Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಲಗಿದ್ದಲ್ಲೇ ಸುಟ್ಟು ಕರಕಲಾದರು
    ಸುದ್ದಿ

    ಮಲಗಿದ್ದಲ್ಲೇ ಸುಟ್ಟು ಕರಕಲಾದರು

    vartha chakraBy vartha chakraAugust 16, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.16-
    ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಎದೆ ಝಲ್ಲೆನಿಸುವ ಹೃದಯ ವಿದ್ರಾವಕ ಘಟನೆ ನಡೆದಿದೆ
    ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳೊಂದಿಗೆ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನವಾಗಿದ್ದಾರೆ.
    ಕರ್ನಾಟಕ ಶಕ್ತಿ ಕೇಂದ್ರ ವಿಧಾನಸೌಧದ ಕೂಗಳತೆ ದೂರದಲ್ಲಿರುವ ಹಲಸೂರು ಗೇಟ್ ಪೋಲಿಸ್ ಠಾಣೆ ವ್ಯಾಪ್ತಿಯ ನಗರ್ತಪೇಟೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.
    ದುರ್ಘಟನೆಯಲ್ಲಿ ಸಜೀವ ದಹನವಾಗಿರುವವರನ್ನು ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದೆ. ಈ ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿದ್ದ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ.
    ನಗರ್ತಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ.
    ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಗೋಡೌನ್ ಇದೆ.ಈ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೊದಲ ಮಹಡಿಯಲ್ಲಿ ಮಲಗಿದ್ದ ಕಾರ್ಮಿಕ ಸುರೇಶ್ ಸಜೀವ ದಹನಗೊಂಡಿದ್ದಾರೆ.
    ಮೂರನೇ ಮಹಡಿಯಲ್ಲಿ ಮದನ್ ಕುಮಾರ್ ಪತ್ನಿ ಸಂಗೀತಾ, ಮಕ್ಕಳಾದ ವಿಹಾನ್ ಹಾಗೂ ನಿತೇಶ್ ವಾಸವಿದ್ದರು. ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ.
    ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ  ಸೀಮಂತ್‌ ಕುಮಾರ್‌ ಸಿಂಗ್‌ ಅವರು ಭೇಟಿ ನೀಡಿ ಪರಿಶೀಲಿಸಿದರು .ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂದಿದೆ.ತಕ್ಷಣವೇ ಅಗ್ನಿಶಾಮಕ ದಳದವರು ನಮ್ಮ ಪೊಲೀಸರು ಪರಿಶೀಲನೆ ಮಾಡಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ.
    ನೆಲಮಹಡಿಯಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಮಹಡಿಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ಒಂದು ಕುಟುಂಬದ ನಾಲ್ವರು ಮತ್ತೊಬ್ಬ ಸೇರಿ  ಐವರು ಕೆನ್ನಾಲಿಗೆಗೆ ಸಿಲುಕಿಕೊಂಡಿದ್ದಾರೆ.ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ನಮ್ಮ ರಕ್ಷಣಾ ತಂಡದವರು ಕಾರ್ಯಾಚರಣೆ ಕೈಗೊಂಡಿದ್ದರು ಎಂದು ಹೇಳಿದರು.
    ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದ ಮಹಡಿ ಮನೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಸ್ಥಳದಲ್ಲಿ ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿತ್ತಾದರೂ ಅದರೊಳಗೆ ಸಿಲುಕಿದ್ದ ಎಲ್ಲರೂ ಸಜೀವ ದಹನಗೊಂಡಿದ್ದಾರೆ.

    ಕರ್ನಾಟಕ ಪೋಲಿಸ್ Bengaluru ವಾಣಿಜ್ಯ ಸಜೀವ ದಹನ
    Share. Facebook Twitter Pinterest LinkedIn Tumblr Email WhatsApp
    Previous Articleಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    Next Article ದರ್ಶನ್ ಯಾವ ಜೈಲಿಗೆ ಹೋಗ್ತಾರೆ ಗೊತ್ತಾ?
    vartha chakra
    • Website

    Related Posts

    ಕಾಮುಕ ಯೋಗಗುರು ಅರೆಸ್ಟ್.

    September 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    September 18, 2025

    ಇವರಿಗೆ ಬೆಂಗಳೂರು ಬೇಡವಂತೆ.

    September 18, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prague-drugs-353 on ಚಿಕನ್ ಕಬಾಬ್ ಗೆ ಬಣ್ಣ ಹಾಕಿದರೆ ಏನಾಗುತ್ತೆ ಗೊತ್ತಾ.
    • prague-drugs-606 on ವಿದ್ಯುತ್ ಬೇಡಿಕೆ-ಪೂರೈಕೆ ಸಮತೋಲನಕ್ಕೆ ಕ್ರಿಯಾ ಯೋಜನೆ | Karnataka
    • prague-drugs-355 on ಅಪ್ಪ,ಮಗನಿಗೆ ಹೆದರುವ ಮಗ ನಾನಲ್ಲ ಎಂದ ಯತ್ನಾಳ್ | Yatnal
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    September 18, 2025

    ಕಾಮುಕ ಯೋಗಗುರು ಅರೆಸ್ಟ್.

    September 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    September 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe