Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
    Viral

    ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?

    vartha chakraBy vartha chakraFebruary 13, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..? ಹೀಗೊಂದು ಪ್ರಶ್ನೆ ರಾಜ್ಯದಲ್ಲಿ ವ್ಯಾಪ್ತವಾಗಿ ಚರ್ಚೆಯಾಗುತ್ತಿದೆ ಇದಕ್ಕೆ ಪ್ರಮುಖ ಕಾರಣ ರಾಜ್ಯದ ಉನ್ನತ ಹುದ್ದೆಯಲ್ಲಿರುವ ನಾಯಕರೊಬ್ಬರು ಮಾಡಿರುವ ಪೋಸ್ಟ್.
    ಪ್ರಯತ್ನ ಫಲಿಸದಿರಬಹುದು‌, ಆದರೆ ಪೂಜೆ ನಿಜಕ್ಕೂ ಫಲಿತಾಂಶ ನೀಡಲಿದೆ ಎಂಬ ವಿಶ್ವಾಸ ತಮಗಿದೆ ಎಂಬ ಅರ್ಥದಲ್ಲಿ ಇವರು ಮಾಡಿರುವ ಪೋಸ್ಟ್ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
    ರಾಜಕಾರಣದಲ್ಲಿ ಕಠಿಣ ಪರಿಶ್ರಮ ಜನಪ್ರಿಯತೆ ಮತ್ತು ಸಂಘಟನಾ ಚಾತುರ್ಯವೇ ಎಂದೆಂದಿಗೂ ಅಧಿಕಾರವನ್ನು ತಂದುಕೊಡುವ ಮಂತ್ರ ಎನ್ನುವುದು ಹೆಜ್ಜೆ, ಹೆಜ್ಜೆಗೂ ಸಾಬೀತಾಗಿದೆ. ಕ್ಷಿಪ್ರ ಬೆಳವಣಿಗೆಗಳು ಅಚ್ಚರಿಯ ವಿದ್ಯಮಾನದಲ್ಲಿ ಅಧಿಕಾರ ಹಿಡಿದ ನಾಯಕರು ಅಷ್ಟೇ ಬೇಗ ಜನ ಮಾನಸದಿಂದ ಮರೆಯಾಗಿದ್ದಾರೆ.
    ಜನಪ್ರಿಯ ನಾಯಕ, ಸಂಘಟನಾ ಚತುರರು ಹಾಗೂ ದೊಡ್ಡ ಪ್ರಮಾಣದ ಹಿಂಬಾಲಕರ ಪಡೆಯನ್ನು ಹೊಂದಿರುವ ನಾಯಕರು ಕೆಲವೊಮ್ಮೆ ಹಿನ್ನಡೆ ಅನುಭವಿಸಿದರೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಯಶಸ್ಸನ್ನು ಗಳಿಸಿದ ಹಲವಾರು ಉದಾಹರಣೆಗಳು ಕಣ್ಣ ಮುಂದಿವೆ.
    ನಿರಂತರವಾಗಿ ದೇವಾಲಯಗಳಿಗೆ ಭೇಟಿ ನೀಡುವುದು ವಿಶೇಷ ಪೂಜೆ ಪುನಸ್ಕಾರಗಳಲ್ಲಿ ತೊಡಗುವುದು ಹೋಮ ಹವನಗಳನ್ನು ನಡೆಸುವುದು ಎಂದಿಗೂ ಅಧಿಕಾರವನ್ನು ತಂದು ಕೊಟ್ಟಿಲ್ಲ ಎನ್ನುವುದು ಸಾರ್ವತ್ರಿಕ ಸತ್ಯವಾಗಿದೆ.
    ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಪರಮ ದೈವ ಭಕ್ತ. ಔಪಚಾರಿಕವಾಗಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿರುವುದನ್ನು ಬಿಟ್ಟರೆ ಅವರೆಂದಿಗೂ ತಾವಾಗಿಯೇ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಹೋಮ ಹವನ ಗಳಲ್ಲಿ ಪಾಲ್ಗೊಂಡಿಲ್ಲ ಎನ್ನುವುದು ಗಮನಾರ್ಹ.
    ಇನ್ನು ರಾಜ್ಯದ ವಿಷಯಕ್ಕೆ ಬರುವುದಾದರೆ ಅತ್ಯಂತ ಹೆಚ್ಚು ಪೂಜೆ ಪುನಸ್ಕಾರ ವಿಶೇಷ ಹೋಮ ಹವನಗಳಲ್ಲಿ ತೊಡಗುವುದರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಕುಟುಂಬ ಸದಸ್ಯರು ನಿಲ್ಲುತ್ತಾರೆ. ಅದರಲ್ಲೂ ಮಾಜಿ ಮಂತ್ರಿ ರೇವಣ್ಣ ಅವರಂತೂ ಪೂಜೆ ಮಾಡದೆ ಮನೆಯಿಂದ ಹೊರಗೆ ಬರುವುದಿಲ್ಲ ರಾಹುಕಾಲ ನೋಡಿಯೇ ಅವರು ಹೆಜ್ಜೆ ಇಡುತ್ತಾರೆ ಹೀಗಿದ್ದರೂ ಅವರು ಕೆಲವೇ ವರ್ಷಗಳು ಮಾತ್ರ ಮಂತ್ರಿಯಾಗಿದ್ದರು ಅವರು ಮಾಡಿದ ಪೂಜೆ ನಡೆಸಿದ ಹೋಮ ಹವನಗಳನ್ನು ನೋಡಿದರೆ ಮಂತ್ರಿ, ಮುಖ್ಯಮಂತ್ರಿ ಅಲ್ಲ ದೇಶದ ಪ್ರಧಾನಿಯೇ ಆಗಬೇಕಿತ್ತು.
    ಹೀಗಾಗಿ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಪುನಸ್ಕಾರ ಮತ್ತು ಹೋಮ ಹವನಗಳನ್ನು ನಡೆಸುವುದು ನಮ್ಮ ಮನಸ್ಸಿನ ತೃಪ್ತಿ ಹಾಗೂ ಸಮಾಧಾನಕ್ಕಾಗಿ ಹೊರತು ಅವುಗಳು ಎಂದಿಗೂ ಅಧಿಕಾರವನ್ನು ತಂದು ಕೊಡುವುದಿಲ್ಲ ಎನ್ನುವುದು ಸಾರ್ವತ್ರಿಕ ಸತ್ಯ.

    ದೇವೇಗೌಡ ನರೇಂದ್ರ ಮೋದಿ Bengaluru ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರೈಲಿನ ಸೀಟಿಗಾಗಿ ಕೊಲೆ
    Next Article ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    May 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nohu90.careers on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Antoinette on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • can i order cheap pioglitazone on ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe