ನವದೆಹಲಿ,ಸೆ.21- ರಸ್ತೆ ವಿಭಜಕದ ಮೇಲೆ ಮಲಗಿದ್ದವರ ಮೇಲೆ ಲಾರಿ ಹರಿದು ನಾಲ್ವರು ದಾರುಣವಾಗಿ ಸಾವನ್ನಪ್ಪಿ ಮೂವರು ಗಾಯಗೊಂಡಿರುವ ದುರ್ಘಟನೆ ಸೀಮಾಪುರಿಯಲ್ಲಿ ನಡೆದಿದೆ.
ಮೃತರನ್ನು ಕರೀಂ(52), ಚೋಟ್ಟೆ ಖಾನ್ಸ್(25), ಶಾ ಆಲಂ(38) ಮತ್ತು ರಾಹುಲ್(45) ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಮನೀಶ್(16) ಪ್ರದೀಪ್(30)ಸೇರಿ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ರಸ್ತೆ ವಿಭಜಕದ ಮೇಲೆ ಮಲಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಮೃತ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಓರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದು ಇನ್ನೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸೀಮಾಪುರಿ ಡಿಟಿಸಿ ಡಿಪೋವನ್ನು ಲಾರಿ ಹಾದು ಹೋಗುವಾ ಈ ದಾರುಣ ಘಟನೆ ನಡೆದಿದ್ದು ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿಪ್ರಕರಣವನ್ನು ದಾಖಲಿಸಿಕೊಂಡು ಅಪಘಾತ ನಡೆಸಿ ಪರಾರಿಯಾಗಿರುವ ವಾಹನ ಹಾಗೂ ಚಾಲಕನಿಗಾಗಿ ಶೋಧ ಕೈಗೊಂಡಿದ್ದಾರೆ.