Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಳೆ ಹಾನಿ ಸಂತ್ರಸ್ತರಿಗೆ 250 ಕೋಟಿ ತುರ್ತು ಪರಿಹಾರ
    ಸುದ್ದಿ

    ಮಳೆ ಹಾನಿ ಸಂತ್ರಸ್ತರಿಗೆ 250 ಕೋಟಿ ತುರ್ತು ಪರಿಹಾರ

    vartha chakraBy vartha chakraAugust 30, 2022Updated:August 30, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Rain damage
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.30-
    ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ನೆರವು ಮತ್ತು ಪರಿಹಾರ ಕಾರ್ಯಕ್ಕೆ 250 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ ಎಂದು ಕಂದಾಯ ಮಂತ್ರಿ ಆರ್. ಅಶೋಕ ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಹಾರ ಕಾರ್ಯಕ್ಕಾಗಿ ಕೇಂದ್ರದಿಂದಲೂ ನಮಗೆ ಎಲ್ಲಾ ರೀತಿಯ ನೆರವು ಸಿಗಲಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ನಾವು ಹೆಚ್ಚಿನ ಪರಿಹಾರವನ್ನು ಕೊಟ್ಟಿದ್ದೇವೆ. ಸಂತ್ರಸ್ತರಿಗೆ ನೇರವಾಗಿ ಅವರ ಖಾತೆಗೆ ಪರಿಹಾರ ನೀಡಲು ಜಿಲ್ಲಾಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
    ಮಳೆಯಿಂದ ಹಾನಿಗೊಳಗಾಗಿರುವ ಪರಿಹಾರದ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಹೆಚ್ಚಿನ ಅನುದಾನ ಒದಗಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಜುಲೈನಿಂದ ಮಳೆಯಿಂದಾಗಿ 7647 ಕೋಟಿ ನಷ್ಟವಾಗಿದೆ.
    ಕೇಂದ್ರದಿಂದ ನಮಗೆ ಎನ್ಡಿಆರ್‌ಎಫ್ನಡಿ 1012 ಕೋಟಿ ಬಂದರೆ ತಕ್ಷಣವೇ ಸಂತ್ರಸ್ತರಿಗೆ ಬಿಡುಗಡೆ ಮಾಡಲಾಗುವುದು. ಜುಲೈ ಮತ್ತು ಆಗಸ್ಟ್ ತಿಂಗಳ ಮಧ್ಯದಲ್ಲಿ 3,10,083 ಹೆಕ್ಟೇರ್ ಕೃಷಿ ಬೆಳೆ, 20,195 ಹೆಕ್ಟೇರ್ ತೋಟಗಾರಿಕೆ, 20,551 ಹೆಕ್ಟೇರ್ ಬಹುವಾರ್ಷಿಕ ಬೆಳೆ, 0.84 ಹೆಕ್ಟೇರ್ ಮೆಕ್ಕಲು ಭೂಮಿ, 0.13 ಹೆಕ್ಟೇರ್ ರೇಷ್ಮೆ, 467 ಜಾನುವಾರು, 24,408 ಮನೆಗಳು, 22,734 ಕಿ.ಮೀ. ರಸ್ತೆ, 4,159 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿ ನಷ್ಟವಾಗಿದೆ ಎಂದು ವಿವರಿಸಿದರು.
    ರಾಜ್ಯದ ಒಟ್ಟು 7 ಕಡೆ ಹೊಸ ಕ್ಯಾಂಪ್ಗಳನ್ನು ತೆರೆಯಲಾಗಿದೆ. ರಾಜ್ಯಾದ್ಯಂತ ಸಂತ್ರಸ್ತರ ರಕ್ಷಣೆಗಾಗಿ ಐದು ಎನ್ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದರು.
    ಮೂರು ದಿನ ಮಳೆ ;
    ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ ಮುಂಜಾಗ್ರತಾ ಕ್ರಮವಾಗಿ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಎಲ್ಲವನ್ನೂ ತೆಗೆದುಕೊಂಡಿದ್ದೇವೆ ಎಂದರು.
    ಕಳೆದ 24 ಗಂಟೆಗಳ ಅವಯಲ್ಲಿ 890 ಮಿಲಿಮೀಟರ್ ಮಳೆಯಾಗಿದ್ದು, 27 ಜಿಲ್ಲೆಗಳಲ್ಲಿ ಇದರ ಪ್ರಮಾಣ ವ್ಯಾಪಕವಾಗಿದೆ. ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುವುದರಿಂದ ಕೆಲವು ಕಡೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.
    ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಯಲ್ಲಿ 9ಮಿಮೀ ಮಳೆಯಾಗಿದೆ. ಕೇವಲ 24 ಗಂಟೆ ಅವಯಲ್ಲಿ 24 ಹಳ್ಳಿಗಳಲ್ಲಿ ಭಾರೀ ಪ್ರಮಾಣದ ಹಾನಿಯಾಗಿದೆ. ರಾಮನಗರದಲ್ಲಿ ಇಬ್ಬರು ಹಾಗೂ ಹಾವೇರಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವಿವರಿಸಿದರು.
    ಕಳೆದ ಜೂನ್ ತಿಂಗಳಿನಲ್ಲೇ 1187 ಹಳ್ಳಿಗಳಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದು, ಈವರೆಗೂ ಒಟ್ಟು 29,967 ಮಂದಿಗೆ ತೊಂದರೆಯಾಗಿದ್ದು, ಜೂನ್ ತಿಂಗಳಿನಿಂದ ಈವರೆಗೂ 96 ಜನ ಸಾವನ್ನಪ್ಪಿದ್ದಾರೆ ಎಂದು ಅಂಕಿ-ಅಂಶಗಳ ವಿವರ ನೀಡಿದರು.
    ಸುಮಾರು 9555 ಜನರನ್ನು ಸ್ಥಳಾಂತರ ಮಾಡಲಾಗಿದೆ. ಜೂನ್ನಿಂದ ಈವರೆಗೂ 5.8ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 1471 ಸೇತುವೆಗಳು ಹಾನಿಗೊಳಗಾಗಿವೆ, 2221 ವಿದ್ಯುತ್ ಕಂಬಗಳು, 2223 ಕಿ.ಮೀ.ರಸ್ತೆ ಹಾಳಾಗಿದೆ ಎಂದು ಅಶೋಕ್ ಮಾಹಿತಿ ನೀಡಿದರು

    Verbattle
    Verbattle
    Verbattle
    ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳತನ ಮಾಡ್ತಿದ್ದೋರ ಗ್ರಹಚಾರ ಕೆಟ್ಟಿತ್ತು
    Next Article ಲೈಗರ್ ನೋಡಿ ಕಣ್ಣೀರು ಸುರಿಸಿದ ವಿಜಯ್ ದೇವರಕೊಂಡ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • casino cz_qhEl on ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಮರ.
    • LinwoodGah on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.