Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆ, ಮನೆಗೆ ಪೊಲೀಸ್.
    ಸುದ್ದಿ

    ಮನೆ, ಮನೆಗೆ ಪೊಲೀಸ್.

    vartha chakraBy vartha chakraJune 27, 20256 Comments2 Mins Read
    Facebook Twitter WhatsApp Pinterest LinkedIn Tumblr Email
    {"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"square_fit":1},"is_sticker":false,"edited_since_last_sticker_save":true,"containsFTESticker":false}
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.27-ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸಿ ಜನರೊಂದಿಗೆ ನಿಕಟ ಸಂಪರ್ಕ ಹೊಂದಲು ಮನೆಮನೆಗೆ ಪೊಲೀಸ್ ಕಾರ್ಯಕ್ರಮವನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗಿದೆ.
    ಸಮುದಾಯ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡಿ ಅಪರಾಧ, ಸೈಬರ್ ಅಪರಾಧ,ಶಾಂತಿ ಸುವ್ಯವಸ್ಥೆ ಕಾಪಾಡುವುದು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧ ತಡೆಯುವ ದಿಸೆಯಲ್ಲಿ ಮನೆಮನೆಗೆ ಪೊಲೀಸ್ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
    ನಗರದ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯು ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್ ಉಪಕ್ರಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.
    ಪೊಲೀಸ್ ಸಾರ್ವಜನಿಕರಲ್ಲಿ ಕಾನೂನುಗಳ ಬಗ್ಗೆ ತಿಳುವಳಿಕೆ ಬೆಳೆಸುವುದು ಮತ್ತು ಪೌರಸಹಭಾಗಿತ್ವದ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಇಲಾಖೆಯು ಪ್ರಗತಿಪರ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆಯಿಂದ ಪೊಲೀಸ್ ಇಲಾಖೆಯು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಸೇವಾ ದಿಟ್ಟ ನೋಟದೊಂದಿಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುತ್ತಿದೆ.
    ಈ ನಿಟ್ಟಿನಲ್ಲಿ ಮನೆ ಮನೆಗೆ ಪೊಲೀಸ್ ಉಪಕ್ರಮವು ಸಮಾಜದಲ್ಲಿ ಅಪರಾಧ ತಡೆಗೆ ಸಹಕಾರಿ ಆಗುವುದಲ್ಲದೆ, ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸರ್ವರನ್ನೂ ಸಮಾನವಾಗಿ ಒಳಗೊಂಡು ಸಾರ್ವಜನಿಕರು ಈ ಕಾರ್ಯದಲ್ಲಿ ನೇರವಾಗಿ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸುತ್ತದೆ ಎಂದರು.
    ಸಾಮಾಜಿಕ ಪಿಡುಗುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ವ್ಯವಸ್ಥೆಯು ಒಂದು ಆಶಾಕಿರಣ. ಈ ಮೂಲಕ ಪೊಲೀಸರ ಬಗ್ಗೆ ಇರುವ ಭಯದ ಭಾವದ ಬದಲು ವಿಶ್ವಾಸದ ಚಿಹ್ನೆಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
    ಸ್ಥಳೀಯ ಮಟ್ಟದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರ ನಡುವೆ ನೇರ ಸಂವಹನವನ್ನು ಸ್ಥಾಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ಪ್ರತಿದಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಜನರೊಂದಿಗೆ ಬೆರೆತು, ಅವರ ಸಮಸ್ಯೆಗಳನ್ನು ಕೇಳಿ ತ್ವರಿತ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಾರೆ.
    ಮಾದಕವಸ್ತು ದುರ್ಬಳಕೆ ಇತ್ತೀಚಿನ ದಿನಗಳಲ್ಲಿ ಒಂದು ಜಾಗತಿಕ ಸಮಸ್ಯೆಯಾಗಿದ್ದು ಸಂಕೀರ್ಣ ಸವಾಲಾಗಿದೆ. ಇಂದು ಲಕ್ಷಾಂತರ ಜನರು ಇದಕ್ಕೆ ದಾಸರಾಗಿದ್ದಾರೆ. ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದ್ದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆಮನೆಗೆ ಭೇಟಿ ನೀಡಿದಾಗ ಇವುಗಳ ಬಗ್ಗೆ ಅರಿವು ಮೂಡಿಸುತ್ತಾರೆ ಎಂದು ಹೇಳಿದರು.
    ಮನೆಮನೆಗೆ ಪೊಲೀಸ್ ಉಪಕ್ರಮದ ಭಾಗವಾಗಿ ಶಾಲಾ-ಕಾಲೇಜುಗಳಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮಗಳು, ಮಹಿಳಾ ಭದ್ರತೆ ಕುರಿತ ಕಾರ್ಯಾಗಾರಗಳು ಮತ್ತು ಯುವಜನರಿಗೆ ಪೊಲೀಸ್ ಸೇವೆಗಳ ಬಗ್ಗೆ ಅರಿವು ಮೂಡಿಸುವ ಸಭೆಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಕಾನೂನು ಕಾಲೇಜು ತಂತ್ರಜ್ಞಾನ Bengaluru ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಾಮೀಣ ಪ್ರದೇಶದಲ್ಲೂ ಸ್ಮಾರ್ಟ್ ಮೀಟರ್ ಕಡ್ಡಾಯ.
    Next Article ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peter_Vonry on ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • https://pin-up-casino-ez6f2.top on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://forumtransportu.pl/forum/temat/17785/5 on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.