Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿಗೆ ಪೊಲೀಸ್ ಸರ್ಪಗಾವಲು.
    Trending

    ಬೆಳಗಾವಿಗೆ ಪೊಲೀಸ್ ಸರ್ಪಗಾವಲು.

    vartha chakraBy vartha chakraDecember 7, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.7:
    ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ 19 ವರಗೆ 9   ದಿ‌ನಗಳ ಕಾಲ ನಡೆಯಲಿರುವ ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಕುಂದಾ ನಗರಿಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
    ಅಧಿವೇಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿರುವ ಗೃಹ ಇಲಾಖೆ ವಿಧಾನಸೌಧ ಹಾಗೂ ಶಾಸಕ, ಸಚಿವರು, ಅಧಿಕಾರಿಗಳು ವಾಸ್ತವ್ಯ ಹೂಡುವ ಪ್ರದೇಶಗಳಿಗೆ 6 ಸಾವಿರಕ್ಕೂ ಅಧಿಕ  ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
    ಭದ್ರತಾ ಕಾರ್ಯಕ್ಕೆ 6 ಮಂದಿ ಎಸ್ಪಿಗಳು,10 ಹೆಚ್ಚುವರಿ ಎಸ್ಪಿಗಳು, 38 ಡಿವೈಎಸ್ಪಿಗಳು, 100 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್ ಗಳು, 235 ಮಂದಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಳನ್ನು ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ .ಭದ್ರತೆಯ ನಿಗಾ ವಹಿಸಲು 30 ಅತ್ಯಾಧುನಿಕ ಡ್ರೋನ್ ಕ್ಯಾಮರಾಗಳನ್ನು ಬಳಸಲಾಗುತ್ತಿದೆ.
    80ಷಕ್ಕೂ ಪ್ರದೇಶಗಳಲ್ಲಿ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಅದೇ ರೀತಿ ನಗರದ ಬಂದೋಬಸ್ತ್ ಸಲುವಾಗಿ ರಸ್ತೆ ಬಂದೋಬಸ್ತ್, ಟ್ರಾಫಿಕ್ ಬಂದೋಬಸ್ತ್ ಸೇರಿ 20 ವಲಯಗಳನ್ನು ರಚಿಸಲಾಗಿದೆ
    ಪ್ರತಿ ವಲಯಕ್ಕೂ ಓರ್ವ ಮೇಲ್ವಿಚಾರಕ ವೀಕ್ಷಕರನ್ನು ನೇಮಿಸಲಾಗಿದೆ. ಮುಖ್ಯ ವಲಯಗಳಲ್ಲಿ ಓರ್ವ ಎಸ್ಪಿ ರ್ಯಾಂಕ್ ಅಧಿಕಾರಿ ಇರುತ್ತಾರೆ. ಸುವರ್ಣ ವಿಧಾನಸೌಧ ವಲಯದಲ್ಲಿ ಒಬ್ಬರು ಎಸ್ಪಿ, ಡಿಎಸ್ಪಿ‌ ಸೇರಿ ಮತ್ತಿತರ ಅಧಿಕಾರಿಗಳು ಇರಲಿದ್ದಾರೆ ಎಂದು
    ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ತಿಳಿಸಿದ್ದಾರೆ.
    ಇದರ ಜೊತೆಗೆ 35 ಕೆಎಸ್ ಆರ್ ಪಿ ತುಕಡಿಗಳು, 10 ಡಿಆರ್ ಸಿಆರ್, 8 ಕ್ಯುಆರ್ ಟೀಂ, 16 ಎಸಿ ಟೀಂ ಮಂಜೂರು ಆಗಿವೆ. ಬೆಂಗಳೂರಿನಿಂದ 1 ಗರುಡ ವಿಶೇಷ ಕಮಾಂಡೋ ಪಡೆ ಬರುತ್ತಿದೆ.ಸಿಬ್ಬಂದಿಗಾಗಿ 300 ಬಾಡಿ ವೋರ್ನ್ ಕ್ಯಾಮರಾ ತರಿಸಲಾಗುತ್ತಿದೆ. ಇದು ಪ್ರಪಂಚದಲ್ಲಿ ಬಹಳ ಉಪಯುಕ್ತವಾಗಿದೆ. ಏನೆಲ್ಲಾ ನಡೆಯುತ್ತಿದೆ ಎಂಬುದು ತನ್ನಿಂದ ತಾನೇ ವಿಡಿಯೋ ರೆಕಾರ್ಡ್ ಆಗುತ್ತದೆ ಎಂದು ಹೇಳಿದರು‌.
