದೆ.
    ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿ ಇತ್ತೀಚೆಗೆ ಕೇಂದ್ರ ಕೈಗಾರಿಕೆ ಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.ಇದರ ಪರಿಣಾಮವಾಗಿ ರಾಜ್ಯಕ್ಕೆ ಈ ಕೊಡುಗೆ ಲಭಿಸಿದೆ.
    ಯೋಜನೆಯ ಮೊದಲ ಹಂತದಲ್ಲಿ ಬೆಂಗಳೂರು ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.
    ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
    ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದರು.
    ಈ ವೇಳೆ ಎಲೆಕ್ಟ್ರಿಕ್ ಬಸ್ ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು; ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ಪ್ರತಿಪಾದಿಸಿದರು.
    ಬಸ್ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್ ಗಳ ವಿಲೇವಾರಿ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.
    ಕರ್ನಾಟಕದ ಪರವಾಗಿ ಸಭೆಯಲ್ಲಿ ಹಾಜರಿದ್ದ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಅವರು, BMTC ಗಾಗಿ 7,000 ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು. ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿದ್ದ ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡ ಇಷ್ಟೇ ಸಂಖ್ಯೆಯ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು.
    ಈ ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್ ಗಳನ್ನು ಒದಗಿಸುವ ಭರವಸೆ ನೀಡಿದ ಕುಮಾರಸ್ವಾಮಿದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಹೀಗಾಗಿ ಇಲ್ಲಿಗೆ ಅತ್ಯಧಿಕ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆಯನ್ನು ಅವರು ನೀಡಿದರು.
    ಉಳಿದಂತೆ ದೆಹಲಿ ಸಾರಿಗೆ ಸಂಸ್ಥೆ 2800 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನಸಂಖ್ಯೆ ಅಧಿಕವಾಗಿದೆ. ಜತೆಗೆ ಇನ್ನೂ ಕೆಲ ಅಂಶಗಳನ್ನು ಪರಿಗಣಿಸಿ ಬೇಡಿಕೆ ಇಟ್ಟಿರುವಷ್ಟೂ ಸಂಖ್ಯೆಯ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಉಳಿದಂತೆ ಸೂರತ್ ನಗರ ಸಾರಿಗೆ ಸಂಸ್ಥೆ 600 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ. ಅಹಮದಾಬಾದ್ ನಗರಕ್ಕೆ 1000 ಬಸ್ ಗಳನ್ನು ಕೇಳಲಾಗಿದ್ದು, ಅಷ್ಟೂ ಬಸ್ ಗಳನ್ನೂ ಹಂಚಿಕೆ ಮಾಡುವುದಕ್ಕೆ ಸಚಿವರು ಒಪ್ಪಿಗೆ ನೀಡಿದರು.
    ತೆಲಂಗಾಣದ ರಾಜಧಾನಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆ 2800 ವಿದ್ಯುತ್ ಚಾಲಿತ ಬಸ್ ಗಳಿಗೆ ಬೇಡಿಕೆ ಇಟ್ಟಿತ್ತು, ಆ ಪೈಕಿ 2000 ಬಸ್ ಗಳನ್ನು ಹಂಚಿಕೆ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದರು.
    ಒಟ್ಟಾರೆಯಾಗಿ ಐದೂ ನಗರಗಳಿಂದ 14,200 ಬಸ್ ಗಳಿಗೆ ಬೇಡಿಕೆ ಬಂದಿತ್ತು. ಆ ಪೈಕಿ 10,900 ಬಸ್ ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದ ಕೇಂದ್ರ ಸಚಿವರು; ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವ ಮುನ್ನ ಐದೂ ನಗರಗಳ ಸಾರಿಗೆ ಸಂಸ್ಥೆಗಳು ಡಿಪೋಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯವಾದ ಮೂಲಸೌಕರ್ಯವನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಡಿಪೋಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಅಗತ್ಯವಾದರೆ ಹೊಸ ಡಿಪೋಗಳನ್ನು ಸ್ಥಾಪಿಸುವ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    Verbattle
    Verbattle
    Verbattle
    BMT bmtc m ಕರ್ನಾಟಕ ತೆಲಂಗಾಣ ನರೇಂದ್ರ ಮೋದಿ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    Next Article ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    2 Comments

    1. Kcdedu on March 17, 2026 6:38 am

      Ervaar next-level gaming bij Betano Casino https://betanogame.org/nl/. Ontgrendel direct €500 bonus plus 200 gratis spins. Van klassieke favorieten tot gloednieuwe releases, de keuze is aan jou. Begin met winnen.

      Reply
    2. Xkjnvg on March 25, 2026 5:17 am

      Your winning story starts the second you hit “Play” – https://gpdifluca.com/starburst-slot-review-2026/ , Pure adrenaline, real money, zero limits — welcome .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem on ನಾಲ್ವರಿಗೆ ಒಲಿದ ಅದೃಷ್ಟ !
    • Justingropy on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.