    ಚಳಿಗಾಲ ಅಧಿವೇಶನದಲ್ಲಿ ಈವರೆಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲು 55 ಅರ್ಜಿಗಳು, 5 ಮನವಿ ಸಲ್ಲಿಸುವ ಬಗ್ಗೆ ಅರ್ಜಿಗಳು ಬಂದಿವೆ. ಯಾವ‌ ಪ್ರತಿಭಟನೆ ಪ್ರಮುಖ ಅಂತಾ ಹೇಳಲು ಆಗುವುದಿಲ್ಲ. ಎಲ್ಲವೂ ಪ್ರಮುಖ ಪ್ರತಿಭಟನೆಗಳೇ ಅಂತಾ ನಾವು ಪರಿಗಣಿಸುತ್ತೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯಬೇಕು ಎಂದು‌ ಯಡಾ ಮಾರ್ಟಿನ್ ಅಭಿಪ್ರಾಯ ಪಟ್ಟರು.
    ಪ್ರತಿಭಟನೆಗೆ ಅವಕಾಶ:
    ಪಂಚಮಸಾಲಿ ಸಮುದಾಯದ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು, ಈಗಾಗಲೇ ಸ್ವಾಮೀಜಿ ಅವರನ್ನು ಸಂಪರ್ಕಿಸಲಾಗಿದೆ. ಟ್ರಾಕ್ಟರ್ ರ‍್ಯಾಲಿ ಮೂಲಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕದಂತೆ ಮನವಿ ಮಾಡಿಕೊಂಡಿದ್ದೇವೆ. ನಮ್ಮ‌ ಮನವಿಗೆ ಸ್ವಾಮೀಜಿ ಸ್ಪಂದಿಸುವ ವಿಶ್ವಾಸವಿದೆ. ಆದರೂ ನಾವು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ನಿಗದಿತ ಸ್ಥಳದಲ್ಲಿ ಪ್ರತಿಭಟಿಸಿದರೆ ಸಮಸ್ಯೆ ಇಲ್ಲ. ಆದರೆ, ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರೆ ನಾವು ಅವರನ್ನು ತಡೆಯುತ್ತೇವೆ ಎಂದರು.
    ಈ ಬಾರಿಯ ಅಧಿವೇಶನದಲ್ಲಿ ಯಾವುದೇ ರೀತಿ ಅಹಿತಕರ ಘಟನೆ ಸಂಭವಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಸಾರ್ವಜನಿಕರು ಸಹಕಾರ ಕೊಟ್ಟರೆ ಅಧಿವೇಶನ ಸೂಪರ್ ಸಕ್ಸಸ್ ಆಗಲಿದೆ ಎಂದು ಪೊಲೀಸ್ ಆಯುಕ್ತರು ವಿಶ್ವಾಸ ವ್ಯಕ್ತಪಡಿಸಿದರು.

    Verbattle
    Verbattle
    Verbattle
    ಕಾನೂನು Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಬಗೆಹರಿಯಲಿದೆಯಾ ಬಿಜೆಪಿ ಬಿಕ್ಕಟ್ಟು.
    Next Article ಶಾಲೆ ಕಬಳಿಸಿದ್ರಾ ಹೊರಟ್ಟಿ.?
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • мягкие окна для беседки и террасы on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • 1win_mlSi on ಕೇಂದ್ರ ಬಜೆಟ್ ಗೆ ಡಿಸಿಎಂ ಏನಂದ್ರು ಗೊತ್ತಾ..
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.